ಟ್ರಂಪ್ ಕಿತ್ತೊಗೆಯಲು 25ನೇ ತಿದ್ದುಪಡಿ ತನ್ನಿ: ನ್ಯಾನ್ಸಿ ಒತ್ತಾಯ
ವಾಷಿಂಗ್ಟನ್, ಜನವರಿ 8: ಡೊನಾಲ್ಡ್ ಟ್ರಂಪ್ ಅವರನ್ನು ಅಧಿಕಾರದಿಂದ ಕಿತ್ತುಹಾಕಲು 25ನೇ ತಿದ್ದುಪಡಿಯನ್ನು ಜಾರಿಗೆ ತರುವಂತೆ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಸಂಪುಟಕ್ಕೆ ಅಮೆರಿಕ ಸಂಸತ್ ಸ್ಪೀರ್ ನ್ಯಾನ್ಸಿ ಪೆಲೋಸಿ ಗುರುವಾರ ಕರೆ ನೀಡಿದ್ದಾರೆ.
ಒಂದು ವೇಳೆ ಟ್ರಂಪ್ ಅವರನ್ನು ಪದಚ್ಯುತಗೊಳಿಸಲು 25ನೇ ತಿದ್ದುಪಡಿಯನ್ನು ಹೇರದೆ ಹೋದರೆ ಅಧ್ಯಕ್ಷರ ವಿರುದ್ಧ ವಾಗ್ದಂಡನೆಗೆ ಕಾಂಗ್ರೆಸ್ ಮುಂದಾಗಲಿದೆ ಎಂದು ಪೆಲೋಸಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
'ತಕ್ಷಣವೇ 25ನೇ ತಿದ್ದುಪಡಿ ಜಾರಿಗೆ ತರುವ ಮೂಲಕ ಅಧ್ಯಕ್ಷರನ್ನು ಪದಚ್ಯುತಗೊಳಿಸಬೇಕು ಎಂಬ ಡೆಮಾಕ್ರಟಿಕ್ನ ಸೆನೆಟ್ ಸದಸ್ಯರ ಬೇಡಿಕೆಗೆ ನಾನು ದನಿಗೂಡಿಸುತ್ತೇನೆ. ಉಪಾಧ್ಯಕ್ಷರು ಮತ್ತು ಸಂಪುಟವು ಕ್ರಮ ತೆಗೆದುಕೊಳ್ಳದೆ ಹೋದರೆ ನನ್ನ ಕ್ಷೇತ್ರ ಹಾಗೂ ಅಮೆರಿಕದ ಜನರ ಅಗಾಧ ಭಾವನೆಗಳಿಗೆ ಅನುಗುಣವಾಗಿ ವಾಗ್ದಂಡನೆ ವಿಧಿಸುವ ಪ್ರಕ್ರಿಯೆಗೆ ಮುಂದಾಗಲು ಕಾಂಗ್ರೆಸ್ ಸಿದ್ಧವಾಗಬಹುದು' ಎಂದು ಅವರು ಹೇಳಿದ್ದಾರೆ.

ಅಧಿಕಾರದಿಂದ ಕೆಳಗಿಳಿಯಲು ಮತ್ತು ಕಚೇರಿ ಕರ್ತವ್ಯಗಳನ್ನು ತ್ಯಜಿಸಲು ಡೊನಾಲ್ಡ್ ಟ್ರಂಪ್ ಮುಂದಾಗದ ಹಿನ್ನೆಲೆಯಲ್ಲಿ ಅವರನ್ನು ಬಲವಂತವಾಗಿ ಪದಚ್ಯುತಗೊಳಿಸಲು 25ನೇ ತಿದ್ದುಪಡಿಯನ್ನು ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಪ್ರಕ್ರಿಯೆಗೆ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಸಂಪುಟದ ಬಹುಸಂಖ್ಯೆಯ ಸದಸ್ಯರು ಮತ ಚಲಾಯಿಸಬೇಕು.
ಇದಕ್ಕೂ ಮುನ್ನ ಡೆಮಾಕ್ರಟಿಕ್ ಸೆನೆಟ್ ಮುಖಂಡ ಚುಕ್ ಷೂಮರ್ ಕೂಡ 25ನೇ ತಿದ್ದುಪಡಿಯನ್ನು ಹೇರುವಂತೆ ಪೆನ್ಸ್ ಅವರನ್ನು ಒತ್ತಾಯಿಸಿದ್ದರು. ಎಲೆಕ್ಟೊರಲ್ ಕಾಲೇಜ್ ಮತಗಳ ವಿರುದ್ಧ ಪ್ರತಿಭಟನೆ ನಡೆಸಿದ್ದ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಯುಎಸ್ ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿ ಹಿಂಸಾಚಾರ ನಡೆಸಿದ್ದರು. ಟ್ರಂಪ್ ಅವರ ಕುಮ್ಮಕ್ಕಿನಂತೆ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿತ್ತು. ಇದರ ಬಳಿಕ ಡೊನಾಲ್ಡ್ ಟ್ರಂಪ್ ಸುಗಮ ಅಧಿಕಾರ ಹಸ್ತಾಂತರ ನಡೆಸಲು ಒಪ್ಪಿಕೊಂಡಿದ್ದರೂ, ಗಲಭೆ ಘಟನೆಯಿಂದ ಅಸಮಾಧಾನಗೊಂಡಿರುವ ಸಂಸದರು ಅವರ ನಡೆಯ ಬಗ್ಗೆ ಅನುಮಾನ ಇರುವುದರಿಂದ ಟ್ರಂಪ್ ಅವರ ಪದಚ್ಯುತಿ ಮಾರ್ಗ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications