ಏ... ಎಂ.ಬಿ.ಪಾಟೀಲ ನಿನ್ನನ್ನು ಜೈಲಿಗೆ ಕಳಿಸಿಯೇ ತೀರುತ್ತೇನೆ: ಯಡಿಯೂರಪ್ಪ
ವಿಜಯಪುರ, ಡಿಸೆಂಬರ್: 02: ನಗರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಮೇಲೆ ಅಕ್ಷರ ಹರಿಹಾಯ್ದರು.
ಎಂ.ಬಿ.ಪಾಟೀಲರನ್ನು ಏಕವಚನದಲ್ಲಿ ಸಂಭೋದಿಸಿ ಮಾತನಾಡಿದ ಯಡಿಯೂರಪ್ಪ ಅವರು 'ನಿನ್ನನ್ನು ಜೈಲಿಗೆ ಕಳಿಸದಿದ್ದರೆ ನನ್ನ ಹೆಸರು ಯಡಿಯೂರಪ್ಪನೇ ಅಲ್ಲ' ಎಂದು ಸವಾಲ್ ಎಸೆದರು.
ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೆ ನೀರಾವರಿ ಹಗರಣಗಳನ್ನು ಬಯಲಿಗೆಳೆದು ಎಂ.ಬಿ.ಪಾಟೀಲರನ್ನು ಜೈಲಿಗೆ ಕಳಿಸಿಯೇ ತೀರುವುದಾಗಿ ಯಡಿಯೂರಪ್ಪ ಅವರು ವೇದಿಕೆ ಮೇಲೆ ಅಬ್ಬರಿಸಿದರು.

'ಎಂ.ಬಿ.ಪಾಟೀಲ್ ಸೊಕ್ಕಿನಿಂದ ಮೆರೆಯುತ್ತಿದ್ದಾನೆ, ಮುಖ್ಯಮಂತ್ರಿಯನ್ನು ಕಮಿಷನ್ ಏಜೆಂಟ್ ಎಂದರೆ ನೀನು ಮಾನನಷ್ಟ ಕೇಸ್ ಹಾಕ್ತೀಯಾ' ಏ.. ಎಂ ಬಿ ಪಾಟೀಲ ನಿಮ್ಮಂತವರನ್ನು ಬಾಳ ಜನರನ್ನು ನೋಡಿದ್ದೇನೆ ಇಂತಹ ಬೆದರಿಕೆಯನ್ನು ಬಿಟ್ಟುಬಿಡು ಮರಳಿನ ಜೊತೆಗೆ ಮಣ್ಣು ಸೇರಿಸಿ ಕೆಲಸ ಮಾಡಿಸಿರುವ ನಿನ್ನನ್ನು ದೇವರು ಕ್ಷಮಿಸೊದಿಲ್ಲ' ಎಂದು ರೋಷಾವೇಶದಲ್ಲಿ ಮಾತನಾಡಿದರು.
ಭಾಷಣದಲ್ಲಿ ಎಂ.ಬಿ.ಪಾಟೀಲರಿಗೆ ಎಚ್ಚರಿಕೆಯನ್ನೂ ನೀಡಿದ ಯಡಿಯೂರಪ್ಪ "ಎಂ.ಬಿ.ಪಾಟೀಲ ರಾಜಕೀಯ ದೊಂಬರಾಟ ನಿಲ್ಲಿಸಬೇಕು, ಇದು ಕೊನೆಯ ಎಚ್ಚರಿಕೆ, ಈ ಬಾರಿ ಚುನಾವಣೆಯಲ್ಲಿ ಎಂ.ಬಿ.ಪಾಟೀಲ್ ಮನೆಗೆ ಹೋಗುವುದು ನಿಶ್ಚಿತ, ನಮ್ಮ ಬಿಜೆಪಿ ಅಭ್ಯರ್ಥಿ ವಿಜಯಗೌಡ ಜಯಭೇರಿ ಬಾರಿಸುವುದು ನಿಶ್ಚಿತ ' ಎಂದರು. ಆ ಮೂಲಕ ವಿಜಯಗೌಡ ಅವರು ಅಧಿಕೃತ ಅಭ್ಯರ್ಥಿ ಎಂಬುದನ್ನೂ ಘೋಷಣೆ ಮಾಡಿಬಿಟ್ಟರು.
''ತನ್ನ ಮತ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕ್ರಮ ಇದೆ ಎಂದಿದ್ದಕ್ಕೆ ಎಂ.ಬಿ.ಪಾಟೀಲ್ ಕಾರ್ಯಕರ್ತನ್ನು ಸೆಳೆಯುವುದಕ್ಕೆ ತಾವು ಕಾಂಗ್ರೆಸ್ ಕಾರ್ಯಕ್ರಮ ಇಟ್ಕೊಂಡಿದ್ದಾರೆ, ಎಂ ಬಿ ಪಾಟೀಲ್ ರೇ ನಿಮಗೆ ಸವಾಲ್ ಹಾಕ್ತೆನೆ, ಮೋದಿ ಅವರ ಕಾಲು ಹಿಡಿದಾದ್ರೂ ಈ ಭಾಗದ ಕೃಷಾ ಕೊಳ್ಳದ ಯೋಜನೆ ಪೂರ್ಣಗೊಳಿಸುತ್ತೆವೆ' ಎಂದರು.

ಭಾಷಣದುದ್ದಕ್ಕೂ ಎಂ.ಬಿ.ಪಾಟೀಲರ ಮೇಲೆ ಹರಿಹಾಯ್ದ ಯಡಿಯೂರಪ್ಪ ಸಿದ್ದರಾಮಯ್ಯನವರನ್ನು ಮರೆತು ಪಾಟೀಲರನ್ನೇ ಗುರಿಯಾಗಿಸಿಕೊಂಡಿದ್ದು ಆಶ್ಚರ್ಯಕರ.
ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪಾಟೀಲರು, ಲಿಂಗಾಯತರ ಏಕೈಕ ನಾಯಕ ಎನಿಸಿಕೊಂಡಿದ್ದ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿರುವುದೇ ಯಡಿಯೂರಪ್ಪ ಅವರ ಸಿಟ್ಟಿಗೆ ಕಾರಣ ಎನ್ನಲಾಗುತ್ತಿದೆ.
ಪ್ರತ್ಯೇಕ ಧರ್ಮ ಬೇಡಿಕೆಯಿಂದಾಗಿ ಲಿಂಗಾಯತರಲ್ಲಿ ಎರಡು ಬಣ ಉಂಟಾಗಿದ್ದು, ಯುಡಿಯೂರಪ್ಪ ಅವರ ಮತ ಬ್ಯಾಂಕ್ ಒಡಿದಿದೆ ಹೀಗಾಗಿ ಯಡಿಯೂರಪ್ಪ ಅವರು ಪಾಟೀಲರ ಮೇಲೆ ಸಿಟ್ಟಾಗಿದ್ದಾರೆ ಎನ್ನಲಾಗುತ್ತಿದೆ.
ಮಾತಿನ ಮಧ್ಯೆ ಭಾವುಕರಾದ ಯಡಿಯೂರಪ್ಪ "ನಾನು ಸಣ್ಣ ವಯಸ್ಸಿಗೆ ತಾಯಿಯನ್ನು ಕಳೆದುಕೊಂಡವನು, ನಿಮ್ಮೆಲ್ಲರನ್ನು ತಾಯಿ ಎಂದು ತಿಳಿದಿದ್ದೇನೆ, ನಿತ್ಯ ಯಡಿಯೂರಪ್ಪನಿಗೆ ಒಳ್ಳೆದಾಗಲಿ ಎಂದು ಎರಡು ಹೂ ಹಾಕಿ ಪೂಜೆ ಸಲ್ಲಿಸಿ ತಾಯಂದಿರೆ' ಎಂದು ಕೈ ಮುಗಿದು ಬೇಡಿಕೊಂಡರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications