ಬಿಜೆಪಿ ಶಾಸಕ ನಡಹಳ್ಳಿ ಮೇಲೆ ಎಂಬಿ ಪಾಟೀಲ್ ಬೆಂಬಲಿಗರಿಂದ ಹಲ್ಲೆ ಯತ್ನ
ವಿಜಯಪುರ, ಏಪ್ರಿಲ್ 13: ಸುದ್ದಿಗೋಷ್ಠಿ ನಡೆಸುತ್ತಿದ್ದ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ಮೇಲೆ ಗೃಹ ಸಚಿವ ಎಂಬಿ ಪಾಟೀಲ ಅವರ ಬೆಂಬಲಿಗರು ಹಲ್ಲೆಗೆ ಯತ್ನಿಸಿದ ಘಟನೆ ಶನಿವಾರ ವಿಜಯಪುರದಲ್ಲಿ ನಡೆದಿದೆ.
ಶಾಸಕ ನಡಹಳ್ಳಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸಭಾಂಗಣಕ್ಕೆ ನುಗ್ಗಿದ ಗುಂಪು ನಡಹಳ್ಳಿ ವಿರುದ್ಧ ಮತ್ತು ಎಂಬಿ ಪಾಟೀಲರ ಪರ ಘೋಷಣೆಗಳನ್ನು ಕೂಗಿ ಗೂಂಡಾವರ್ತನೆ ತೋರಿಸಿದರು.
ನಡಹಳ್ಳಿ ಹುಚ್ಚ, ಜೈ ಜೈ ಬಸವೇಶ ಮುಂತಾದ ಘೋಷಣೆಗಳನ್ನು ಕೂಗಿದರು. ಇದರಲ್ಲಿ ರಾಷ್ಟ್ರೀಯ ಬಸವ ದಳಸ ಕಾರ್ಯಕರ್ತರು ಕೂಡ ಇದ್ದರು ಎನ್ನಲಾಗಿದೆ.

ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಮತ್ತು ಎಂಬಿ ಪಾಟೀಲರ ವಿರುದ್ಧ ನಡಹಳ್ಳಿ ಅವರು ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈ ಹಲ್ಲೆಗೆ ಮುಂದಾಗಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ವಿಜಯಪುರ ಡಿವೈಎಸ್ಪಿ ಡಿ. ಅಶೋಕ್ ಮತ್ತು ಸಿಬ್ಬಂದಿ ಗುಂಪನ್ನು ಹೋಟೆಲ್ನಿಂದ ಹೊರಹಾಕಿತು. ಬಳಿಕ ನಡಹಳ್ಳಿ ಪತ್ರಿಕಾಗೋಷ್ಠಿ ಮುಂದುವರಿಸಿದರು.
'ಗೃಹಸಚಿವರೇ ತಮ್ಮ ಬೆಂಬಲಿಗರ ಮೂಲ ತಮ್ಮ ಮೇಲೆ ಗುಂಡಾಗಿರಿ ನಡೆಸಿದ್ದಾರೆ. ಇವರನ್ನು ಪ್ರಶ್ನೆ ಮಾಡಿದ್ದಕ್ಕೆ ಜೀವ ತೆಗೆಯುವಂತೆ ತಮ್ಮ ಬೆಂಬಲಿಗರಿಗೆ ಆದೇಶ ನೀಡಿದ್ದಾರೆಯೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇವರೇನು ಪ್ರಶ್ನಾತೀತರೇ? ಎಂದು ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications