Breaking: ವಿಜಯಪುರ ಪಾಲಿಕೆಗೆ ಅ.28ರಂದು ಚುನಾವಣೆ
ವಿಜಯಪುರ, ಅಕ್ಟೋಬರ್ 04: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರದ ಸ್ಥಳಿಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಗೆ ಖಾಲಿ ಇರುವ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ.
ಸೋಮವಾರ ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 28ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ರವರೆಗೆ ಚುನಾವಣೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಕುರಿತು ಆ ಭಾಗದ ಜಿಲ್ಲಾಧಿಕಾರಿಗಳು 2022ರ ಅಕ್ಟೋಬರ್ 13ರಂದು ಅಧಿಸೂಚನೆ ಹೊರಡಿಸಲಿದೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ ಅಭ್ಯರ್ಥಿಗಳು ಅಕ್ಟೋಬರ್ 18ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮರುದಿನ ಅಕ್ಟೋಬರ್ 19ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೆಯ ದಿನಾಂಕ ನಿಗದಿ ಮಾಡಲಾಗಿದೆ.

ಮತದಾನವು ಅಕ್ಟೋಬರ್ 28ಕ್ಕೆ ನಡೆದರೆ, ಮರು ಮತದಾನವನ್ನು ಅಗತ್ಯಬಿದ್ದಲ್ಲಿ ಮಾತ್ರವೇ ಅಕ್ಟೋಬರ್ 30ರಂದು ನಡೆಸಲಾಗುವುದು. ಮರು ದಿನ ಅಂದರೆ ಅಕ್ಟೋಬರ್ 31ರಂದು ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದೆ.
ಜಿಲ್ಲಾಧಿಕಾರಿಗಳಿಗೆ ಸೂಚನೆ
ರಾಜ್ಯ ಚುನಾವಣಾ ಆಯೋಗವು ಹೊರಡಿಸಿದ ವೇಳಾಪಟ್ಟಿಯಂತೆ ಜಿಲ್ಲಾಧಿಕಾರಿಗಳು ಅನುಸರಿಸಬೇಕು. ಅಲ್ಲದೇ ಕರ್ನಾಟಕ ಪೌರ ನಿಗಮಗಳ (ಚುನಾವಣೆ) ನಿಯಮಗಳು, 1979ರ ನಿಯಮ 10 ಮತ್ತು ಕರ್ನಾಟಕ ಪೌರಸಭೆಗಳ ನಿಯಮಗಳು 1977ರ ನಿಯಮ 8ರ ಪ್ರಕಾರ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾವಣೆ ಅಧಿಸೂಚನೆಯನ್ನು ಪ್ರಪತ್ರದ ಮೂಲಕ ಹೊರಡಿಸಬೇಕು ಎಂದು ಆಯೋಗವು ಸೂಚಿಸಿದೆ.
ಕರ್ನಾಟಕ ರಾಜ್ಯ ಚುನಾವಣೆ ಆಯೋಗವು ಸೋಮವಾರದಂದೆ ರಾಜ್ಯದ 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಇದೇ ತಿಂಗಳಾಂತ್ಯಕ್ಕೆ ವಿವಿಧ ಚುನಾವಣೆಗಳನ್ನು ನಡೆಸಲು ಆಯೋಗವು ತೀರ್ಮಾನಿಸಿದ್ದು, ಆ ಬಗ್ಗೆ ಅಧಿಸೂಚನೆ ಹೊರಡಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications