ಉರ್ದು ಶಾಲೆ ಗೋಡೆ ಮೇಲೆ "ಜೈ ಶ್ರೀರಾಮ್': ಬಿಗುವಿನ ವಾತಾವರಣ
ವಿಜಯಪುರ, ಡಿಸೆಂಬರ್ 07 : ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾಗಿದ್ದ ಕೋಮುಗಲಭೆ ಈಗ ಉತ್ತರ ಕರ್ನಾಟಕದ ಕಡೆಗೂ ವ್ಯಾಪಿಸಿದಂತಿದೆ. ಇದಕ್ಕೆ ಉದಾಹರಣೆಯಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕೋಮುಸೌಹಾರ್ಧ ಹದಗೆಡುವಂತಹಾ ಘಟನೆಯೊಂದು ನಡೆದಿದೆ.
ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಗ್ರಾಮದಲ್ಲಿನ ಉರ್ದು ಶಾಲಾ ಕಟ್ಟಡ ಹಾಗೂ ನಾಮಫಲಕದ ಮೇಲೆ ಯಾರೊ ಕಿಡಿಗೇಡಿಗಳು 'ಜೈ ಶ್ರೀರಾಮ್' ಎಂದು ಬರೆದು ವಿವಾದ ಹುಟ್ಟುಹಾಕಿದ್ದಾರೆ.

ಉರ್ದು ಶಾಲೆಯ ಕಟ್ಟಡದ ಗೋಡೆಗಳ ಮೇಲೆ ಹಾಗೂ ಕಪ್ಪು ಹಲಗೆ ಮೇಲೆ ಜೈ ಶ್ರೀರಾಮ್ ಬರಹಗಳು ಕಾಣಿಸಿಕೊಂಡಿವೆ. ಬೆಳಿಗ್ಗೆ ಶಾಲೆ ಸುತ್ತ-ಮುತ್ತ ಇರುವ ಜನ ಗೋಡೆ ಮೇಲಿನ ಬರಹಗಳನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಮುಸ್ಲಿಂ ಹಾಗೂ ಹಿಂದೂ ಜನಸಂಖ್ಯೆ ಸಮ ಸಂಖ್ಯೆಯಲ್ಲಿರುವ ಈ ಗ್ರಾಮದಲ್ಲಿ ಈ ಘಟನೆ ಕೋಮುಸೌಯಾರ್ಧ್ಯಕ್ಕೆ ಧಕ್ಕೆ ತಂದೊಡ್ಡಿದೆ. ಮುದ್ದೆಬಿಹಾಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
More From
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications