ಶೂಟೌಟಿಗೆ ಕಪ್ಪು ವರ್ಣೀಯ ಬಲಿ, ಪೊಲೀಸ್ ಮುಖ್ಯಸ್ಥೆ ರಾಜೀನಾಮೆ
ಅಟ್ಲಾಂಟಾ, ಜೂನ್ 14: ಜಾರ್ಜ್ ಫ್ಲಾಯ್ಡ್ ದುರಂತ ಸಾವಿನ ವಿರುದ್ಧ ನಡೆದಿರುವ ಆಕ್ರೋಶಭರಿತ ಪ್ರತಿಭಟನೆ ಹತ್ತಿಕ್ಕಲು ಹೆಣಗುತ್ತಿರುವಾಗಲೇ ಮತ್ತೊಂದು ಪ್ರಮಾದವನ್ನು ಪೊಲೀಸರು ಎಸಗಿದ್ದಾರೆ. ಕಪ್ಪು ವರ್ಣೀಯನೊಬ್ಬ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಘಟನೆ ನಡೆದ 24ಗಂಟೆಯೊಳಗೆ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥೆ ಎರಿಕಾ ಶೀಲ್ಡ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
27 ವರ್ಷ ವಯಸ್ಸಿನ ರೇಶಾರ್ಡ್ ಬ್ರೂಕ್ಸ್ ಎಂಬ ವ್ಯಕ್ತಿ ವೆಂಡಿ ಎಂಬಲ್ಲಿ ಡ್ರೈ ವ್ ಥ್ರೂ ಬಳಿ ಕಾರಿನಲ್ಲಿ ನಿದ್ರಿಸುತ್ತಿದ್ದರು. ರಸ್ತೆ ಸಂಚಾರಕ್ಕೆ ಇದರಿಂದ ಅಡ್ಡಿಯಾಗಿದೆ. ಈ ಬಗ್ಗೆಇಬ್ಬರು ಪೊಲೀಸರು ಪ್ರಶ್ನೆಗಳು ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ತಿಕ್ಕಾಟದಲ್ಲಿ ಪೊಲೀಸರ ಬಳಿ ಇದ್ದ ಇ ಶಾಕ್ ನೀಡುವ ಸಾಧನ ಟೇಸರ್(Taser) ಕಿತ್ತುಕೊಂಡು ಓಡಿದ್ದಾನೆ. ಇದರಿಂದ ಕೋಪಗೊಂಡು ಪೊಲೀಸರು ಆತನ ಮೇಲೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ.
ಬ್ರೂಕ್ಸ್ ಸಾವಿಗೆ ನ್ಯಾಯ ಕೋರಿ ಅನೇಕ ಮಂದಿ ಪ್ರತಿಭಟನಾಕಾರರು ಅಂತಾರಾಜ್ಯ 85 ಹೆದ್ದಾರಿಯನ್ನು ತಡೆದಿದ್ದಾರೆ. ವೆಂಡಿಯಲ್ಲಿ ಗಾಜುಗಳನ್ನು ಒಡೆದು, ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಟಿಯರ್ ಗ್ಯಾಸ್, ಸ್ಮೋಕ್ ಬಾಂಬ್ ಪ್ರಯೋಗಿಸಿ ಗುಂಪನ್ನು ಚದುರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಜಾರ್ಜಿಯಾ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಹೇಳಿದೆ.
ಮೇ 27 ರಂದು ರಾತ್ರಿ 8 ಗಂಟೆ ಸುಮಾರಿಗೆ 46 ವರ್ಷ ವಯಸ್ಸಿನ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಮೇಲೆ 'ಬಿಳಿ' ಪೊಲೀಸರು ಅಟ್ಟಹಾಸ ಮೆರೆದಿದ್ದರು. ರಸ್ತೆ ಮೇಲೆ ಬಿದ್ದ 'ಬ್ಲಾಕ್' ಜಾರ್ಜ್ ಫ್ಲಾಯ್ಡ್ ಕುತ್ತಿಗೆಯ ಮೇಲೆ 'ಬಿಳಿ' ಪೊಲೀಸ್ ಹಲವು ನಿಮಿಷಗಳ ಕಾಲ ಬಲವಾಗಿ ಮಂಡಿಯೂರಿದ್ದ ಪರಿಣಾಮ, ಜಾರ್ಜ್ ಫ್ಲಾಯ್ಡ್ ಸಾವನ್ನಪ್ಪಿದ್ದರು. ಇದಾದ ಬಳಿಕ ಇಡೀ ಅಮೆರಿಕದಲ್ಲಿ ಕಪ್ಪು ವರ್ಣೀಯರ ರಕ್ಷಣೆಗಾಗಿ ಪ್ರತಿಭಟನೆ ಜೋರಾಗಿ ನಡೆದಿದೆ. ಜಾರ್ಜ್ ಫ್ಲಾಯ್ಡ್ ನಿಧನಕ್ಕೆ ಶೋಕ ವ್ಯಕ್ತಪಡಿಸಿ, ಕಪ್ಪುವರ್ಣೀಯರಿಗೆ ವಿಶ್ವದೆಲ್ಲೆಡೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications