ಭಾರತದಲ್ಲಿ ಕೊವಿಡ್-19 ಲಸಿಕೆ ಉತ್ಪಾದಿಸಲು ಪ್ರಧಾನಿ ಮೋದಿ ಆಹ್ವಾನ
ನ್ಯೂಯಾರ್ಕ್, ಸೆಪ್ಟೆಂಬರ್ 25: ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೊವಿಡ್-19 ಲಸಿಕೆ ಉತ್ಪಾದನೆ ಮಾಡುವುದಕ್ಕೆ ಭಾರತಕ್ಕೆ ಬನ್ನಿ ಎಂದು ಅಂತಾರಾಷ್ಟ್ರೀಯ ಲಸಿಕೆ ಉತ್ಪಾದನಾ ಕಂಪನಿಗಳಿಗೆ ಆಹ್ವಾನ ನೀಡಿದ್ದಾರೆ.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿ ನಿಯಂತ್ರಿಸುವ ನಿಟ್ಟಿನಲ್ಲಿ ಭಾರತವು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಅಭಿವೃದ್ಧಿಯಾದರೆ, ವಿಶ್ವ ಅಭಿವೃದ್ಧಿಯಾಗುತ್ತದೆ. ಭಾರತ ಸುಧಾರಣೆಯಾದ್ರೆ ಇಡೀ ಜಗತ್ತು ಸುಧಾರಣೆಯಾಗುತ್ತದೆ. ಭಾರತದ ಅಭಿವೃದ್ಧಿಯಿಂದ ಪ್ರಪಂಚದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಕಳೆದ 1.5 ವರ್ಷಗಳಲ್ಲಿ ಇಡೀ ಜಗತ್ತು ಎದುರಿಸಿದ ಸಾಂಕ್ರಾಮಿಕ ಪಿಡುಗು 100 ವರ್ಷಗಳಲ್ಲೇ ಅತ್ಯಂತ ಕೆಟ್ಟದಾಗಿತ್ತು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಅಂತಾರಾಷ್ಟ್ರೀಯ ಕಂಪನಿಗಳಿಗೆ ಪ್ರಧಾನಿ ಆಹ್ವಾನ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಜಾಗತಿಕ ಆರ್ಥಿಕತೆಯನ್ನು ಮತ್ತಷ್ಟು ವೈವಿಧ್ಯಗೊಳಿಸುವುದನ್ನು ಕಲಿಸಿದೆ. ಜಾಗತಿಕ ಮೌಲ್ಯ ಸರಪಳಿಗಳ ವಿಸ್ತರಣೆ ಬಹಳ ಮುಖ್ಯವಾಗಿದೆ. ನಮ್ಮ ಆತ್ಮನಿರ್ಭರ ಭಾರತ ಅಭಿಯಾನವು ಈ ಭಾವನೆಯಿಂದ ಪ್ರೇರಿತವಾಗಿದೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಇಡೀ ಜಗತ್ತು ಒಂದಾಗಿ ಹೋರಾಡಬೇಕಿದೆ. ಪ್ರಪಂಚದಾದ್ಯಂತ ಇರುವ ಕೊವಿಡ್-19 ಲಸಿಕೆ ಉತ್ಪಾದಿಸುವ ಎಲ್ಲ ಅಂತಾರಾಷ್ಟ್ರೀಯ ಕಂಪನಿಗಳಿಗೆ ನಾನು ಆಹ್ವಾನ ನೀಡುತ್ತಿದ್ದೇನೆ. ಭಾರತಕ್ಕೆ ಬನ್ನಿ ಅಲ್ಲಿ ನಿಮ್ಮ ಲಸಿಕೆಯನ್ನು ಉತ್ಪಾದಿಸಿ ಎಂದು ಮೋದಿ ಕರೆ ನೀಡಿದ್ದಾರೆ.
12 ವರ್ಷ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ:
ಭಾರತವು ವಿಶ್ವದ ಮೊದಲ ಡಿಎನ್ಎ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ತಿಳಿಸಲು ನಾನು ಬಯಸುತ್ತೇನೆ. ಇದನ್ನು 12 ವರ್ಷಕ್ಕಿಂತ ಮೇಲ್ಪಟ್ಟ ಯಾರಿಗಾದರೂ ನೀಡಬಹುದು. ಒಂದು ಎಂಆರ್ಎನ್ಎ ಲಸಿಕೆ ಅಭಿವೃದ್ಧಿಯು ಅಂತಿಮ ಹಂತದಲ್ಲಿದೆ. ಭಾರತೀಯ ವಿಜ್ಞಾನಿಗಳು ಸಹ COVID19 ವಿರುದ್ಧ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.84.89 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 84.89 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 252 ದಿನಗಳಾಗಿದೆ. ಕಳೆದ 24 ಗಂಟೆಗಳಲ್ಲಿ 71,04,051 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದ್ದು, ಈವರೆಗೂ 84,89,29,160 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 82,57,88,115 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications