ಸಂಪ್ರದಾಯ ಮುರಿದ ಡೊನಾಲ್ಡ್ ಟ್ರಂಪ್, ಬೈಡನ್ ಪದಗ್ರಹಣದ ವೇಳೆ ರೆಸಾರ್ಟ್ ವಾಸ!
ವಾಷಿಂಗ್ಟನ್, ಜನವರಿ 20: ಜೋ ಬೈಡನ್ ಅವರ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಿಂದ ಕೊನೆಯ ಪಯಣ ಆರಂಭಿಸಿದ್ದಾರೆ. ಸಂಪ್ರದಾಯವನ್ನು ಮುರಿದಿರುವ ಅವರು, ಬೈಡನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಲಿದ್ದಾರೆ.
ಪತ್ನಿ ಮೆಲಾನಿಯಾ ಟ್ರಂಪ್ ಜತೆಗೆ ಕೊನೆಯ ಸಲ ಏರ್ ಫೋರ್ಸ್ ಒನ್ ವಿಮಾನವೇರಿ ಫ್ಲೋರಿಡಾದ ಪಾಮ್ ಬೀಚ್ಗೆ ಪ್ರಯಾಣಿಸಿದ ಟ್ರಂಪ್, ಶ್ವೇತಭವನದ ವೈಭವ ಮತ್ತು ಅಧಿಕಾರದ ಜೀವನಕ್ಕೆ ಗುಡ್ಬೈ ಹೇಳಿದರು. ಅದರ ಜತೆಗೆ ತಾವು ಮತ್ತಷ್ಟು ಪ್ರಬಲರಾಗಿ ಮರಳುವ ಭರವಸೆಯನ್ನು ವ್ಯಕ್ತಪಡಿಸಿದರು.
ಬುಧವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದ ನಂತರ ವಾಷಿಂಗ್ಟನ್ನ ಹೊರಗಿನ ವಾಯುನೆಲೆಯಲ್ಲಿ ಸಿಬ್ಬಂದಿ, ಬೆಂಬಲಿಗರು ಮತ್ತು ಕುಟುಂಬದ ಸದಸ್ಯರನ್ನು ಉದ್ದೇಶಿಸಿ ಕಿರು ಭಾಷಣ ಮಾಡಿದ ಟ್ರಂಪ್, ನಾಲ್ಕು ವರ್ಷ ಅವಿಸ್ಮರಣೀಯ ಕ್ಷಣಗಳನ್ನು ಕಳೆದಿದ್ದಾಗಿ ಹೇಳಿಕೊಂಡರು.

'ನಾವು ಜತೆಗೂಡಿ ಸಾಕಷ್ಟು ಸಾಧನೆ ಮಾಡಿದ್ದೇವೆ. ನಾನು ನಿಮಗಾಗಿ ಸದಾ ಹೋರಾಡುತ್ತೇನೆ. ಮತ್ತಷ್ಟು ಪ್ರಬಲನಾಗಿ ಮರಳಿ ಬರುತ್ತೇನೆ. ನಾನು ಗುಡ್ಬೈ ಹೇಳಲು ಬಯಸಿದ್ದೆನಷ್ಟೇ. ಕಚೇರಿಯಲ್ಲಿ ಕಳೆದ ಸಮಯವು ತಮ್ಮ ಜೀವಮಾನದ ಗೌರವ' ಎಂದರು.
ತಮ್ಮ ಭಾಷಣದಲ್ಲಿ ಬೈಡನ್ ಹೆಸರನ್ನು ಪ್ರಸ್ತಾಪಿಸದ ಟ್ರಂಪ್, ಹೊಸ ಆಡಳಿತಕ್ಕೆ ಉತ್ತಮ ಅದೃಷ್ಟ ಹಾಗೂ ಮಹಾನ್ ಯಶಸ್ಸು ಸಿಗಲಿ ಎಂದು ಹಾರೈಸಿದರು.
ಬೈಡನ್ ಅವರ ಪ್ರಮಾಣವಚನ ಸ್ವೀಕಾರ ನಡೆಯುವ ಸಂದರ್ಭದಲ್ಲಿ ಟ್ರಂಪ್ ಅವರು ಫ್ಲೋರಿಡಾದ ತಮ್ಮ ಮಾರ್-ಎ-ಲಾಗೋ ರೆಸಾರ್ಟ್ನಲ್ಲಿ ಸಮಯ ಕಳೆಯಲಿದ್ದಾರೆ. ಅಮೆರಿಕದ ಸುಮಾರು 150 ವರ್ಷಗಳ ಅಧ್ಯಕ್ಷೀಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ತಮ್ಮ ಉತ್ತರಾಧಿಕಾರಿಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗುತ್ತಿರುವ ಮೊದಲ ಅಧ್ಯಕ್ಷ ಎಂದೆನಿಸಿದ್ದಾರೆ.
ಶ್ವೇತಭವನದಿಂದ ನಿರ್ಗಮಿಸುವ ಮುನ್ನ ಬೈಡನ್ಗೆ ಟ್ರಂಪ್ ಪತ್ರವೊಂದನ್ನು ಬಿಟ್ಟುಹೋಗಿದ್ದಾರೆ. ಆ ಪತ್ರದಲ್ಲಿ ಏನಿದೆ ಎನ್ನುವುದು ಬಹಿರಂಗವಾಗಿಲ್ಲ. ಉಪಾಧ್ಯಕ್ಷ ಮೈಕ್ ಪೆನ್ಸ್, ಟ್ರಂಪ್ ಬೀಳ್ಕೊಡುಗೆ ಸಮಾರಂಭಕ್ಕೆ ಗೈರು ಹಾಜರಾಗಿದ್ದರು. ಆದರೆ, ಬೈಡನ್ ಪ್ರಮಾಣವಚನದ ವೇಳೆ ಉಪಸ್ಥಿತರಿರಲಿದ್ದಾರೆ. ಮಾಜಿ ಅಧ್ಯಕ್ಷರಾದ ಜಾರ್ಜ್ ಬುಷ್, ಬರಾಕ್ ಒಬಾಮ ಮತ್ತು ಕ್ಲಿಂಟನ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications