ಹಿಂಸಾಚಾರ ನಡೆಸಿದವರನ್ನು 'ದೇಶಭಕ್ತರು' ಎಂದ ಟ್ರಂಪ್ ಪುತ್ರಿ
ವಾಷಿಂಗ್ಟನ್, ಜನವರಿ 7: ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆ ನಡೆಸಿದ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಜನರನ್ನು ಟ್ರಂಪ್ ಮಗಳು ಇವಾಂಕಾ ಟ್ರಂಪ್, 'ದೇಶಭಕ್ತರು' ಎಂದು ಕರೆದಿದ್ದಾರೆ.
ಪ್ರತಿಭಟನಾಕಾರರು ಶಾಂತಿಯಿಂದ ವರ್ತಿಸಬೇಕು ಎಂದು ಕೋರಿ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದರು. 'ನಮ್ಮ ಕ್ಯಾಪಿಟಲ್ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆಯನ್ನು ದಯವಿಟ್ಟು ಬೆಂಬಲಿಸಿ. ಅವರು ನಿಜಕ್ಕೂ ನಮ್ಮ ದೇಶದ ಪರವಾಗಿದ್ದಾರೆ. ಶಾಂತಿಯಿಂದ ಇರಿ' ಎಂದು ಟ್ರಂಪ್ ಹೇಳಿದ್ದರು.
ಇದನ್ನು ಹಂಚಿಕೊಂಡಿದ್ದ ಇವಾಂಕಾ ಟ್ರಂಪ್, 'ಅಮೆರಿಕದ ದೇಶಭಕ್ತರೇ- ನಮ್ಮ ಕಾನೂನು ವ್ಯವಸ್ಥೆಯ ಯಾವುದೇ ಭದ್ರತಾ ಉಲ್ಲಂಘನೆ ಅಥವಾ ಅಗೌರವವು ಒಪ್ಪುವಂತಹದ್ದಲ್ಲ. ಈ ಹಿಂಸಾಚಾರವನ್ನು ಕೂಡಲೇ ನಿಲ್ಲಿಸಬೇಕು. ದಯವಿಟ್ಟು ಶಾಂತಯುತರಾಗಿ' ಎಂದು ಟ್ವೀಟ್ ಮಾಡಿದ್ದರು. ಆದರೆ ಕೆಲವೇ ನಿಮಿಷದಲ್ಲಿ ಅವರು ಆ ಟ್ವೀಟ್ ಅನ್ನು ಅಳಿಸಿ ಹಾಕಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಕಾನೂನಾತ್ಮಕ ಪ್ರಜಾಪ್ರಭುತ್ವ ಚುನಾವಣೆಯ ಫಲಿತಾಂಶವನ್ನು ಒಪ್ಪಿಕೊಳ್ಳುವುದು ನೈಜ ದೇಶಭಕ್ತಿ. ಅದನ್ನು ನಿರಾಕರಿಸುವುದು ಮತ್ತು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವುದು ಅಮೆರಿಕ ವಿರೋಧಿ ಎಂದು ಇವಾಂಕಾ ಸಂಬಂಧಿ, ರೂಪದರ್ಶಿ ಕರ್ಲಿ ಕ್ಲೋಸ್ ಪ್ರತಿಕ್ರಿಯೆ ನೀಡಿದ್ದಾರೆ.
'ಯುಎಸ್ ಕ್ಯಾಪಿಟಲ್ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ದಾಂಧಲೆಯನ್ನು ಕೂಡಲೇ ನಿಲ್ಲಿಸಬೇಕು. ಅದರಲ್ಲಿ ಭಾಗಿಯಾಗಿರುವವರು ಕಾನೂನು ವ್ಯವಸ್ಥೆಯ ಅಧಿಕಾರಿಗಳನ್ನು ಗೌರವಿಸಬೇಕು ಮತ್ತು ಕೂಡಲೇ ಕಟ್ಟಡದಿಂದ ಹೊರಹೋಗಬೇಕು' ಎಂದು ಉಪಾಧ್ಯಕ್ಷ ಮೈಕ್ ಪೆನ್ಸ್ ಹೇಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications