ಸಾವೇನೋ ತಗ್ಗಿದೆ, ಆದರೆ ಡೆಲ್ಟಾ ರೂಪಾಂತರದ ಬಗ್ಗೆ ಎಚ್ಚರವಿರಲಿ; ಬೈಡನ್
ವಾಷಿಂಗ್ಟನ್, ಜುಲೈ 21: "ಕೊರೊನಾ ಲಸಿಕೆ ಅಭಿಯಾನದಿಂದಾಗಿ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ನಾಟಕೀಯ ರೀತಿಯಲ್ಲಿ ಇಳಿಕೆಯಾಗಿದೆ. ಆದರೆ ಜನರು ಕೊರೊನಾ ಸೋಂಕಿನ ಡೆಲ್ಟಾ ರೂಪಾಂತರದ ಕುರಿತು ಎಚ್ಚರಕೆಯಿಂದಿರಬೇಕಿದೆ" ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಎಚ್ಚರಿಕೆ ನೀಡಿದ್ದಾರೆ.
ಬೈಡನ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ಕ್ಯಾಬಿನೆಟ್ ಸಭೆ ನಡೆಸಿದ್ದು, ದೇಶದಲ್ಲಿನ ಕೊರೊನಾ ಸ್ಥಿತಿಗತಿಗಳ ಕುರಿತು ಮಾಹಿತಿ ಹಂಚಿಕೊಂಡರು.
"ಕಳೆದ ಆರು ತಿಂಗಳಿನಲ್ಲಿ ಲಸಿಕಾ ಅಭಿಯಾನದಿಂದಾಗಿ ಸಾವಿನ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಶೇಕಡಾ 90ರಷ್ಟು ಸಾವಿನ ಪ್ರಮಾಣ ಕಡಿಮೆಯಾಗಿದೆ. ಈಗ ಕೊರೊನಾ ಸೋಂಕಿಗೆ ತುತ್ತಾದವರು ಹಾಗೂ ಸಾವನ್ನಪ್ಪಿದ ಬಹುಪಾಲು ಮಂದಿ ಲಸಿಕೆ ಪಡೆದುಕೊಂಡಿಲ್ಲದವರು" ಎಂದು ಹೇಳಿದರು.

"ದೇಶದಲ್ಲಿ ಸೋಂಕಿನಿಂದ ಸಾವಿನ ಸಂಖ್ಯೆ ತಗ್ಗಿತೆಂದು ಜನರು ನಿರ್ಲಕ್ಷಿಸುವಂತಿಲ್ಲ. ಮುಂದಿನ ವಾರಗಳಲ್ಲಿ ಡೆಲ್ಟಾ ರೂಪಾಂತರ ಪ್ರಕರಣಗಳು ತೀವ್ರಗೊಳ್ಳಲಿರುವುದಾಗಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಅಮೆರಿಕದಲ್ಲಿ ವರದಿಯಾಗಿರುವ ಪ್ರಕರಣಗಳಿಗೆ ಮುಕ್ಕಾಲು ಪಾಲು ಡೆಲ್ಟಾ ರೂಪಾಂತರವೇ ಕಾರಣ ಎನ್ನಲಾಗಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಜನರು ಮೈಮರೆಯುವಂತಿಲ್ಲ" ಎಂದು ಹೇಳಿದ್ದಾರೆ.
"ವಯಸ್ಕರು ಹಾಗೂ ಮಕ್ಕಳು ಈ ರೂಪಾಂತರಕ್ಕೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಅವರಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆರೋಗ್ಯಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಜನರು ಯಾವುದೇ ಹಿಂಜರಿಕೆಯಿಲ್ಲದೇ ಕೊರೊನಾ ಲಸಿಕೆಗಳನ್ನು ಪಡೆದುಕೊಳ್ಳಬೇಕು" ಎಂದು ಮನವಿ ಮಾಡಿದ್ದಾರೆ.
ಭಾರತದಲ್ಲಿ ಡಿಸೆಂಬರ್ನಲ್ಲಿ ಪತ್ತೆಯಾದ B.1.617.2 "ಡೆಲ್ಟಾ" ರೂಪಾಂತರ ಇದೀಗ ಹಲವು ದೇಶಗಳನ್ನು ಆವರಿಸಿದೆ. ಈ ಕುರಿತು ಈಚೆಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆಯನ್ನೂ ರವಾನಿಸಿತ್ತು.
"ಡೆಲ್ಟಾ ವೈರಸ್ನಿಂದಾಗಿ ಪತ್ತೆ ಸೋಂಕು ಹೆಚ್ಚಳವಾಗುತ್ತಿದೆ. ಡೆಲ್ಟಾ ರೂಪಾಂತರವು 111ಕ್ಕೂ ಹೆಚ್ಚು ದೇಶಗಳಲ್ಲಿದೆ. ಇದು ಈಗಾಗಲೇ ವಿಶ್ವಾದ್ಯಂತ ಹರಡಲು ಆರಂಭವಾಗಿದೆ" ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧಾನಮ್ ಕಳವಳ ವ್ಯಕ್ತಪಡಿಸಿದ್ದರು.
"ಭಾರತದಲ್ಲಿ ಮೊದಲು ಪತ್ತೆಯಾದ, ಎರಡನೇ ಅಲೆಗೆ ಕಾರಣವಾದ ಡೆಲ್ಟಾ ರೂಪಾಂತರ ಬೇರೆಲ್ಲಾ ರೂಪಾಂತರಗಳಿಗಿಂತಲೂ ಅತಿ ವೇಗವಾಗಿ ಹರಡುತ್ತಿದೆ. ಮಿಕ್ಕೆಲ್ಲಾ ರೂಪಾಂತರಗಳಿಗಿಂತ ಈ ರೂಪಾಂತರದ ಕುರಿತು ಹೆಚ್ಚು ಕಾಳಜಿ ವಹಿಸಬೇಕಿದೆ. ಈ ರೂಪಾಂತರ ಹರಡುತ್ತಿರುವ ವೇಗವನ್ನು ಗಮನಿಸಿದರೆ, ಶೀಘ್ರವೇ ಜಾಗತಿಕವಾಗಿ ಅತಿ ಪ್ರಬಲವಾದ ರೂಪಾಂತರವಾಗುವ ಸಾಧ್ಯತೆಯಿದೆ" ಎಂದು ಡಬ್ಲುಎಚ್ಒ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕ ಡಾ. ಪೂನಂ ಖೇತ್ರಪಾಲ್ ಸಿಂಗ್ ತಿಳಿಸಿದ್ದರು.
Recommended Video
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications