ವಿಜಯಪುರ ಜೈಲಿನಲ್ಲಿ ಶ್ರೀರಾಮೋತ್ಸವ: ಹಿಂದೂ ಕೈದಿಗಳ ಮೇಲೆ ಹಲ್ಲೆ ಆರೋಪ
ವಿಜಯಪುರ ಜನವರಿ 27: ಜೈಲಿನಲ್ಲಿ ಶ್ರೀರಾಮೋತ್ಸವ ಮಾಡಿದಕ್ಕೆ ಹಿಂದೂ ಕೈದಿಗಳ ಮೇಲೆ ಮುಸ್ಲಿಂ ಕೈದಿಗಳು ಹಲ್ಲೆ ಮಾಡಿದ್ದಾರೆನ್ನುವ ಆರೋಪ ವಿಜಯಪುರದಲ್ಲಿ ಕೇಳಿ ಬಂದಿದೆ.
ಜನವರಿ 22 ದೇಶದಲ್ಲಿ ಒಂದು ಐತಿಹಾಸಿಕ ದಿನ. ಇಡೀ ದೇಶ ಮಾತ್ರವಲ್ಲ ವಿದೇಶದಲ್ಲೂ ಶ್ರೀರಾಮೋತ್ಸವವನ್ನು ಆಚರಿಸಲಾಯಿತು. ಹಲವು ವರ್ಷಗಳ ಅಡೆತಡೆಗಳ ನಂತರ ಜನವರಿ 22ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ರಾಮ ಮಂದಿರದಲ್ಲಿ ರಾಮಲಲ್ಲಾನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಅದ್ದೂರಿಯಾಗಿ ಮಾಡಲಾಯಿತು. ಇದನ್ನು ಇಡೀ ದೇಶದ ಜನ ಕಣ್ತುಂಬಿಕೊಂಡರು.

ಸಾವಿರಾರು ಜನ ಅಯೋಧ್ಯೆಯಲ್ಲಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರೆ, ಹಲವೆಡೆ ಈ ದಿನವನ್ನು ಜನ ನೇರ ಪ್ರಸಾರದ ಮೂಲಕ ಕಂಡು ಖುಷಿಪಟ್ಟರು. ಈ ದಿನ ಶ್ರೀರಾಮನ ಭಕ್ತರು ದೇಶಾದ್ಯಂತ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದ್ದರು. ಅದರಂತೆ ವಿಜಯಪುರದ ಜೈಲಿನಲ್ಲಿಯೂ ಕೆಲ ಕೈದಿಗಳು ಜೈಲಿನಲ್ಲಿ ರಾಮೋತ್ಸವ ಆಚರಣೆ ಮಾಡಿದ್ದರು.
ಆದರೆ ಇದನ್ನು ಸಹಿಸಿದ ಕೆಲ ಮುಸ್ಲಿಂ ಕೈದಿಗಳು ಹಿಂದೂ ಕೈದಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನವ ಆರೋಪ ಕೇಳಿಬಂದಿದೆ. ವಿಜಯಪುರದ ಕೇಂದ್ರ ಕಾರಾಗೃಹದ ದರ್ಗಾ ಜೈಲಿನಲ್ಲಿ ಈ ಘಟನೆ ನಡೆದಿದೆ. ಜೈಲಿನಲ್ಲಿ ಕೆಲ ಕೈದಿಗಳು ಜನವರಿ 22ರಂದು ರಾಮೋತ್ಸವವನ್ನು ಆಚರಿಸಿದರು. ಈ ವೇಳೆ ಮುಸ್ಲಿಂ ಕೈದಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನೂ ಮಹಾರಾಷ್ಟ್ರ ಮೂಲದ ಪರಮೇಶ್ವರ ಜಾಧವ(ದೇವಾ), ರಮೇಶ ದಳವಿ, ಪ್ರದೀಪ ಮಾನೆ ಎಂಬ ಹಿಂದೂ ಕೈದಿಗಳು ಜೈಲಿನಲ್ಲಿ ಜನವರಿ 22ರಂದು ಶ್ರೀರಾಮೋತ್ಸವವನ್ನು ಆಚರಿಸಿದ್ದಾರೆ. ಇದರಿಂದ ಕೋಪಕೊಂಡ ಜೈಲರ್ ತನ್ನ ಕಚೇರಿಗೆ ಕರೆಸಿ ಮುಸ್ಲಿಂ ಕೈದಿಗಳಿಂದ ಹಲ್ಲೆ ಮಾಡಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲ್ನಲ್ಲಿರುವ ಶೇಖ್ ಅಹ್ಮದ್ ಹಾಗೂ ಸಹಚರರಿಂದ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮಾತ್ರವಲ್ಲದೆ ಜೈಲಿನಲ್ಲಿರುವ ಇತರ ಮುಸ್ಲಿಂ ಅಧಿಕಾರಿಗಳೂ ಸಾಥ್ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಆರೋಪ ಮಾಡಿರುವ ವೀಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಜೈಲರ್ ನಡೆಯನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಈ ಬಗ್ಗೆ ಸೂಕ್ತ ತಣಿಕೆ ಹಾಗೂ ಕ್ರಮಕ್ಕೆ ಒತ್ತಾಯಿಸಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications