ದಕ್ಷಿಣ-ಉತ್ತರ ಕರ್ನಾಟಕ ಸಂಪರ್ಕಿಸುವ ರೈಲಿಗೆ ಇಂದು ಚಾಲನೆ
ವಿಜಯಪುರ, ನವೆಂಬರ್ 11 : ವಿಜಯಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲಿಗೆ ಸೋಮವಾರ ಚಾಲನೆ ಸಿಗಲಿದೆ. ಮೀಟರ್ ಗೇಜ್ ಕಾಲದಲ್ಲಿ ಹುಬ್ಬಳ್ಳಿ-ಮಂಗಳೂರು ನಡುವೆ ರೈಲು ಸಂಚಾರ ನಡೆಸುತ್ತಿತ್ತು.
ಸೋಮವಾರ ಸಂಜೆ 6 ಗಂಟೆಗೆ ವಿಜಯಪುರದಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಹೊರಡಲಿದ್ದು, ಮಂಗಳವಾರ ಮಧ್ಯಾಹ್ನ 12.40ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣವನ್ನು ತಲುಪಲಿದೆ. ಉಭಯ ನಗರಗಳ ನಡುವೆ 06919/06920 ನಂಬರ್ ರೈಲು ಸಂಚಾರ ನಡೆಸಲಿದೆ.
ವಿಜಯಪುರ-ಬೆಂಗಳೂರು ರೈಲಿಗೆ ಚಾಲನೆ, ನಿಲ್ದಾಣಗಳು
ವಿಜಯಪುರದಿಂದ ಹೊರಡುವ ರೈಲು ಬಸವನಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಬಾದಾಮಿ, ಗದಗ, ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಅರಸೀಕರೆ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಬಂಟ್ವಾಳ, ಪಡೀಲ್ ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿದೆ.
ಬೆಂಗಳೂರು-ಹುಬ್ಬಳ್ಳಿ ನಡುವೆ ಹೊಸ ರೈಲು; 5 ಗಂಟೆಯಲ್ಲಿ ಪ್ರಯಾಣ
ಈ ರೈಲು ದಕ್ಷಿಣ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಹುಬ್ಬಳ್ಳಿ-ಮಂಗಳೂರು ನಡುವೆ ಮೀಟರ್ ಗೇಜ್ ಕಾಲದಲ್ಲಿ ರೈಲು ಸಂಚಾರ ನಡೆಸುತ್ತಿತ್ತು. ಈ ರೈಲನ್ನು ಪುನಃ ಆರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ಮನವಿ ಸಲ್ಲಿಸಲಾಗಿತ್ತು.
ಶಿವಮೊಗ್ಗದಿಂದ 3 ಹೊಸ ರೈಲು; ವೇಳಾಪಟ್ಟಿ, ನಿಲ್ದಾಣ
ಪ್ರತಿದಿನ ಮಂಗಳೂರು-ವಿಜಯಪುರ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ನಡೆಸಲಿದೆ. ಜನರ ಪ್ರತಿಕ್ರಿಯೆ ನೋಡಿಕೊಂಡು ರೈಲನ್ನು ಖಾಯಂಗೊಳಿಸುವ ಕುರಿತು ಇಲಾಖೆ ತೀರ್ಮಾನ ತೆಗೆದುಕೊಳ್ಳಲಿದೆ.
ವೇಳಾಪಟ್ಟಿ
* ಪ್ರತಿದಿನ ಸಂಜೆ 6 ಗಂಟೆಗೆ ವಿಜಯಪುರ ನಿಲ್ದಾಣದಿಂದ ರೈಲು ಹೊರಡಲಿದ್ದು, ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
* ಮಂಗಳೂರು ರೈಲು ನಿಲ್ದಾಣದಿಂದ ಸಂಜೆ 6.30ಕ್ಕೆ ರೈಲು ಹೊರಡಲಿದ್ದು, ಮರುದಿನ ಬೆಳಗ್ಗೆ 11.45ಕ್ಕೆ ವಿಜಯಪುರವನ್ನು ತಲುಪಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
14 ಬೋಗಿಗಳ ಈ ರೈಲಿನಲ್ಲಿ ಒಂದು ಎಸಿ 2 ಟೈರ್ ಕೋಚ್, ಒಂದು ಎಸಿ 3 ಟೈರ್ ಕೋಚ್, 6 ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚ್, 4 ಜನರಲ್ ಸೆಕೆಂಡ್ ಕ್ಲಾಸ್ ಕೋಚ್ ಹಾಗೂ ಎರಡು ಸೆಕೆಂಡ್ ಕ್ಲಾಸ್ ಲಗೇಜ್ ಕಂ ಬ್ರೇಕ್ ವ್ಯಾನ್ ಇರುತ್ತದೆ.