ಭಾರತಕ್ಕೆ ರಷ್ಯಾದಿಂದ ಅಂತರ ಕಾಪಾಡಿಕೊಳ್ಳಲು ಅಮೆರಿಕ ಸಲಹೆ
ವಾಷಿಂಗ್ಟನ್, ಮಾರ್ಚ್ 4: ಭಾರತಕ್ಕೆ ರಷ್ಯಾದಿಂದ ಅಂತರ ಕಾಪಾಡಿಕೊಳ್ಳುವಂತೆ ಅಮೆರಿಕ ಸಲಹೆ ನೀಡಿದೆ.
ಭಾರತವು ಈಗಲೂ ನಿಜವಾಗಿಯೂ ನಮ್ಮ ಭದ್ರತಾ ಪಾಲುದಾರ ರಾಷ್ಟ್ರವಾಗಿದೆ. ನಾವು ಆ ಪಾಲುದಾರಿಕೆಯನ್ನು ಗೌರವಿಸುತ್ತೇವೆ. ರಷ್ಯಾ ಎದುರಿಸುತ್ತಿರುವ ತೀವ್ರ ಟೀಕೆಗಳಿಂದ ಮುಂದೆ ಏನಾಗುತ್ತದೆ ಎಂದು ನಾವು ಭಾವಿಸಬಹುದು. ಭಾರತವು ರಷ್ಯಾದಿಂದ ಮತ್ತಷ್ಟು ದೂರವಿರಲು ಇದು ಉತ್ತಮ ಸಮಯವಾಗಿದೆ ಎಂದು ಅಮೆರಿಕದ ದಕ್ಷಿಣ ಏಷ್ಯಾದ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ಡೊನಾಲ್ಡ್ ಲು ಹೇಳಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಉಕ್ರೇನ್ ವಿರುದ್ಧ ರಷ್ಯಾ ಆಕ್ರಮಣ ವಿಚಾರವಾಗಿ ಭಾರತ ತಟಸ್ಥ ನಿಲುವು ತೆಗೆದುಕೊಂಡಿದ್ದು, ಈ ನಿಲುವು ರಷ್ಯಾ ಪರವಾಗಿತ್ತು. ಭದ್ರತಾ ಮಂಡಳಿಯಲ್ಲಿ ಮತ್ತು ಸಾಮಾನ್ಯ ಸಭೆಯಲ್ಲಿ ಮತದಾನದಿಂದ ಭಾರತ ದೂರ ಉಳಿದಿತ್ತು. ಇದು ಅಮೆರಿಕದ ಅಸಮಾಧಾನಕ್ಕೆ ಕಾರಣವಾಗಿತ್ತು.

ಉಕ್ರೇನ್ - ರಷ್ಯಾ ಯುದ್ಧದ ಬಿಕ್ಕಟ್ಟಿನ ಮಧ್ಯೆ ಕ್ವಾಡ್ ನಾಯಕರ ವರ್ಚುಯಲ್ ಶೃಂಗಸಭೆ ಗುರುವಾರ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಭಾಗವಹಿಸಿದ್ದರು.
ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ, ರಷ್ಯಾ ಪರ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ರಷ್ಯಾದಿಂದ ಅಂತರ ಕಾಪಾಡಿಕೊಳ್ಳುವಂತೆ ಭಾರತಕ್ಕೆ ಸಲಹೆ ನೀಡಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಈ ಸಂದರ್ಭದಲ್ಲಿ ಇಂಡೋ - ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸುವ ಉದ್ದೇಶದಿಂದ ಕ್ವಾಡ್, ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕ ದೇಶಗಳ ನಾಯಕರು ಗುರುವಾರದಂದು ವರ್ಚುಯಲ್ ಸಭೆ ನಡೆಸಿದ್ದಾರೆ. ಉಕ್ರೇನ್ ಮೇಲಿನ ರಷ್ಯಾ ಮಿಲಿಟರಿ ಕಾರ್ಯಾಚರಣೆ ಕುರಿತು ಇದೇ ವೇಳೆ ಚರ್ಚಿಸಿದ್ದಾರೆ.
ಕ್ವಾಡ್ ಲೀಡರ್ಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯನ್ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ.
ಉಕ್ರೇನ್ ಮೇಲಿನ ರಷ್ಯಾದ ದಾಳಿಯಿಂದ ಉಂಟಾಗಿರುವ ಪರಿಸ್ಥಿತಿ, ಭವಿಷ್ಯ ಮತ್ತು ಮಾನವೀಯತೆ ನೆರವಿನ ಬಗ್ಗೆಯೂ ಚರ್ಚಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಎರಡೂ ದೇಶಗಳು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳುವ ಅಗತ್ಯತೆಯ ಬಗ್ಗೆ ಒತ್ತಿ ಹೇಳಿದರು.
Recommended Video
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications