ಕ್ಯಾಲಿಫೋರ್ನಿಯಾದ ಕಾಳ್ಗಿಚ್ಚಿಗೆ 31 ಮಂದಿ ಬಲಿ, ನೂರಾರು ಮಂದಿ ನಾಪತ್ತೆ
ಕ್ಯಾಲಿಫೋರ್ನಿಯಾ, ನವೆಂಬರ್ 12: ಕ್ಯಾಲಿಫೋರ್ನಿಯಾದ ಉತ್ತರ ಹಾಗೂ ದಕ್ಷಿಣ ಭಾಗಗಳಲ್ಲಿ ಆವರಿಸಿರುವ ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 31ಕ್ಕೇರಿದೆ. ಇದು ರಾಜ್ಯದ ಇತಿಹಾಸದಲ್ಲೇ ಭೀಕರ ಕಾಡ್ಗಿಚ್ಚು ಎಂದು ಘೋಷಿಸಲಾಗಿದೆ.
ಉತ್ತರ ಕ್ಯಾಲಿಫೋರ್ನಿಯಾದಲ್ಲಿನ ಕಾಡ್ಗಿಚ್ಚಿನಿಂದಾಗಿ ಒಂದೇ ಮನೆಯಲ್ಲಿ ಸುಟ್ಟು ಕರಕಲಾಗಿರುವ 5 ಮೃತದೇಹಗಳು ಪತ್ತೆಯಾಗಿವೆ. ಇನ್ನೊಂದೆಡೆ ಕಾರಿನಲ್ಲಿ 6 ಮೃತದೇಹಗಳು ದೊರಕಿವೆ ಎಂದು ಕಾಲ್ ಫೈರ್ ಅಧಿಕಾರಿಗಳು ಹೇಳಿದ್ದಾರೆ.
ಸುಮಾರು 228 ಜನ ನಾಪತ್ತೆಯಾಗಿದ್ದು, 137 ಜನರು ಸ್ನೇಹಿತರು ಮತ್ತು ಸಂಬಂಧಿ ಮನೆಗಳಿಗೆ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ, ಯಾರೊಬ್ಬರ ಸಂಪರ್ಕ ಇನ್ನೂ ಸಾಧ್ಯವಾಗಿಲ್ಲ. ಗುರುವಾರದಿಂದ ಆರಂಭಗೊಂಡ ಕಾಡ್ಗಿಚ್ಚು, ಗಾಳಿಯ ರಭಸಕ್ಕೆ ಮುನ್ನುಗ್ಗುತ್ತಿದ್ದು, ಈಗಾಗಲೇ 85,000 ಎಕರೆ (28,300) ಹೆಕ್ಟೇರ್ ಪ್ರದೇಶವನ್ನು ಸುಟ್ಟುಹಾಕಿದೆ. 6,700 ಮನೆಗಳು ಮತ್ತು ಉದ್ಯಮಗಳು ಸಂಪೂರ್ಣ ನಾಶವಾಗಿವೆ. ಇಲ್ಲಿ ತನಕ 1,50,000ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲಾಗಿದೆ. ಬೆಂಕಿಯ ಕೆನ್ನಾಲಿಗೆ ಹತೋಟಿಗೆ ಬರುತ್ತಿಲ್ಲ. ಹಾಗಾಗಿ ಎಲ್ಲೆಡೆ ವ್ಯಾಪಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಕಾಲ್ ಫೈರ್ ನ ಇತಿಹಾಸದಲ್ಲಿ 6,000 ಮನೆ ನಾಶ ಹಾಗೂ 1,11,000 ಎಕರೆ ನಾಶವೇ ಅಧಿಕ ಪ್ರಮಾಣದ ಹಾನಿ ಎನ್ನಲಾಗಿತ್ತು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications