ಪೈಲಟ್ ಆಗಿ ಅತ್ಯದ್ಭುತ ಸಾಧನೆ ಮಾಡಿದ ವಿಜಯಪುರ ಜಿಲ್ಲೆಯ 18 ವರ್ಷದ ಯುವತಿ; ಹಿನ್ನೆಲೆ ಏನು ಗೊತ್ತಾ?
ವಿಜಯಪುರ, ಡಿಸೆಂಬರ್, 04: ಕೆಲವರು ಎಷ್ಟೇ ಶ್ರೀಮಂತರಿದ್ದರೂ ಕೂಡ ಯಾವುದೇ ಸಾಧನೆಗೆ ಕೈಹಾಕದೇ ಸುಮ್ಮನೆ ಜಾಲಿ ಮಾಡ್ಕೊಂಡ್ ಜೀವನ ಕಳೆಯುತ್ತಾರೆ. ಇನ್ನೂ ಮತ್ತೊಂದು ವರ್ಗದವರಿಗೆ ಹಣ ಇಲ್ಲದಿದ್ದರೂ ಕೂಡ ತಮಗೆ ಎಷ್ಟೇ ಕಷ್ಟವಾದರೂ ತಾವು ಕಂಡ ಕನಸ್ಸನ್ನು ಈಡೇರಿಸಿಕೊಳ್ಳುವವರಿಗೆ ಬಿಡುವುದಿಲ್ಲ. ಹಾಗೆಯೇ 18 ವರ್ಷದ ಯುವತಿಯೊಬ್ಬಳು ಇತಿಹಾಸನ ಸೃಷ್ಟಿಸಿದ ಘಟನೆ ವಿಯಪುರ ಜಿಲ್ಲೆಯಲ್ಲಿ ನಡೆದಿದೆ.
ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಉದ್ಯಮಿ ಅಮೀನ್ ಹುಲ್ಲೂರ್ ಅವರ ಪುತ್ರಿ ಸಮೈರಾ ಹುಲ್ಲೂರು (18) ಅವರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆ ಮಾತ್ರ ಅಲ್ಲದೆ, ರಾಜ್ಯದ ಘತನೆಯನ್ನು ಹೆಚ್ಚಿಸಿದ್ದಾರೆ.

ಸಮೈರಾ ಅವರ ವಾಯುಯಾನ ಪ್ರಯಾಣವು ವಿನೋದ್ ಯಾದವ್ ಏವಿಯೇಷನ್ ಅಕಾಡೆಮಿಯಲ್ಲಿ 6 ತಿಂಗಳ ತರಬೇತಿಯೊಂದಿದೆ ಪ್ರಾರಂಭ ಆಯಿತು. ಅಕಾಡೆಮಿ ಸಂಸ್ಥಾಪಕರಾದ ವಿನೋದ್ ಯಾದವ್ ಮತ್ತು ಕ್ಯಾಪ್ಟನ್ ತಪೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿ ಎಲ್ಲಾ ಸಿಪಿಎಲ್ ಪರೀಕ್ಷೆಗಳನ್ನು ಯಶಸ್ವಿಯಾಗಿ ಉತ್ತೀರ್ಣರಾದರು.
ತಮ್ಮ ಸಾಧನೆ ಬಗ್ಗೆ ಮಾತನಾಡಿದ ಸಮೈರಾ ಅವರು, ತರಬೇತಿಯು ತುಂಬಾ ಕಠಿಣ ಆಗಿತ್ತು. ಆದರೆ, ಬೋಧಕರ ನಿರಂತರ ಬೆಂಬಲ ಮತ್ತು ಮಾರ್ಗದರ್ಶನದಿಂದ ಅದು ಸುಲಭ ಆಯಿತು. ನನ್ನ ಸಾಧನೆಯ ಎಲ್ಲಾ ಶ್ರೇಯಸ್ಸು ಕ್ಯಾಪ್ಟನ್ ತಪೇಶ್ ಕುಮಾರ್ ಮತ್ತು ವಿನೋದ್ ಯಾದವ್ ಅವರಿಗ ಸಲ್ಲುತ್ತದೆ ಎಂದು ಸಮೈರಾ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಲಿಖಿತ ಪರೀಕ್ಷೆಗಳಲ್ಲಿ ಅತ್ಯದ್ಭುತ ಸಾಧನೆ ಮಾಡಿದ ಬಳಿಕ ಸಮೈರಾ ಅವರು, ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಕಾರ್ವರ್ ಏವಿಯೇಷನ್ ಅಕಾಡೆಮಿಯಲ್ಲಿ ವಿಮಾನ ತರಬೇತಿಗೆ ಹೋಗಿದ್ದರು. ಇಲ್ಲಿನ ತರಬೇತಿ ಅವರ ಕೌಶಲ್ಯವನ್ನು ಮತ್ತಷ್ಟು ಹಚ್ಚಳ ಮಾಡಿತ್ತು. ಕಾರ್ವರ್ ಏವಿಯೇಷನ್ ಅಕಾಡೆಮಿ ನನ್ನ ತಾಂತ್ರಿಕ ಪರಿಣತಿಯನ್ನು ಬಲಪಡಿಸಿತು. ಜೊತೆಗೆ ವಾಯುಯಾನ ಕುರಿತು ಮತ್ತಷ್ಟು ತಿಳಿದುಕೊಂಡಿದ್ದೆ. ಕ್ಯಾಪ್ಟನ್ ತಪೇಶ್ ಅವರ ಕಥೆಯು ದೊಡ್ಡ ಕನಸು ಕಾಣಲು ನನಗೆ ಪ್ರೇರಣೆ ನೀಡಿತು. ಬಳಿಕ ಎಲ್ಲವನ್ನೂ ಸವಾಲಾಗಿ ಸ್ವೀಕರಿಸಿದೆ ಎಂದರು.
ಯಾವುದೇ ವ್ಯಕ್ತಿಯ ಯಶಸ್ಸಿನ ಹಿಂದೆ ಕುಟುಂಬದ ಬೆಂಬಲ ಯಾವಾಗಲೂ ಪ್ರಮುಖವಾಗಿರುತ್ತದೆ. ಈ ಗುರಿಯನ್ನು ಸಾಧಿಸಲು ನನ್ನ ಪೋಷಕರು ಬೆನ್ನೆಲುಬಾಗಿ ನಿಂತು ಎಲ್ಲವನ್ನೂ ಮಾಡಿದ್ದಾರೆ. ದೃಢವಾದ ಇಚ್ಛೆ ಮತ್ತು ಕುಟುಂಬದ ಬೆಂಬಲ ಇದ್ದರೆ, ಯಾವುದೇ ಹುಡುಗಿ ತಮ್ಮ ಜೀವನದಲ್ಲಿ ದೊಡ್ಡ ಗುರಿಯನ್ನು ಸಾಧಿಸಬಹುದು ಎಂದು ಹೇಳಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications