ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ಗೆ 22.5 ವರ್ಷ ಜೈಲು ಶಿಕ್ಷೆ
ವಾಷಿಂಗ್ಟನ್, ಜೂ.26: ಮೇ 2020 ರಲ್ಲಿ ಆಫ್ರಿಕನ್-ಅಮೆರಿಕನ್ ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಲ್ಪಟ್ಟ ಅಮೆರಿಕದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ಗೆ ಶುಕ್ರವಾರ 270 ತಿಂಗಳು ಅಥವಾ 22.5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸಿಎನ್ಎನ್ ವರದಿ ಮಾಡಿದೆ. ಈಗಾಗಲೇ ಜೈಲಿನಲ್ಲಿ ಇದ್ದ ಅವಧಿಯನ್ನು ಹೊರತುಪಡಿಸಿ ಈ ಶಿಕ್ಷೆ ನೀಡಲಾಗಿದೆ ಎಂದು ವರಿಯಾಗಿದೆ.
ಮಿನೆಸೋಟಾ ರಾಜ್ಯದ ಕೋರ್ಟ್ ನೀಡಿದ ಆದೇಶದ ಪ್ರಕಾರ, ಮಾಜಿ ಪೊಲೀಸ್ ಅಧಿಕಾರಿ ಮೇಲ್ವಿಚಾರಣೆಯ ಬಿಡುಗಡೆಗೆ ಅರ್ಹತೆ ಪಡೆಯುವ ಮೊದಲು ಶಿಕ್ಷೆಯ ಅವಧಿಯ ಮೂರನೇ ಎರಡರಷ್ಟು ಅಥವಾ 15 ವರ್ಷಗಳನ್ನು ಪೂರೈಸಬೇಕಾಗುತ್ತದೆ.
ಚಾವಿನ್ ವಿರುದ್ದ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಹೀಗಾಗಿ ಗರಿಷ್ಠ 12.5 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇತ್ತು. ಆದರೆ ''ಈ ಪ್ರಕರಣ ಅತ್ಯಂತ ಕ್ರೂರ'' ಎಂದು ಹೇಳಿರುವ ಕೋರ್ಟ್ ಹತ್ತು ವರ್ಷ ಹೆಚ್ಚುವರಿ ಶಿಕ್ಷೆ ಘೋಷಣೆ ಮಾಡಿದೆ. ಆದರೆ ಸಂತ್ರಸ್ಥರ ಕುಟುಂಬ ''ಅಪರಾಧಿಗೆ ಮೂವತ್ತು ವರ್ಷ ಜೈಲು ಶಿಕ್ಷೆ ವಿಧಿಸಬೇಕು,'' ಎಂದು ಮನವಿ ಮಾಡಿತ್ತು.

''ಚೌವಿನ್ ಎರಡನೇ ಹಂತದ ಕೊಲೆ, ಮೂರನೇ ಹಂತದ ಕೊಲೆ ಮತ್ತು ನರಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದೆ. ಚೌವಿನ್ಗೆ ಎರಡನೇ ಹಂತದ ಉದ್ದೇಶಪೂರ್ವಕ ಕೊಲೆಗೆ ಶಿಕ್ಷೆ ವಿಧಿಸಲಾಗಿದೆ. ನಂಬಿಕೆ ಹಾಗೂ ಅಧಿಕಾರವನ್ನು ದುರುಪಯೋಗ ಮಾಡಿದ ಹಿನ್ನೆಲೆ ಈ ಜೈಲು ಶಿಕ್ಷೆ ವಿಧಿಸಲಾಗಿದೆ,'' ಎಂದು ನ್ಯಾಯಾಧೀಶ ಪೀಟರ್ ಕಾಹಿಲ್ ಹೇಳಿದ್ದಾರೆ.
ಪ್ರಕರಣವೇನು?
ಮೇ 25, 2020 ರಂದು, ಮಿನೆಸೋಟಾದ ಅಂಗಡಿಯೊಂದರಲ್ಲಿ ನಕಲಿ ಬಿಲ್ ಬಳಸಿದ ಆರೋಪದ ಮೇಲೆ ನಾಲ್ಕು ಪೊಲೀಸ್ ಅಧಿಕಾರಿಗಳು ಫ್ಲಾಯ್ಡ್ ಅನ್ನು ವಶಕ್ಕೆ ಪಡೆದಿದ್ದಾರೆ. ನಿರಾಯುಧನಾಗಿದ್ದ ಫ್ಲಾಯ್ಡ್ ಕುತ್ತಿಗೆಗೆ ತನ್ನ ಮಂಡಿಯಲ್ಲಿ ಡೆರೆಕ್ ಚೌವಿನ್ ಅದುಮಿಟ್ಟಿದ್ದನು. ಈ ಸಂದರ್ಭದಲ್ಲಿ ಬೇರೆ ಯಾವ ಅಧಿಕಾರಿಗಳು ಡೆರೆಕ್ ಚೌವಿನ್ರನ್ನು ತಡೆದಿಲ್ಲ. ''ನನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ'' ಎಂದು ಹೇಳುತ್ತಿದ್ದ ಜಾರ್ಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಕುತ್ತಿಗೆ ಮತ್ತು ಬೆನ್ನಿಗೆ ಬಲ ಬಿದ್ದ ಕಾರಣ ಉಸಿರುಗಟ್ಟಿ ಜಾರ್ಜ್ ಫ್ಲಾಯ್ಡ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಈ ಕುಕೃತ್ಯದ ದೃಶ್ಯದ ಸುಮಾರು ಒಂಬತ್ತು ನಿಮಿಷಗಳ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಭಾರೀ ಪ್ರತಿಭಟನೆ ಭುಗಿಲೆದ್ದಿತ್ತು. ಕಪ್ಪು ವರ್ಣೀಯರ ವಿರುದ್ದದ ಧೋರಣೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
(ಒನ್ಇಂಡಿಯಾ ಸುದ್ದಿ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications