ಭಾರತೀಯನ ಹತ್ಯೆ: ಸುಳಿವು ನೀಡಿದವರಿಗೆ $15000 ಬಹುಮಾನ ಘೋಷಿಸಿದ ಎಫ್ಬಿಐ
ವಾಷಿಂಗ್ಟನ್, ಸೆಪ್ಟೆಂಬರ್ 17: ಭಾರತ ಮೂಲದ ಪ್ರಜೆ ಪರೇಶ್ ಕುಮಾರ್ ಅವರ ಅಪಹರಣ ಮತ್ತು ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ನೀಡಿದವರಿಗೆ $15,000 (ಸುಮಾರು 11 ಲಕ್ಷ) ಬಹುಮಾನ ನೀಡುವುದಾಗಿ ಅಮರಿಕದ ಎಫ್ಬಿಐ ತಿಳಿಸಿದೆ. ಪರೇಶ್ ಕುಮಾರ್ ಪಟೇಲ್ ಅವರನ್ನು 2012ರಲ್ಲಿ ಹತ್ಯೆ ಮಾಡಲಾಗಿತ್ತು.
ಪರೇಶ್ ಕುಮಾರ್ ಅವರನ್ನು ಅವರು ಕೆಲಸ ಮಾಡುತ್ತಿದ್ದ ವರ್ಜೀನಿಯಾದ ಚೆಸ್ಟರ್ಫೀಲ್ಸ್ನ ರೇಸ್ಅವೇ ಗ್ಯಾಸ್ ಸ್ಟೇಷನ್ನಿಂದ 2012ರ ಸೆಪ್ಟೆಂಬರ್ 16ರಂದು ಅಪಹರಣ ಮಾಡಲಾಗಿತ್ತು. ನಾಲ್ಕು ದಿನಗಳ ಬಳಿಕ ಅವರ ಮೃತದೇಹ ವರ್ಜೀನಿಯಾದ ರಿಚ್ಮಂಡ್ ನಗರದ ಆಂಕಾರೋ ಬೋಟ್ ಲ್ಯಾಂಡಿಂಗ್ನಲ್ಲಿ ಪತ್ತೆಯಾಗಿತ್ತು. ಅವರ ಮೃತದೇಹಕ್ಕೆ ಗುಂಡುಗಳು ಹೊಕ್ಕಿದ್ದವು.
ತೀವ್ರ ಕಗ್ಗಂಟಾಗಿದ್ದ ಈ ಪ್ರಕರಣವನ್ನು ಭೇದಿಸುವಲ್ಲಿ ರಿಚ್ಮಂಡ್ ಪೊಲೀಸ್ ಇಲಾಖೆ ವಿಫಲವಾಗಿದೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ನ (ಎಫ್ಬಿಐ) ರಿಚ್ಮಂಡ್ ಸೆಂಟ್ರಲ್ ವರ್ಜೀನಿಯಾ ಕ್ರೈಮ್ಸ್ ಟಾಸ್ಕ್ ಫೋರ್ಸ್ ತಂಡವು ರಿಚ್ಮಂಡ್ ಪೊಲೀಸ್ ಇಲಾಖೆ ನೆರವಿನೊಂದಿಗೆ ತನಿಖೆ ನಡೆಸುತ್ತಿದೆ. ಆದರೆ ಇದುವರೆಗೂ ಅದರ ಯಾವುದೇ ಸುಳಿವು ಸಿಕ್ಕಿಲ್ಲ.

ಪರೇಶ್ ಕುಮಾರ್ ಪಟೇಲ್ ಸೆ. 16ರಂದು ಅಂದಾಜು ಬೆಳಿಗ್ಗೆ 6 ಗಂಟೆಗೆ ತಮ್ಮ ಅಂಗಡಿಗೆ ಬಂದಿದ್ದರು. ವಾಹನದಿಂದ ಇಳಿದ ಕೂಡಲೇ ಇಬ್ಬರು ವ್ಯಕ್ತಿಗಳು ಅವರಿಗೆ ಎದುರಾಗಿದ್ದರು ಎಂದು ಚೆಸ್ಟರ್ ಫೀಲ್ಡ್ ಕೌಂಟಿ ಪೊಲೀಸರಿಗೆ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾಗಿ ಎಫ್ಬಿಐ ತಿಳಿಸಿದೆ.
ಮಾರುವೇಷದಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಪರೇಶ್ ಅವರನ್ನು ವ್ಯಾನ್ ಒಂದಕ್ಕೆ ತಳ್ಳಿ ಅವರನ್ನು ಅಪಹರಿಸಿದ್ದರು. ನಾಲ್ಕು ದಿನಗಳ ಬಳಿಕ ಅವರ ಮೃತದೇಹ ಪತ್ತೆಯಾಗಿತ್ತು.
-
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications