ಡೊನಾಲ್ಡ್ ಟ್ರಂಪ್ ವಿರುದ್ಧ ಐತಿಹಾಸಿಕ ವಾಗ್ದಂಡನೆ ಪ್ರಕ್ರಿಯೆ
ವಾಷಿಂಗ್ಟನ್, ಜನವರಿ 13: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾಗ್ದಂಡನೆ ಪ್ರಕ್ರಿಯೆಗೆ ಅಮೆರಿಕ ಸಂಸತ್ತು ಮುಂದಾಗಿದೆ. ಜನಪ್ರತಿನಿಧಿ ಸಭೆಯಲ್ಲಿ ಡೆಮಾಕ್ರಟಿಕ್ ಸದಸ್ಯರು ಕಚೇರಿಯಿಂದ ಡೊನಾಲ್ಡ್ ಟ್ರಂಪ್ ಅವರನ್ನು ತೆಗೆದುಹಾಕುವ ಐತಿಹಾಸಿಕ ಕ್ರಮಕ್ಕೆ ಹೆಜ್ಜೆ ಇರಿಸಿದ್ದು, ಇದಕ್ಕೆ ರಿಪಬ್ಲಿಕ್ ಪಕ್ಷದ ಐವರು ಸದಸ್ಯರೂ ಕೈಜೋಡಿಸಿದ್ದಾರೆ.
ಟ್ರಂಪ್ ಅಧಿಕಾರಾವಧಿಯಲ್ಲಿ ಎಂಟು ದಿನಗಳು ಬಾಕಿ ಉಳಿದಿರುವಂತೆಯೇ ಜನಪ್ರತಿನಿಧಿ ಸಭೆಯಲ್ಲಿ ಬುಧವಾರ ವಾಗ್ದಂಡನೆಗೆ ಮತಚಲಾವಣೆ ನಡೆಯುತ್ತಿದೆ. ಕಳೆದ ವಾರ ಕ್ಯಾಪಿಟಲ್ ಹಿಲ್ನಲ್ಲಿ ಬೆಂಬಲಿಗರು ಗುಂಪುಗೂಡಿ ಹಿಂಸಾಚಾರ ನಡೆಸಲು ಡೊನಾಲ್ಡ್ ಟ್ರಂಪ್ ಕುಮ್ಮಕ್ಕು ನೀಡಿದ ಆರೋಪದಡಿ ಅವರ ವಿರುದ್ಧ ವಾಗ್ದಂಡನೆಗೆ ಗುರಿಪಡಿಸಲಾಗುತ್ತಿದೆ.
ಸೆನೆಟ್ನಲ್ಲಿ ಈಗಲೂ ರಿಪಬ್ಲಿಕನ್ ಪ್ರಾಬಲ್ಯ ಇದೆ. ಹೀಗಾಗಿ ವಾಗ್ದಂಡನೆ ಪ್ರಕ್ರಿಯೆ ವೇಳೆ ಭಾರಿ ಗದ್ದಲ ನಡೆಯುವ ಸಾಧ್ಯತೆ ಇದೆ. ಟ್ರಂಪ್ ಅವರನ್ನು ವಜಾಗೊಳಿಸಲು ಸಾಕಷ್ಟು ಸಮಯ ಅಥವಾ ರಾಜಕೀಯ ಪ್ರಕ್ರಿಯೆ ನಡೆಯುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಉಪಾಧ್ಯಕ್ಷ ಮೈಕ್ ಪೆನ್ಸ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪದಚ್ಯುತಗೊಳಿಸುವ ಅಮೆರಿಕ ಸಂವಿಧಾನದ 25ನೇ ತಿದ್ದುಪಡಿಯನ್ನು ಜಾರಿಗೆ ತರಲು ನಿರಾಕರಿಸಿದ ಬಳಿಕ ಡೆಮಾಕ್ರಟಿಕ್ ಪಕ್ಷದ ವಾಗ್ದಂಡನೆ ಮತಚಲಾವಣೆಗೆ ಮುಂದಾಗಿದೆ.
'ನಮ್ಮ ದೇಶದ ಹಿತಾಸಕ್ತಿ ಅಥವಾ ಸಂವಿಧಾನದ ಒಳಿತಿಗೆ ಅಂತಹ ನಡೆ ಪೂರಕವಾಗಿದೆ ಎಂದು ನನಗೆ ಅನಿಸುತ್ತಿಲ್ಲ' ಎಂಬುದಾಗಿ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರಿಗೆ ಬರೆದಿದ್ದ ಪತ್ರದಲ್ಲಿ ಪೆನ್ಸ್ ಹೇಳಿದ್ದರು.
ಪತ್ರದ ಹೊರತಾಗಿಯೂ ಪೆನ್ಸ್ ಅವರು ತಿದ್ದುಪಡಿ ಜಾರಿಗೆ ತರುವಂತೆ ಸಭೆಯಲ್ಲಿ ಔಪಾಚಾರಿಕವಾಗಿ ನಿರ್ಣಯ ಕೈಗೊಳ್ಳಲಾಯಿತು. 223-205 ಮತಗಳು ಪದಚ್ಯುತಿ ನಿಯಮದ ಪರವಾಗಿ ಚಲಾವಣೆಗೊಂಡವು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications