Get Updates
Get notified of breaking news, exclusive insights, and must-see stories!

ಕರ್ನಾಟಕದ ಈ ವಿಮಾನ ನಿಲ್ದಾಣ ಉದ್ಘಾಟನೆ ಇನ್ನಷ್ಟು ವಿಳಂಬ

ವಿಜಯಪುರ, ಫೆಬ್ರವರಿ 03: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೊಂಡು ವಿಮಾನಗಳು ಸಂಚಾರ ನಡೆಸುತ್ತಿವೆ. ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಚರ್ಚೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣ ಮಾಡಬೇಕು? ಎಂದು ಸ್ಥಳವನ್ನು ಅಂತಿಮಗೊಳಿಸಲಾಗುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಂಡಿರುವ ಕರ್ನಾಟಕದ ವಿಮಾನ ನಿಲ್ದಾಣವೊಂದರ ಉದ್ಘಾಟನೆ ಇನ್ನಷ್ಟು ವಿಳಂಬವಾಗಲಿದೆ. 2021ರ ಫೆಬ್ರವರಿಯಲ್ಲಿ ಈ ವಿಮಾನ ನಿಲ್ದಾಣ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು.

ಉತ್ತರ ಕರ್ನಾಟಕ ಭಾಗಕ್ಕೆ ಮತ್ತೊಂದು ವಿಮಾನ ನಿಲ್ದಾಣ ಸಿಗಲಿದೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜಾಗಿದೆ. ಆದರೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂಕೋರ್ಟ್ ಮೊರೆ ಹೋಗಿರುವ ಕಾರಣ ನಿಲ್ದಾಣದ ಉದ್ಘಾಟನೆ ಇನ್ನೂ ಮೂರು ತಿಂಗಳು ವಿಳಂಬವಾಗಲಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕ ಸರ್ಕಾರ ಈಗಾಗಲೇ ಈ ವಿಮಾನ ನಿಲ್ದಾಣಕ್ಕೆ 'ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ' ಎಂದು ನಾಮಕರಣ ಮಾಡಲು ಸಹ ಒಪ್ಪಿಗೆ ನೀಡಿದೆ.

Vijayapura Airport Inauguration May Delay

ಬಿ. ಎಸ್. ಯಡಿಯೂರಪ್ಪ 2008ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ವಿಜಯಪುರ ವಿಮಾನ ನಿಲ್ದಾಣದ ಕನಸಿಗೆ ರೆಕ್ಕೆ ಬಂದಿತು. ಯೋಜನೆಗಾಗಿ ಅವರು ವಿಜಯಪುರ ತಾಲೂಕಿನ ಮದಭಾವಿ ಬಳಿ ಭೂಮಿಪೂಜೆ ಮಾಡಿದ್ದರು. ರೈತರ 379.08 ಎಕರೆ, ಸರ್ಕಾರದ 47.33 ಎಕರೆ ಜಮೀನು ಸೇರಿ ಒಟ್ಟು 727.01 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಯೋಜನೆ ರೂಪಿಸಲಾಗಿತ್ತು. ಆದರೆ ಕಾಮಗಾರಿ ಆರಂಭವಾಗಲೇ ಇಲ್ಲ.

2021ರ ಫೆಬ್ರವರಿಯಲ್ಲಿ ಯಡಿಯೂರಪ್ಪ ಮತ್ತೆ ಸಿಎಂ ಆಗಿದ್ದಾಗ ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಿವಮೊಗ್ಗದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕು ಸ್ಥಾಪನೆ ಮಾಡಿದ್ದರು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿ ಪ್ರಧಾನಿ ನರೇಂದ್ರ ಮೋದಿ 27/2/2023ರಂದು ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ್ದಾರೆ. ಆದರೆ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ ಯಾವಾಗ? ಎಂಬುದು ಜನರ ಪ್ರಶ್ನೆ.

ಸುಪ್ರೀಂಕೋರ್ಟ್‌ಗೆ ಅರ್ಜಿ: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹಸಿರು ಪೀಠದಿಂದ ಅನುಮತಿ ಪಡೆದಿಲ್ಲ ಎಂದು ಬೆಂಗಳೂರು ಮೂಲದ ಎನ್‌ಜಿಒ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಆದ್ದರಿಂದ ಇನ್ನೂ 2-3 ತಿಂಗಳ ಬಳಿಕ ಎಲ್ಲಾ ಒಪ್ಪಿಗೆಯನ್ನು ಪಡೆದು ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಾಗುತ್ತದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳ ತಂಡ ಈಗಾಗಲೇ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಫೈರ್ ಫೈಟರ್ಸ್‌ ವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಇದರ ವ್ಯವಸ್ಥೆಯನ್ನು ಸರ್ಕಾರ ಮಾಡಲಿದೆ. ಆದರೆ ಕೋರ್ಟ್‌ ಒಪ್ಪಿಗೆ ಸಿಗುವ ತನಕ ನಿಲ್ದಾಣ ಉದ್ಘಾಟನೆ ಆಗುವುದಿಲ್ಲ.

ವಿಮಾನ ನಿಲ್ದಾಣಕ್ಕೆ ಶಂಕು ಸ್ಥಾಪನೆ ಮಾಡಿ ಮಾತನಾಡಿದ್ದ ಬಿ. ಎಸ್. ಯಡಿಯೂರಪ್ಪ, "ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗವಕಾಶ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಸಂಪರ್ಕ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿಯಾಗಲಿದೆ" ಎಂದು ಹೇಳಿದ್ದರು.

ಯೋಜನೆ ಆರಂಭ ಮಾಡುವಾಗ ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂಪಾಯಿ ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿತ್ತು, ಕಾಮಗಾರಿ ಆರಂಭಿಸಲಾಗಿತ್ತು. ನಂತರ 125 ಕೋಟಿ ರೂ. ಹೆಚ್ಚುವರಿ ವೆಚ್ಚದಲ್ಲಿ ಏರ್ ಬಸ್, ಕಾರ್ಗೋ ವಿಮಾನಗಳ ಸೇವೆಯೂ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಈಗ ರನ್‍ವೇ, ಎಸಿಟಿ, ಟ್ಯಾಕ್ಸಿ ವೇ, ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, ಸಂಪರ್ಕ ರಸ್ತೆಗಳ ಕಾಮಗಾರಿ ಮುಕ್ತಾಯಗೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+