Breaking: ಜವಾಹಿರಿ ಹತ್ಯೆ, ಪ್ರತಿದಾಳಿ ಎಚ್ಚರಿಕೆ ಕೊಟ್ಟ ಅಮೆರಿಕ
ವಾಷಿಂಗ್ಟನ್, ಆ.03: ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹಿರಿ ಹತ್ಯೆ ನಂತರ ಅಮೆರಿಕ ಪ್ರತಿದಾಳಿ ನಡೆಯುವ ಎಚ್ಚರಿಕೆ ನೀಡಲಾಗಿದೆ. ಸ್ಟೇಟ್ ಡಿಪಾರ್ಟ್ಮೆಂಟ್ ವಿಶ್ವಾದ್ಯಂತ ಪ್ರತಿಕಾರದ ದಾಳಿ ನಡೆಯಬಹುದು ಎಂದು ಹೇಳಿದೆ.
ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್-ಜವಾಹಿರಿ ಹತನಾಗಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಣೆ ಮಾಡಿದ್ದರು.
"ಜುಲೈ 31, 2022 ರಂದು ನನ್ನ ನಿರ್ದೇಶನದ ಮೇರೆಗೆ ಯುನೈಟೆಡ್ ಸ್ಟೇಟ್ಸ್, ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ವೈಮಾನಿಕ ದಾಳಿಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿತು. ಇಲ್ಲಿ ಅಲ್ ಖೈದಾ ಅಮೀರ್ ಅಯ್ಮನ್ ಅಲ್-ಜವಾಹಿರಿಯನ್ನು ಹತ್ಯೆ ಮಾಡಲಾಯಿತು" ಎಂದು ಬೈಡನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದರು.

"ಅಲ್-ಜವಾಹಿರಿ ಸೆಪ್ಟೆಂಬರ್ 11, 2001 ರಂದು ಯುನೈಟೆಡ್ ಸ್ಟೇಟ್ಸ್ ನಲ್ಲಿ ನಡೆದ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬರಾಗಿದ್ದರು. ಯುನೈಟೆಡ್ ಸ್ಟೇಟ್ಸ್ ಮೇಲೆ ದಾಳಿ ಮಾಡಲು ತನ್ನ ಅನುಯಾಯಿಗಳನ್ನು ಒತ್ತಾಯಿಸುತ್ತಲೇ ಇದ್ದರು" ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಮಂಗಳವಾರ (ಸ್ಥಳೀಯ ಸಮಯ) ತಿಳಿಸಿದೆ.
"ಅಲ್-ಜವಾಹಿರಿಯ ಮರಣದ ನಂತರ, ಅಲ್-ಖೈದಾ ಬೆಂಬಲಿಗರು ಅಥವಾ ಅದರ ಅಂಗಸಂಸ್ಥೆಯ ಭಯೋತ್ಪಾದಕ ಸಂಘಟನೆಗಳು, ಅಮೆರಿಕಾದ ಮೇಲೆ, ಸಿಬ್ಬಂದಿ ಮೇಲೆ ಅಥವಾ ನಾಗರಿಕರ ಮೇಲೆ ದಾಳಿ ಮಾಡಲು ಪ್ರಯತ್ನಿಸಬಹುದು' ಎಂದಿದೆ.
'ಭಯೋತ್ಪಾದಕ ದಾಳಿಗಳು ಎಚ್ಚರಿಕೆಯಿಲ್ಲದೆ ಆಗಾಗ್ಗೆ ಸಂಭವಿಸುವುದರಿಂದ, ಅಮೆರಿಕಾದ ನಾಗರಿಕರು ಜಾಗರೂಕತೆಯಿಂದ ಸುರಕ್ಷಿತವಾಗಿರಬೇಕು ಮತ್ತು ವಿದೇಶಕ್ಕೆ ಪ್ರಯಾಣಿಸುವಾಗ ಎಚ್ಚರಿಕೆಯಿಂದ ಇರಬೇಕು" ಎಂದು ಹೇಳಿದೆ.
ಜವಾಹಿರಿ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದರು. ಸೆಪ್ಟೆಂಬರ್ 11, 2001 ರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಅವರನ್ನು ಅಫ್ಘಾನ್ ರಾಜಧಾನಿ ಕಾಬೂಲ್ನಲ್ಲಿ ಯುಎಸ್ ನಡೆಸಿದ ಡ್ರೋನ್ ದಾಳಿಯಲ್ಲಿ ಕೊಲ್ಲಲಾಯಿತು.
ಈಜಿಪ್ಟಿನ ಶಸ್ತ್ರಚಿಕಿತ್ಸಕರಾದ ಜವಾಹಿರಿ ಅವರು 9/11 ರ ದಾಳಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು. ಜೊತೆಗೆ ಒಸಾಮಾ ಬಿನ್ ಲಾಡೆನ್ಸ್ ಅವರ ವೈಯಕ್ತಿಕ ವೈದ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.
ಇನ್ನು, ತಾಲಿಬಾನ್ ಕೂಡ ಜವಾಹಿರಿಯ ಹತ್ಯೆಯನ್ನು ದೃಢಪಡಿಸಿ, ಅಮೆರಿಕಾ ನಡೆಸಿದ ಡ್ರೋನ್ ದಾಳಿಯನ್ನು ಖಂಡಿಸಿತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications