ಅಮೇರಿಕಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಗುಂಡೇಟಿಗೆ ಓರ್ವ ಬಲಿ.!
ವಾಷಿಂಗ್ಟನ್, ಮೇ 30: ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಸಾವಿಗೆ ಕಾರಣರಾದ ಬಿಳಿ ಪೊಲೀಸರ ಅಟ್ಟಹಾಸದ ವಿರುದ್ಧ ಮಿನ್ನಿಯಾಪೊಲಿಸ್ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಗುಂಡೇಟಿಗೆ ಓರ್ವ ಬಲಿಯಾಗಿದ್ದಾನೆ.
ಶನಿವಾರ ಬೆಳಗ್ಗೆ ಡೆಟ್ರಾಯಿಟ್ ಸಿಟಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದಾಗ, ಎಸ್.ಯು.ವಿ ನಲ್ಲಿದ್ದ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರ ಗುಂಪಿನ ಕಡೆಗೆ ಶೂಟ್ ಮಾಡಿದ ವ್ಯಕ್ತಿಗಾಗಿ ಪೊಲೀಸರು ಸದ್ಯ ಹುಡುಕಾಟ ನಡೆಸುತ್ತಿದ್ದಾರೆ.
ಅತ್ತ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಕುತ್ತಿಗೆ ಮೇಲೆ ಬಲವಾಗಿ ಮಂಡಿಯೂರಿ ಕ್ರೌರ್ಯ ಮೆರೆದಿದ್ದ 'ಬಿಳಿ' ಪೊಲೀಸ್ ಡೆರೆಕ್ ಚೌವಿನ್ ವಿರುದ್ಧ ಮರ್ಡರ್ ಕೇಸ್ ಹಾಕಲಾಗಿದ್ದು, ಬಂಧಿಸಲಾಗಿದೆ.

ಪ್ರತಿಭಟನೆ ನಡೆಯುತ್ತಿರುವುದೇಕೆ.?
ಬ್ಲಾಕ್ ಮ್ಯಾನ್ ಜಾರ್ಜ್ ಫ್ಲಾಯ್ಡ್ ಸಾವಿಗೆ ಬಿಳಿ ಪೊಲೀಸರ ಅಟ್ಟಹಾಸವನ್ನು ಖಂಡಿಸಿ ಮಿನ್ನಿಯಾಪೊಲಿಸ್ ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನೂರಾರು ಪ್ರತಿಭಟನಾಕಾರರು ವಾಣಿಜ್ಯ ಮಳಿಗೆಗಳಿಗೆ ಬೆಂಕಿ ಹೆಚ್ಚಿದ್ದಾರೆ. ಇದರಿಂದ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿದೆ.

ಇದೀಗ ಓರ್ವ ಬಲಿ
ಕಳೆದ ನಾಲ್ಕು ದಿನಗಳಿಂದ ನಡೆದ ಪ್ರತಿಭಟನೆಯಲ್ಲಿ ಆಸ್ತಿ-ಪಾಸ್ತಿಗೆ ಮಾತ್ರ ಹಾನಿಯುಂಟಾಗಿತ್ತು. ಆದ್ರೆ ಇಂದು ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ ಪರಿಣಾಮ, ಓರ್ವ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ. ಇದರಿಂದ ಅಲ್ಲಿನ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಟ್ವೀಟ್ ಮಾಡಿದ್ದ ಡೊನಾಲ್ಡ್ ಟ್ರಂಪ್
ಮಿನ್ನಿಯಾಪೊಲಿಸ್ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿ ಸ್ಥಾಪಿಸಲು ಮಿಲಿಟರಿ ನಿಯೋಜಿಸುವುದಾಗಿ ಟ್ವೀಟ್ ಮಾಡಿ ಪ್ರತಿಭಟನಾಕಾರರಿಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದರು.

ಜಾರ್ಜ್ ಫ್ಲಾಯ್ಡ್ ಸಾವು ಸಂಭವಿಸಿದ್ದು ಹೇಗೆ.?
ಕಳೆದ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ 46 ವರ್ಷ ವಯಸ್ಸಿನ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಮೇಲೆ 'ಬಿಳಿ' ಪೊಲೀಸರು ಅಟ್ಟಹಾಸ ಮೆರೆದಿದ್ದರು. ರಸ್ತೆ ಮೇಲೆ ಬಿದ್ದ 'ಬ್ಲಾಕ್' ಜಾರ್ಜ್ ಫ್ಲಾಯ್ಡ್ ಕುತ್ತಿಗೆಯ ಮೇಲೆ 'ಬಿಳಿ' ಪೊಲೀಸ್ ಹಲವು ನಿಮಿಷಗಳ ಕಾಲ ಬಲವಾಗಿ ಮಂಡಿಯೂರಿದ್ದ ಪರಿಣಾಮ, ಜಾರ್ಜ್ ಫ್ಲಾಯ್ಡ್ ಸಾವನ್ನಪ್ಪಿದ್ದರು.
''ಉಸಿರಾಡಲು ಸಾಧ್ಯವಾಗುತ್ತಿಲ್ಲ'', ''ನನ್ನನ್ನು ಕೊಲ್ಲಬೇಡಿ'' ಎಂದು ಪದೇ ಪದೇ ಜಾರ್ಜ್ ಫ್ಲಾಯ್ಡ್ ಹೇಳುತ್ತಿದ್ದರೂ, ಆತನ ಕುತ್ತಿಗೆಯ ಮೇಲಿಂದ 'ವೈಟ್' ಪೊಲೀಸ್ ಕಾಲು ತೆಗೆಯಲಿಲ್ಲ.
ಜಾರ್ಜ್ ಫ್ಲಾಯ್ಡ್ ಮೇಲೆ ಪೊಲೀಸರು ತೋರಿದ ಮೃಗೀಯ ವರ್ತನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನತೆ ಬಿಳಿ ಪೊಲೀಸರ ಅಟ್ಟಹಾಸವನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications