Vijayapur: ತೆಪ್ಪ ಮುಗುಚಿ ಆರು ಜನ ಜಲಸಮಾಧಿ: 3 ಶವ ಪತ್ತೆ- ಮೂವರಿಗಾಗಿ ಹುಡುಕಾಟ
ವಿಜಯಪುರ ಜುಲೈ 3: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆರು ಜನ ಜೂಜುಕೋರರು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ್ ತಾಲೂಕಿನಲ್ಲಿ ನಡೆದಿದೆ.
ಬಳೂತಿ ಜಾಕ್ವೆಲ್ ಬಳಿಯ ಕೃಷ್ಣಾನದಿಯಲ್ಲಿ ಈ ದುರಂತ ಸಂಭವಿಸಿದ್ದು ಮೂವರ ಶವ ಪತ್ತೆಯಾಗಿದೆ. ಆದರೆ ಇನ್ನೂ ಮೂವರ ಶವ ಪತ್ತೆಯಾಗಿಲ್ಲ. ಶವ ಪತ್ತೆ ಕಾರ್ಯ ಇಂದು ಮುಂದುವರೆದಿದೆ.

ಮಂಗಳವಾರ (ಜುಲೈ 2) ಸಂಜೆ ನದಿ ತಟದಲ್ಲಿ ಇಸ್ಪೀಟ್ ಆಡುತ್ತಿದ್ದ ಜೂಜುಕೋರರ ಗುಂಪು ಪೊಲೀಸರು ಆಗಮಿಸುತ್ತಿದ್ದಂತೆ ಭಯದಿಂದ ಪರಾರಿಯಾಗಲು ಪ್ರಯತ್ನಿಸಿದೆ. ನದಿಯ ಬಳಿಯಲ್ಲಿದ್ದ ತೆಪ್ಪದಲ್ಲಿ ಕುಳಿತು ತರಾತುರಿಯಲ್ಲಿ ನದಿ ದಾಟಲು ಜೂಜುಕೋರರು ಮುಂದಾಗಿದ್ದಾರೆ. ಎಂಟು ಜನ ತೆಪ್ಪದಲ್ಲಿ ಕುಳಿತು ನದಿ ದಾಟಲು ಪ್ರಯತ್ನಿಸಿದ್ದಾರೆ.
ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ತೆಪ್ಪ ಮುಗುಚಿ ಎಂಟು ಜನ ನದಿಗೆ ಬಿದ್ದಿದ್ದಾರೆ. ಈ ಪೈಕಿ ಮೂವರ ಶವ ಪತ್ತೆಯಾಗಿದ್ದು ಮೂವರ ಶವ ಹುಡುಕಾಟ ನಡೆಸಲಾಗಿದೆ. ಇನ್ನಿಬ್ಬರು ಈಜಿ ದಡ ಸೇರಿದ್ದಾರೆ. ಕಳೆದ ದಿನ ಇಬ್ಬರ ಶವ ಪತ್ತೆಯಾಗಿತ್ತು. ಇಂದು ಒಂದು ಶವ ಪತ್ತೆಯಾಗಿದೆ. ಇನ್ನೂ ಮೂವರ ಶವ ಪತ್ತೆ ಮಾಡಬೇಕಿದೆ.
ಪೊಲೀಸರು ಆಗಮಿಸುವ ಭಯದಿಂದ ತಪ್ಪಿಸಿಕೊಳ್ಳಲು ಎಂಟು ಜನ ಜೂಜುಕೋರರು ನದಿ ನಡುಗಡ್ಡೆಯತ್ತ ತೆಪ್ಪದಲ್ಲಿ ಹೊರಟಿದ್ದಾರೆ. ಈ ವೇಳೆ ಜೋರಾಗಿ ಗಾಳಿ ಬೀಸಿದೆ. ಇದರಿಂದ ತೆಪ್ಪ ಮುಗುಚಿ ಬಿದ್ದಿದೆ. ಈ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಕಳೆದ ದಿನ ಇಬ್ಬರ ಶವ ಪತ್ತೆಯಾಗಿದ್ದು ಇಂದೂ ಕೂಡ ಶೋಧ ಕಾರ್ಯ ಮುಂದುವರೆದಿದೆ.
ಸ್ಥಳಕ್ಕೆ ಕೊಲ್ಹಾರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮೃತದೇಹಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನುಳಿದ ಮೂವರ ಮೃತದೇಹಕ್ಕಾಗಿ ಹುಟುಕಾಟ ಮುಂದುವರೆದಿದೆ. ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನೆವಣೆ, ಎಎಸ್ಪಿ ಶಂಕರ ಮಾರಿಹಾರ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ನದಿ ದಡದಲ್ಲಿ ಜನ ಜಮಾಯಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications