ಪರಿಕ್ಕರ್ ಹೇಳಿಕೆ ಟ್ರಿಬ್ಯೂನಲ್ ಮುಂದೆ ಪ್ರಶ್ನಿಸುತ್ತೇವೆ: ಎಂಬಿ ಪಾಟೀಲ್
ವಿಜಯಪುರ, ಜನವರಿ 05: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಹಾದಾಯಿ ಹೋರಾಟಗಾರರಿಗೆ ಮೋಸ ಮಾಡಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಕ್ಕರ್ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ ಆದರೆ ಶಿಷ್ಟಾಚಾರ ಪ್ರಕಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಬೇಕು. ಡಿಪಿಎಪಿ ಪ್ರದೇಶಕ್ಕೆ ನೀರು ಮಾತ್ರ ಕೊಡುವುದಾಗಿ ಗೋವಾ ಹೇಳಿದೆ ಟ್ರಿಬ್ಯೂನಲ್ ನಲ್ಲಿ ಮಹಾದಾಯಿ ವಿಚಾರ ಇರುವಾಗ ಗೋವಾ ಸಿಎಂ ಈ ರೀತಿ ಹೇಳಬಾರದಿತ್ತು ಎಂದರು.
ಟ್ರಿಬ್ಯೂನಲ್ ಯಾವ ಆದೇಶವನ್ನ ನೀಡದಿರುವಾಗಿ ಗೋವಾ ಸಿಎಂ ಹೇಳಿಕೆ ನೀಡಿ ಜನರನ್ನ ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ನದಿ ಪಾತ್ರ ಪ್ರದೇಶಕ್ಕೆ ಮಾತ್ರ ನೀರು ಕೊಡುವುದಾಗಿ ಗೋವಾ ಹೇಳಿಕೆ ನೀಡಿದೆ ಆದರೆ ನಾನು ಉಳಿದ ಪ್ರದೇಶಕ್ಕೆ ನೀರು ಕೇಳುತ್ತಿದ್ದೇವೆ.

ಗೋವಾ ಮುಖ್ಯಮಂತ್ರಿಗಳ 1 ಟಿಎಂಸಿ ನೀರು ಕೊಡುವುದಾಗಿ ಹೇಳಿದ್ದಾರೆ ಫೆಬ್ರವರಿ 6 ರಿಂದ ವಿಚಾರಣೆ ಆರಂಭವಾಗಲಿದೆ ಈ ಬಗ್ಗೆ ಟ್ರಿಬ್ಯೂನಲ್ ನಲ್ಲಿ ಪ್ರಶ್ನೆ ಮಾಡಲಾಗುವುದು. ಕರ್ನಾಟಕದ ಜನರನ್ನು ಮೂರ್ಖರನ್ನಾಗಿ ಮಾಡುವ ಕಾರ್ಯವನ್ನು ಗೋವಾ ಸರ್ಕಾರ ಕೈಬಿಡಬೇಕು ಎಂದರು.
ಗೋವಾ ಸರ್ಕಾರದ ನಾಟಕವನ್ನು ನಾವು ಬಯಲು ಮಾಡುತ್ತೇವೆ ಕಾನೂನು ಹಾಗೂ ಜನರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಗೋವಾ ನಾಟಕವನ್ನ ತಿಳಿಸುತ್ತೇವೆ. ದಾರಿತಪ್ಪಿಸುವುದನ್ನು ಗೋವಾ ಸರ್ಕಾರ ಬಿಡಬೇಕು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ನೀರು ಕೊಡಲು ಬರುವುದಿಲ್ಲ ಎಂದು ಮೊದಲು ಗೋವಾ ಹೇಳಿದೆ ಇದೀಗ ಇನ್ ಬೇಸ್ ಪ್ರದೇಶಕ್ಕೆ ಮಾತ್ರ ನೀರು ಕೊಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಗೋವಾ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಜನವರಿ 16 ಒಳಗಾಗಿ ಈ ಬಗ್ಗೆ ಟ್ರಿಬ್ಯೂನಲ್ ಗೆ ಪತ್ರ ಬರೆಯುತ್ತೇವೆ, ನಾಡಕರ್ಣಿ ಅವರ ಹೇಳಿಕೆ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಆಗಸ್ಟ್ ನಲ್ಲಿ ಟ್ರಿಬ್ಯೂನಲ್ ತಿರ್ಪು ಬರಲಿದೆ. ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ತೀರ್ಪು ಬರುವ ಮೊದಲೆ ಈ ವಿಷಯವನ್ನು ಯಡಿಯೂರಪ್ಪ ಯಾಕೆ ಪ್ರಸ್ತಾಪ ಮಾಡಿದ್ದಾರೆ ಗೊತ್ತಿಲ್ಲ ಬಿಜೆಪಿಯವರು ರಾಜಕೀಯ ಮಾಡಲು ಈ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications