ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ

|
Google Oneindia Kannada News

ವಿಜಯಪುರ, ಏಪ್ರಿಲ್ 29 ; ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯುತ್ತಿದೆ. ಈ ವೇಳೆ ಶಿಕ್ಷಕರಿಗೆ ಉತ್ತರ ಪತ್ರಿಕೆಯೊಂದು ಸಿಕ್ಕಿದ್ದು, ವಿದ್ಯಾರ್ಥಿ ಸಾಷ್ಟಾಂಗ ನಮಸ್ಕಾರ ಹಾಕಿದ್ದಾನೆ.

ವಿಜಯಪುರದ ಸ್ನೇಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೌಲ್ಯ ಮಾಪನದ ವೇಳೆ ಈ ಪತ್ರಿಕೆ ಪತ್ತೆಯಾಗಿದೆ. ಬಿಲ್ ಕಲೆಕ್ಟರ್ ಆಗಿ ಮುಂಬಡ್ತಿ ಪಡೆಯಲು ಒಂದು ಅಂಕ ನೀಡಿ ಎಂದು ಮನವಿ ಮಾಡಿರುವ ಈ ಪತ್ರಿಕೆ ಫೋಟೋ ವೈರಲ್ ಆಗಿದೆ.

Karnataka SSLC Result 2022 : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ; ಮೇ 2ನೇ ವಾರ ಫಲಿತಾಂಶ Karnataka SSLC Result 2022 : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ; ಮೇ 2ನೇ ವಾರ ಫಲಿತಾಂಶ

ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿರುವ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾನೆ. ಪರೀಕ್ಷೆಯಲ್ಲಿ ಪಾಸ್ ಆದರೆ ಬಿಲ್ ಕಲೆಕ್ಟರ್ ಆಗಿ ಬಡ್ತಿ ದೊರೆಯಲಿದೆ. ಅದಕ್ಕಾಗಿ ಶಿಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ವಿದ್ಯಾರ್ಥಿ ಮನವಿ ಮಾಡಿದ್ದಾನೆ.

ಹಾಸ್ಟಲ್‌ನಲ್ಲಿ ಬಿಯರ್‌ ಕುಡಿದು ಪಾರ್ಟಿ ಮಾಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಸ್ಟಲ್‌ನಲ್ಲಿ ಬಿಯರ್‌ ಕುಡಿದು ಪಾರ್ಟಿ ಮಾಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು

SSLC Exam Paper Valuation Teacher Found Funny Note by Student

ನನ್ನ ಪಾಸು ಮಾಡಿದರೆ ನಿಮಗೆ ದೇವರು ಒಳ್ಳೆಯದು ಮಾಡುತ್ತಾನೆ. ನಿಮ್ಮಿಂದ ನನಗೆ ಅನ್ನ ಸಿಕ್ಕಿದಂತಾಗುತ್ತದೆ. ಉತ್ತೀರ್ಣ ಮಾಡಿಕೊಡಿ. ನನಗೆ ಇದೊಂದೆ ಪೇಪರ್ ಪಾಸು ಆಗಬೇಕಿರುವುದು ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿದ್ದಾನೆ.

 ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಆಲ್ ದಿ ಬೆಸ್ಟ್ ಹೇಳಿದ ಸಚಿವ ಬಿ.ಸಿ. ನಾಗೇಶ್ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಆಲ್ ದಿ ಬೆಸ್ಟ್ ಹೇಳಿದ ಸಚಿವ ಬಿ.ಸಿ. ನಾಗೇಶ್

ಈ ಪತ್ರಿಕೆ ಮೌಲ್ಯ ಮಾಪನ ಕೈಗೊಂಡ ಶಿಕ್ಷಕರು ಉತ್ತರ ಪತ್ರಿಕೆ ಫೋಟೋ ತೆಗೆದು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಇದರಿಂದಾಗಿ ವಿದ್ಯಾರ್ಥಿ ಬರೆದ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

English summary
In the time of SSLC exam paper valuation teacher found paper student requested for one marks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X