ಅಮೆರಿಕ ಸೇನೆಯಿಂದ ಐಎಸ್ಐಎಸ್ ನಾಯಕನ ಹತ್ಯೆ: ಶ್ವೇತಭವನ
ವಾಷಿಂಗ್ಟನ್, ಫೆಬ್ರವರಿ 3: ಐಎಸ್ಎಸ್ ನಾಯಕನೊಬ್ಬನನ್ನು ಅಮೆರಿಕ ಸೇನೆ ಹತ್ಯೆ ಮಾಡಿರುವುದಾಗಿ ಶ್ವೇತ ಭವನ ಟ್ವೀಟ್ ಮಾಡಿದೆ.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಐಸಿಸ್ ನಾಯಕ ಅಬು ಇಬ್ರಾಹಿಂ ಅಲ್-ಹಶಿಮಿ ಅಲ್-ಖುರೈಶಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾಹಿತಿ ನೀಡಿದ್ದಾರೆ ಎಂದು ಶ್ವೇತ ಭವನ ಟ್ವೀಟ್ನಲ್ಲಿ ತಿಳಿಸಿದೆ.
ವಾಯವ್ಯ ಸಿರಿಯಾದಲ್ಲಿ ನಡೆದ ದಾಳಿಯಲ್ಲಿ ಐಸಿಸ್ ಮುಖ್ಯಸ್ಥನನ್ನು ಕೊಲ್ಲಲಾಗಿದ್ದು, ನಮ್ಮ ಸಶಸ್ತ್ರ ಪಡೆಗಳ ಶೌರ್ಯಕ್ಕೆ ಧನ್ಯವಾದಗಳು, ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಲ್ಲಾ ಅಮೆರಿಕನ್ ಸೇನಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಶ್ವೇತ ಭವನದ ಮೂಲಗಳು ಸ್ಪಷ್ಟನೆ ನೀಡಿವೆ.

ಅಮೆರಿಕದ ಸೇನೆ ಕಳೆದ ರಾತ್ರಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಈ ಕಾರ್ಯಾಚರಣೆಯಲ್ಲಿ ಅಬು ಇಬ್ರಾಹಿಂ ಅಲ್-ಹಶಿಮಿ ಅಲ್-ಖುರೈಶಿಯನ್ನು ಕೊಲ್ಲಲಾಗಿದೆ ಎಂದು ಜೋ ಬೈಡನ್ ಸ್ಪಷ್ಟನೆ ನೀಡಿದ್ದಾರೆ.
ಅಲ್-ಖುರೈಶಿಯನ್ನು 2004ರಲ್ಲಿ ಇರಾಕ್ನಲ್ಲಿ ಯುಎಸ್ ನಡೆಸುತ್ತಿರುವ ಕ್ಯಾಂಪ್ ಬುಕ್ಕಾದಲ್ಲಿ ಬಂಧಿಸಲಾಗಿತ್ತು ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.
ಇದಷ್ಟೇ ಅಲ್ಲ ಅಲ್-ಖುರೈಶಿಯು ಮಾಜಿ ಐಸಿಸ್ ನಾಯಕನಾದ ಅಬು ಬಕರ್ ಅಲ್-ಬಾಗ್ದಾದಿಯ ವಿಶ್ವಾಸಾರ್ಹ ವ್ಯಕ್ತಿಗಳಲ್ಲಿ ಒಬ್ಬನಾಗಿದ್ದನು ಎಂದು ತಿಳಿದುಬಂದಿದೆ.
Recommended Video
2019ರ ಅಕ್ಟೋಬರ್ನಲ್ಲಿ ಅಮೆರಿಕ ನಡೆಸಿದ ಕಾರ್ಯಾಚರಣೆಯಲ್ಲಿ ಅಬು ಬಕರ್ ಅಲ್-ಬಾಗ್ದಾದಿ ಹತ್ಯೆಯಾದ ನಂತರ ಐಸಿಸ್ನ ಹೊಣೆಗಾರಿಕೆಯನ್ನು ಅಲ್-ಖುರೈಶಿ ವಹಿಸಿಕೊಂಡಿದ್ದನೆಂದು ತಿಳಿದುಬಂದಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications