ಭಾರತಕ್ಕೆ ಗಡಿಪಾರು: ಮುಂಬೈ ದಾಳಿ ಆರೋಪಿ ರಾಣಾ ವಿರೋಧ
ವಾಷಿಂಗ್ಟನ್, ಫೆಬ್ರವರಿ 5: ಮುಂಬೈನಲ್ಲಿ 2008ರಲ್ಲಿ ನಡೆದ ಭಯೋತ್ಪಾದನಾ ದಾಳಿಯ ಪ್ರಮುಖ ಆರೋಪಿ, ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾ, ತನ್ನನ್ನು ಭಾರತಕ್ಕೆ ಗಡಿಪಾರು ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾನೆ. ತನ್ನ ಗಡಿಪಾರಿಗೆ ಕೋರಿರುವ ಅಪರಾಧ ಪ್ರಕರಣದಲ್ಲಿ ಈ ಹಿಂದೆಯೇ ತನ್ನನ್ನು ಖುಲಾಸೆಗೊಳಿಸಲಾಗಿದೆ ಎಂದು ಆತ ವಾದಿಸಿದ್ದಾನೆ.
2008ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಆರು ಮಂದಿ ಅಮೆರಿಕನ್ನರು ಸೇರಿದಂತೆ 166 ಮಂದಿ ಬಲಿಯಾಗಿದ್ದರು. ತಹವ್ವೂರ್ ರಾಣಾ ಇದರ ಪ್ರಮುಖ ಸಂಚುಕೋರನಾಗಿರುವ ಡೇವಿಡ್ ಕೋಲ್ಮನ್ ಹೆಡ್ಲಿಯ ಸ್ನೇಹಿತ. 59 ವರ್ಷದ ರಾಣಾನನ್ನು ಭಾರತದ ಮನವಿ ಮೇರೆಗೆ ಜೂನ್ 10ರಂದು ಲಾಸ್ ಏಂಜಲಿಸ್ನಲ್ಲಿ ಪುನಃ ಬಂಧಿಸಲಾಗಿತ್ತು.
ಪಾಕಿಸ್ತಾನದ ಲಷ್ಕರ್ ಎ ತಯಬಾ ಸಂಘಟನೆಯ ಉಗ್ರ ಹೆಡ್ಲಿ, ಈ ದಾಳಿಗಾಗಿ ಅಮೆರಿಕದಲ್ಲಿ 35 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಲಾಸ್ ಏಂಜಲಿಸ್ನ ಅಮೆರಿಕ ಜಿಲ್ಲಾ ನ್ಯಾಯಾಲಯದಲ್ಲಿ ರಾಣಾ, ತನ್ನ ಗಡಿಪಾರು ಮನವಿಗೆ ವಿರೋಧ ವ್ಯಕ್ತಪಡಿಸಿದ್ದಾನೆ.

ಭಾರತದೊಂದಿಗಿನ ಅಮೆರಿಕದ ಗಡಿಪಾರು ಒಪ್ಪಂದದ 6ನೇ ವಿಧಿ ಅಡಿಯ ಪ್ರಕಾರ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಸಾಧ್ಯವಿಲ್ಲ. ಏಕೆಂದರೆ ಗಡಿಪಾರು ಮಾಡುವ ಮನವಿಯಲ್ಲಿನ ಅಪರಾಧ ಪ್ರಕರಣದಲ್ಲಿ ಈ ಹಿಂದೆ ಆತನನ್ನು ಖುಲಾಸೆ ಮಾಡಲಾಗಿತ್ತು. ಒಪ್ಪಂದದ 9ನೇ ವಿಧಿ ಅಡಿಯಲ್ಲಿ ಆರೋಪಿಸಿರುವಂತೆ ರಾಣಾ ಅಪರಾಧ ಎಸಗಿದ್ದಾನೆ ಎಂಬುದನ್ನು ನಂಬಲು ಸರ್ಕಾರ ಸೂಕ್ತ ಕಾರಣಗಳನ್ನು ನೀಡಿಲ್ಲ. ಆದರೆ ಆತನ ಗಡಿಪಾರಿನ ಪರವಾಗಿ ಇರುವ ಅಮೆರಿಕ, ಶೀಘ್ರದಲ್ಲಿಯೇ ಈ ಕುರಿತು ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications