Breaking: ಜವಾಹಿರಿ ಹತ್ಯೆ, ನ್ಯಾಯ ದೊರೆತಿದೆ ಎಂದ ಒಬಾಮ
ವಾಷಿಂಗ್ಟನ್, ಆ.02: ಅಫ್ಘಾನಿಸ್ತಾನದಲ್ಲಿ ಅಮೆರಿಕ ನಡೆಸಿರುವ ಡ್ರೋನ್ ದಾಳಿಯಲ್ಲಿ ಅಲ್-ಖೈದಾ ಮುಖ್ಯಸ್ಥ ಐಮನ್ ಅಲ್-ಜವಾಹಿರಿ ಹತ್ಯೆ ಮಾಡಲಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಈ ದಾಳಿಯನ್ನು ಸ್ವಾಗತಿಸಿದ್ದಾರೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಐಮನ್ ಅಲ್-ಜವಾಹಿರಿ ಕೊಲ್ಲಲ್ಪಟ್ಟರು. ಅಫ್ಘಾನಿಸ್ತಾನದಲ್ಲಿ ಯುದ್ಧ ಮಾಡದೇ ಭಯೋತ್ಪಾದನೆ ವಿರುದ್ಧ ಹೋರಾಡುವುದು ಸಾಧ್ಯ ಎಂಬುದಕ್ಕೆ ಈ ಹತ್ಯೆ ಸಾಕ್ಷಿಯಾಗಿದೆ ಎಂದು ಬರಾಕ್ ಒಬಾಮಾ ಹೇಳಿದ್ದಾರೆ.
"9/11 ರ ದಾಳಿಯ 20 ವರ್ಷಗಳ ನಂತರ, ಆ ಭಯೋತ್ಪಾದಕ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬ ಮತ್ತು ಅಲ್-ಖೈದಾ ನಾಯಕನಾಗಿ ಒಸಾಮಾ ಬಿನ್ ಲಾಡೆನ್ನ ಉತ್ತರಾಧಿಕಾರಿ - ಐಮನ್ ಅಲ್-ಜವಾಹಿರಿ ಅಂತ್ಯವಾಗಿದೆ. ಅಂತಿಮವಾಗಿ ನ್ಯಾಯ ದೊರಕಿದೆ." ಎಂದು ಒಬಾಮಾ ಹೇಳಿದರು.

"ಅಧ್ಯಕ್ಷ ಬಿಡೆನ್ ಅವರ ನಾಯಕತ್ವಕ್ಕೆ, ಈ ಕ್ಷಣಕ್ಕಾಗಿ ದಶಕಗಳಿಂದ ಕೆಲಸ ಮಾಡುತ್ತಿರುವ ಗುಪ್ತಚರ ಸಮುದಾಯದ ಸದಸ್ಯರಿಗೆ ಮತ್ತು ಒಬ್ಬ ನಾಗರಿಕರಿಗೂ ಅಪಾಯವಾಗದಂತೆ ಅಲ್-ಜವಾಹಿರಿಯನ್ನು ಹತ್ಯೆ ಮಾಡಲು ಸಮರ್ಥರಾದ ಭಯೋತ್ಪಾದನಾ ನಿಗ್ರಹ ದಳದ ಸದಸ್ಯರಿಗೆ ಈ ಗೌರವ ಸಲ್ಲಬೇಕು" ಎಂದರು.
"ಆಫ್ಘಾನಿಸ್ತಾನದಲ್ಲಿ ಯುದ್ಧವಿಲ್ಲದೆಯೇ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯುವುದು ಸಾಧ್ಯ ಎಂಬುದಕ್ಕೆ ಈ ಸುದ್ದಿಯು ಪುರಾವೆಯಾಗಿದೆ. ಇದು 9/11 ಕುಟುಂಬಗಳಿಗೆ ಮತ್ತು ಅಲ್-ಖೈದಾದ ಕೈಯಲ್ಲಿ ನರಳುತ್ತಿರುವ ಎಲ್ಲರಿಗೂ ಸ್ವಲ್ಪ ಪ್ರಮಾಣದ ಶಾಂತಿಯನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ " ಎಂದು ಮಾಜಿ ಅಧ್ಯಕ್ಷ ಒಬಾಮ ಹೇಳಿದರು.
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಲ್-ಜವಾಹಿರಿಯ ಹತ್ಯೆಯನ್ನು ಸೋಮವಾರ ದೂರದರ್ಶನದ ಭಾಷಣದಲ್ಲಿ ಘೋಷಿಸಿದ್ದಾರೆ. 71 ವರ್ಷದ ಐಮನ್ ಅಲ್-ಜವಾಹಿರಿ ಜಾಗತಿಕ ಮಟ್ಟದಲ್ಲಿ ಅಲ್ ಖೈದಾ ಮುಖ್ಯಸ್ಥರಾಗಿ ಗುರುತಿಸಿಕೊಂಡಿದ್ದರು.

ಒಸಾಮಾ ಬಿನ್ ಲಾಡೆನ್ ಅನ್ನು ಯುಎಸ್ ಕೊಂದ 11 ವರ್ಷಗಳ ನಂತರ ಗುಂಪಿನ ಹೊಣೆ ಹೊತ್ತುಕೊಂಡಿದ್ದ ಜವಾಹಿರಿ ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿದ್ದ.
Recommended Video
ಲಾಡೆನ್ನ ನಂತರ ಗುಂಪಿನ ಮುಖ್ಯಸ್ಥರಾಗಿ ಜವಾಹಿರಿ ಗುರುತಿಸಿಕೊಂಡಿದ್ದನು. ಅಲ್ ಖೈದಾದ ಪ್ರಮುಖ ತಂತ್ರಜ್ಞರಲ್ಲಿ ಒಬ್ಬರಾಗಿದ್ದರು, ಜೊತೆಗೆ ಬಿನ್ ಲಾಡೆನ್ ಅವರ ವೈಯಕ್ತಿಕ ವೈದ್ಯರಾಗಿಯೂ ಸೇವೆ ಸಲ್ಲಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications