ಭಾರತಕ್ಕೆ 135 ಕೋಟಿ ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ
ವಾಷಿಂಗ್ಟನ್, ಏಪ್ರಿಲ್ 26: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ 135 ಕೋಟಿ ರೂ. ನೆರವು ನೀಡಲು ಗೂಗಲ್ ಸಿಇಒ ಸುಂದರ್ ಪಿಚೈ ನಿರ್ಧರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಂದರ್ ಪಿಚೈ ಅವರು, ಭಾರತದಲ್ಲಿನ ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ನೋಡಿ ಮನಸ್ಸು ಒಡೆದುಹೋದಂತಾಗಿದೆ.
ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.
Devastated to see the worsening Covid crisis in India. Google & Googlers are providing Rs 135 Crore in funding to @GiveIndia, @UNICEF for medical supplies, orgs supporting high-risk communities, and grants to help spread critical information.https://t.co/OHJ79iEzZH
— Sundar Pichai (@sundarpichai) April 26, 2021
ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಅವರೂ ಕೂಡ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.

ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಕೂಡ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶವಸಂಸ್ಕಾರಕ್ಕಾಗಿ ಶವಾಗಾರಗಳ ಮುಂದೆ ಮೃತರ ಸಂಬಂಧಿಕರು ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೂ ಮೊದಲು ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ, 'ಭಾರತದ ಪ್ರಸ್ತುತ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಈ ಸಂಕಷ್ಟದ ಪರಿಸ್ಥಿಯಿಲ್ಲಿ ಅಮೆರಿಕ ಸರ್ಕಾರವು ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ.
ಮೈಕ್ರೋಸಾಫ್ಟ್ ಸಂಸ್ಥೆ ತನ್ನ ಧ್ವನಿ, ಸಂಪನ್ಮೂಲ, ಮತ್ತು ತಂತ್ರಜ್ಞಾನವನ್ನು ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಯನ್ನು ಬೆಂಬಲಿಸಲು ಬಳಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದರು.
ಇನ್ನು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರತಿನಿತ್ಯ 3.50ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ.
ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಆಸ್ಪತ್ರೆಗಳ ಬೆಡ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಬೆಡ್ ಗಳಿಲ್ಲದೆ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದಾರೆ. ಅಂತೆಯೇ ಇತ್ತ ಅಸ್ಪತ್ರೆಗೆ ದಾಖಲಾದ ಸೋಂಕಿತರೂ ಕೂಡ ಆಮ್ಲಜನಕ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದು, ಸಾಕಷ್ಟು ರೋಗಿಗಳು ಆಮ್ಲಜನಕ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications