ಡೊನಾಲ್ಡ್ ಟ್ರಂಪ್ ವಾಗ್ದಂಡನೆ: ಸೆನೆಟ್ನಲ್ಲಿ ಪ್ರಕ್ರಿಯೆ ಆರಂಭ
ವಾಷಿಂಗ್ಟನ್, ಜನವರಿ 17: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ವಾಗ್ದಂಡನೆಯ ವಿಚಾರಣೆ ಗುರುವಾರ ಅಮೆರಿಕದ ಸೆನೆಟ್ನಲ್ಲಿ ಆರಂಭವಾಗಿದೆ. ಅಮೆರಿಕದ 45ನೇ ಅಧ್ಯಕ್ಷರಾಗಿರುವ ಟ್ರಂಪ್ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷಾತೀತವಾಗಿ ನಿರ್ಧರಿಸುವುದಾಗಿ ಸೆನೆಟ್ ಸದಸ್ಯರು ಪ್ರತಿಜ್ಞೆ ಸ್ವೀಕರಿಸಿದ್ದಾರೆ.
ಅಮೆರಿಕದ ಇತಿಹಾಸದಲ್ಲಿ ಮೂರನೇ ಬಾರಿಗೆ ಈ ಪ್ರಕ್ರಿಯೆಗಾಗಿ ಸೆನೆಟ್ ಸದನ ವಾಗ್ದಂಡನೆಯ ನ್ಯಾಯಾಲಯವಾಗಿ ಬದಲಾಗಿದೆ. ಈ ಸಭೆಯ ಅಧ್ಯಕ್ಷತೆ ವಹಿಸಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್, ಸೆನೆಟರ್ಗಳಿಗೆ ಪ್ರತಿಜ್ಞೆ ಬೋಧಸಿದರು.
ಕಪ್ಪನೆಯ ನಿಲುವಂಗಿ ಧರಿಸಿದ್ದ ನ್ಯಾ. ರಾವರ್ಟ್ಸ್, ಅಮೆರಿಕದ ಸಂವಿಧಾನಕ್ಕೆ ಅನುಗುಣವಾಗಿ ಪಕ್ಷಾತೀತ ನ್ಯಾಯ ನೀಡುವುದಾಗಿ ಪ್ರತಿಜ್ಞೆ ಮಾಡುತ್ತೀರಾ ಎಂದು ಪ್ರಶ್ನಿಸಿದಾಗ ಎಲ್ಲರೂ ಒಕ್ಕೊರಲಿನಿಂದ ಬಲಗೈ ಮೇಲೆತ್ತಿ, 'ಹೌದು' ಎಂದರು. ಈ ವೇಳೆ 99 ಸಂಸದರು ಹಾಜರಿದ್ದು, ಒಬ್ಬರು ಗೈರಾಗಿದ್ದರು.

ಇದಕ್ಕೂ ಮುನ್ನ ಸಾಂಕೇತಿಕ ನಡೆಯಾಗಿ ಟ್ರಂಪ್ ಅವರ ವಿರುದ್ಧದ ಅಧಿಕಾರ ದುರ್ಬಳಕೆ ಮತ್ತು ಕಾಂಗ್ರೆಸ್ ಚಟುವಟಿಕೆಗೆ ಅಡ್ಡಿಪಡಿಸಿದ್ದರ ವಾಗ್ದಂಡನೆಯ ಆರೋಪಗಳ ಎರಡು ಅಂಶಗಳನ್ನು ಸೆನೆಟ್ನಲ್ಲಿ ಓದಲಾಯಿತು.
ಡಿಸೆಂಬರ್ನಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ನಡೆದ ಮಹಾಭಿಯೋಗದ ಪ್ರಕ್ರಿಯೆಯಲ್ಲಿ ಟ್ರಂಪ್ ವಿರುದ್ಧ ಅಧಿಕ ಮತಗಳು ಚಲಾವಣೆಗೊಂಡಿದ್ದವು. ಅದಕ್ಕೂ ಮುನ್ನ ನ್ಯಾಯಾಂಗ ಸಮಿತಿ ಕೂಡ ವಾಗ್ದಂಡನೆಯ ಎರಡು ಆರೋಪಗಳನ್ನು ಒಪ್ಪಿಕೊಂಡಿತ್ತು. ಸೆನೆಟ್ನಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ಸದಸ್ಯರೇ ಹೆಚ್ಚಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications