ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರ: ದಲಿತ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್!

|
Google Oneindia Kannada News

ವಿಜಯಪುರ, ಜುಲೈ 20: ಬೈಕ್ ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ, ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದ ದಲಿತ ಯುವಕನನ್ನು ಸಾಮೂಹಿಕವಾಗಿ ಹಲ್ಲೆ ನಡೆಸಿರುವ ಘಟನೆಗೆ ಟ್ವಿಸ್ಟ್ ಸಿಕ್ಕಿದೆ.

Recommended Video

Drone Prathap Warned by German Company BillzEye | Oneindia Kannada

ಮಿಣಜಗಿ ಗ್ರಾಮದ ಯುವಕ ಕಾಶೀನಾಥ ಯಂಕಪ್ಪ ತಳವಾರ (28) ಎಂಬುವವನು ಬಟ್ಟೆ ತೊಳೆಯುತ್ತಿದ್ದ ಮಹಿಳೆಯರನ್ನು ಚುಡಾಯಿಸುತ್ತಿದ್ದ, ಮಹಿಳೆಯರ ಎದುರು ಬಟ್ಟೆ ಬಿಚ್ಚಿ ನಿಂತು ಅಶ್ಲೀಲವಾಗಿ ವರ್ತಿಸುತ್ತಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರಿಂದ ಥಳಿತಕ್ಕೊಳಗಾಗಿದ್ದಾನೆ.

ವಿಜಯಪುರ: ಬೈಕ್ ಮುಟ್ಟಿದ್ದು ಮೈಲಿಗೆ ಎಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿತವಿಜಯಪುರ: ಬೈಕ್ ಮುಟ್ಟಿದ್ದು ಮೈಲಿಗೆ ಎಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ಯುವಕ ಕಾಶಿನಾಥ ಯಂಕಪ್ಪ ತಳವಾರ್ ಮೇಲೆ ಬಡಿಗೆ, ಚಪ್ಪಲಿಯಿಂದ ಥಳಿಸಲಾಗಿತ್ತು. ಈ ಕುರಿತು ಗ್ರಾಮದ 13 ಜನರ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ ದಾಖಲಾಗಿತ್ತು. ಅದೇ ರೀತಿ ಇಂದು ಕೂಡಾ ಯುವತಿಯಿಂದ ಹಲ್ಲೆಗೊಳಗಾದ ಕಾಶಿನಾಥನ ಮೇಲೆ ಈಗ ದೂರು ದಾಖಲಾಗಿದೆ.

Vijayapura: Twist For Assault Case On Dalit Youth

ಇಂದು ಇಡೀ ಪ್ರಕರಣಕ್ಕೆ ಬಾರಿ ಟ್ವಿಸ್ಟ್ ಸಿಕ್ಕಿದ್ದು, ಗ್ರಾಮದಲ್ಲಿ ಬಟ್ಟೆ ತೊಳೆಯಲು ಹೋಗುತ್ತಿದ್ದ ಮಹಿಳೆ, ಯುವತಿಯರ ಮುಂದೆ ಬಟ್ಟೆ ಕಳಚಿ ನಿಲ್ಲುತ್ತಿದ್ದ ಕಾಶಿನಾಥ್, ಎರಡು-ಮೂರು ಬಾರಿ ಇದೇ ರೀತಿ ಮಹಿಳೆಯರ ಎದುರು ಅಶ್ಲೀಲವಾಗಿ ವರ್ತಿಸಿದ್ದ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ್ ಮಾಹಿತಿ ನೀಡಿದ್ದಾರೆ.

English summary
The incident of Assault of a Dalit youth in the village of Minajagi in Talikote Taluk in Vijayapur district has got a twist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X