ಟಿಪ್ಪು ಜಯಂತಿ: ಸಿದ್ದರಾಮಯ್ಯ ವಿರುದ್ದ 'ತಿರುಗಿಬಿದ್ದ' ಸಿ.ಎಂ.ಇಬ್ರಾಹಿಂ
Recommended Video
ವಿಜಯಪುರ, ಅ 29: ಟಿಪ್ಪು ಜಯಂತಿಗೆ ( ನ 10) ದಿನ ಹತ್ತಿರ ಬರುತ್ತಿದ್ದಂತೆಯೇ, ಮತ್ತೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಸಮರ ಆರಂಭವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಸರಕಾರದ ವತಿಯಿಂದ ಜಯಂತಿ ಆಚರಣೆ ನಡೆಸಲಾಗುವುದಿಲ್ಲ ಎಂದು ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ.
ಆದರೆ, ಕಾಂಗ್ರೆಸ್ ಮುಖಂಡ ಮತ್ತು ಎಂಎಲ್ಸಿ ಸಿ.ಎಂ.ಇಬ್ರಾಹಿಂ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ. "ಮೊದಲಿಗೆ, ಮುಸ್ಲಿಮರಲ್ಲಿ ಜಯಂತಿ ಆಚರಣೆ ಅನ್ನೋ ಸಂಪ್ರದಾಯವೇ ಇಲ್ಲ. ಅದು ತಪ್ಪು ಕಲ್ಪನೆ" ಎಂದು ಹೇಳಿದ್ದಾರೆ.
"ನಮ್ಮಲ್ಲಿ ಜಯಂತಿ ಅಂದರೆ ಏನು. ಅವರು ಹುಟ್ಟಿದ ದಿನದಂದು ಒಳ್ಳೆಯ ಜಾಗದಲ್ಲಿ, ಒಳ್ಳೆಯವರೆಲ್ಲಾ ಕೂತು ಅವರ ಗುಣಗಾನ ಮಾಡುವುದು" ಎಂದು ಪರೋಕ್ಷವಾಗಿ, ಟಿಪ್ಪು ಜಯಂತಿ ಆಚರಣೆ ಆರಂಭಿಸಿದ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಹರಿಹಾಯ್ಡಿದಿದ್ದಾರೆ.

"ಬಡವರಿಗೆ, ಅನಾಥ ಮಕ್ಕಳಿಗೆ ಅವರ ಹೆಸರಿನಲ್ಲಿ ಸಹಾಯ ಮಾಡುವುದು. ಮಾಡಿದ ಪುಣ್ಯದ ಕೆಲಸವನ್ನು ಭಗವಂತನಿಗೆ ತಲುಪಿಸುವಂತದ್ದು ನಮ್ಮ ಆಚರಣೆ. ನಮ್ಮಲ್ಲಿ ವಿಗ್ರಹ ಅನ್ನೋದೇ ಇಲ್ಲ" ಎಂದು ಇಬ್ರಾಹಿಂ ಹೇಳಿದ್ದಾರೆ.
"ಸಿದ್ದರಾಮಯ್ಯ ಜಯಂತಿ ಆಚರಣೆ ಮಾಡಿದ ರೀತಿಯೇ ತಪ್ಪು" ಎಂದಿರುವ ಇಬ್ರಾಹಿಂ, "ಬಜಾರ್ ನಲ್ಲಿ ಮೆರವಣಿಗೆ ಮಾಡುವ ಜಯಂತಿ ನಮ್ಮದಲ್ಲ" ಎಂದು ಇಬ್ರಾಹಿಂ ಹೇಳಿದ್ದಾರೆ.
"ಮೂರ್ತಿ ಪೂಜೆಯ ಸಂಪ್ರದಾಯ ನಮ್ಮಲಿಲ್ಲ. ಹಿಂದೆನೂ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ಬಿಜೆಪಿಯವರು ಸುಮ್ಮನೆ ಇದನ್ನು ವಿವಾದ ಮಾಡುತ್ತಿದ್ದಾರೆ. ಮಂತ್ರಾಲಯ ರಾಯರ ಮಠಕ್ಕೆ ಜಾಗ ನೀಡಿದವರು ಅಧೋನಿ ನವಾಬರು" ಎನ್ನುವುದನ್ನು ಬಿಜೆಪಿಯವರು ಅರಿತುಕೊಳ್ಳಲಿ" ಎಂದು ಸಿ.ಎಂ.ಇಬ್ರಾಹಿಂ, ಬಿಜೆಪಿಯನ್ನೂ ಟೀಕಿಸಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications