Siddeshwara Swamiji : ವೈಕುಂಠ ಏಕಾದಶಿಯ ದಿನ ಲಿಂಗೈಕ್ಯರಾದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನದ ವಿವರ
ವಿಜಯಪುರ, ಜನವರಿ 03: ಪ್ರವಚನಕಾರರು, ಲಕ್ಷಾಂತರ ಭಕ್ತ ಸಮೂಹ ಈ ಯುಗದ ನಡೆದಾಡುವ ದೇವರೆಂದೇ ಕರೆಯುತ್ತಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸಿದ್ದೇಶ್ವರ ಶ್ರೀಗಳು ಜ್ಞಾನಯೋಗಾಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ರೀಗಳ ಆರೋಗ್ಯ ಚೇತರಿಕೆಗಾಗಿ ಲಕ್ಷಾಂತರ ಭಕ್ತರು ಪ್ರಾರ್ಥಿಸಿದ್ದರು. ಆದರೆ ವೈಕುಂಠ ಏಕಾದಶಿಯ ಪುಣ್ಯ ದಿನದಂದು ಸಿದ್ದೇಶ್ವರ ಶ್ರೀಗಳು ಕೊನೆಯುಸಿರೆಳೆದಿದ್ದಾರೆ.
ವಿಜಯಪುರದ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾವಿರಾರು ಭಕ್ತರು ತಂಡೋಪಾದಿಯಲ್ಲಿ ಆಗಮಿಸಿ ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಸೈನಿಕ ಶಾಲೆಯ ಆವರಣದಲ್ಲಿ ಬೃಹತ್ ವೇದಿಕೆ ಹಾಕಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶ್ರೀಗಳ ಅಂತಿಮ ದರ್ಶನಕ್ಕೆ ಶ್ರೀಗಳ ಹುಟ್ಟೂರು ಬಿಜ್ಜರಗಿಯಿಂದ ವಿಜಯಪುರಕ್ಕೆ ಸಾವಿರಾರು ಜನರು ಆಗಮಿಸುತ್ತಿದ್ದು, ಬಿಜ್ಜರಗಿ ಗ್ರಾಮದಿಂದ ಹೊರಡಲು ಬಸ್, ಕ್ರೂಸರ್ಗಳ ವ್ಯವಸ್ಥೆ ಮಾಡಲಾಗಿದೆ. ಇನ್ನು ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೂಡ ಮಾಡಲಾಗಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಸಿದ್ದೇಶ್ವರ ಸಂಸ್ಥೆ ಹಾಗೂ ಬಿಎಲ್ಡಿಇ ಸಂಸ್ಥೆಯಿಂದ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಅಂತಿಮ ದರ್ಶನ ಬಳಿಕ ಮಧ್ಯಾಹ್ನ 3-4 ಗಂಟೆವರೆಗೆ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಸಂಜೆ 4 ಗಂಟೆಗೆ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರ ಜ್ಞಾನಯೋಗಾಶ್ರಮಕ್ಕೆ ರವಾನೆಯಾಗಲಿದ್ದು, ಮಂಗಳವಾರ ಸಂಜೆ 5 ಗಂಟೆಗೆ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸುವ ಬಗ್ಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಶ್ರೀಗಳ ಅಂತಿಮ ಕಾರ್ಯ ನೆರವೇರಿಸಲು 50ಕ್ಕೂ ಹೆಚ್ಚು ಸ್ವಾಮೀಜಿಗಳು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಗಾಗಿ ಐವರು ಎಸ್ಪಿ, 25 ಡಿವೈಎಸ್ಪಿಗಳು, 60 ಸಿಪಿಐ, 200 ಪಿಎಸ್ಐಗಳು, 1500 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications