ಯುನೆಸ್ಕೋ ಕಾರ್ಯಕಾರಿ ಮಂಡಳಿಗೆ ಭಾರತ ಮತ್ತೆ ಆಯ್ಕೆ
ವಿಶ್ವಸಂಸ್ಥೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆ(ಯುನೆಸ್ಕೋ)ದ ಕಾರ್ಯಕಾರಿ ಮಂಡಳಿಗೆ ಭಾರತ ಮತ್ತೆ ಆಯ್ಕೆಯಾಗಿದೆ. 2021ರಿಂದ 2025ರವರೆಗೆ ಭಾರತದ ಸದಸ್ಯತ್ವ ಹೀಗೆಯೇ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬುಧವಾರ ಯುನೆಸ್ಕೋ ಕಾರ್ಯಕಾರಿ ಮಂಡಳಿ ಸದಸ್ಯರ ಚುನಾವಣೆ ನಡೆಯಿತು, ಆರನೇ ಗುಂಪಿನ ಏಷ್ಯಾ ಮತ್ತು ಪೆಸಿಫಿಕ್ ರಾಷ್ಟ್ರಗಳ ಪೈಕಿ ಜಪಾನ್, ಫಿಲಿಪೀನ್ಸ್, ವಿಯೆಟ್ನಾಂ, ಕುಕ್ ಐಲ್ಯಾಂಡ್ಸ್ ಹಾಗೂ ಚೀನಾ ಕೂಡ ಆಯ್ಕೆಯಾಗಿವೆ.
ಭಾರತವು ಒಟ್ಟು 164 ಮತಗಳನ್ನು ಪಡೆಯುವ ಯುನೆಸ್ಕೋದ ಕಾರ್ಯಕಾರಿ ಮಂಡಳಿಯ ಸದಸ್ಯ ಸ್ಥಾನಕ್ಕೆ 2020-25ರ ಅವಧಿಗೆ ಮರು ಆಯ್ಕೆಯಾಗಿದೆ ಎಂದು ಪ್ಯಾರಿಸ್ನಲ್ಲಿರುವ ಯುನೆಸ್ಕೋದ ಭಾರತದ ಕಾಯಂ ನಿಯೋಗದ ಟ್ವಿಟ್ಟರ್ ಖಾತ್ರಿ ಪಡಿಸಿದೆ.

ವಿಶ್ವಸಂಸ್ಥೆಯಲ್ಲಿರುವ ಸಾಮಾನ್ಯ ಸಭೆಯ ಅಡಿಯಲ್ಲಿ ಯುನೆಸ್ಕೋ ಕಾರ್ಯಕಾರಿ ಮಂಡಳಿ ಕಾರ್ಯಾಚರಿಸುತ್ತಿದೆ. ಸಂಸ್ಥೆಯ ಕಾರ್ಯಕ್ರಮಗಳು ಹಾಗೂ ಪ್ರಧಾನ ನಿರ್ದೇಶಕರು ಸಲ್ಲಿಸುವ ಬಜೆಟ್ ಅಂದಾಜಿಗೆ ಸಂಬಂಧಿಸಿದಂತೆ ಕಾರ್ಯಕಾರಿ ಮಂಡಳಿಯು ಪರಿಶೀಲನೆ ನಡೆಸುತ್ತಿದೆ.
ಯುನೆಸ್ಕೋ ವೆಬ್ಸೈಟ್ ಪ್ರಕಾರ, ಕಾರ್ಯಕಾರಿ ಮಂಡಳಿಯು 58 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಪ್ರತಿ ಸದಸ್ಯ ರಾಷ್ಟ್ರವು ನಾಲ್ಕು ವರ್ಷಗಳ ಕಾರ್ಯಾಚರಣೆ ಅವಧಿ ಹೊಂದಿರುತ್ತದೆ.
ವಿಶ್ವ ಸಂಸ್ಥೆಯ ಮೂರು ಅಂಗಗಳಲ್ಲಿ ಯುನೆಸ್ಕೋ ಕಾರ್ಯಕಾರಿ ಮಂಡಳಿಯೂ ಕೂಡ ಒಂದು. ಧ್ವನಿಮತದ ಮೂಲಕ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ ಮೂರು ಸಂಸ್ಥೆಗಳ ಕಾರ್ಯಕಾರಿ ಸಮಿತಿಗೆ ಭಾರತವನ್ನು ಸದಸ್ಯ ರಾಷ್ಟ್ರವನ್ನಾಗಿ ಏಪ್ರಿಲ್ನಲ್ಲಿ ಆಯ್ಕೆ ಮಾಡಲಾಗಿತ್ತು.
ಜನವರಿ 1 2022 ರಿಂದ ಆರಂಭವಾಗಲಿರುವ ವಿಶ್ವಸಂಸ್ಥೆಯ ಅಪರಾಧ ತಡೆಗಟ್ಟುವಿಕೆ ಮತ್ತು ಅಪರಾಧ ನ್ಯಾಯ ಆಯೋಗ, ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ ಮತ್ತು ವಿಶ್ವ ಆಹಾರ ಕಾರ್ಯಕ್ರಮಗಳ ಕಾರ್ಯಕಾರಿ ಸಮಿತಿಗೆ ಭಾರತವನ್ನು ಆಯ್ಕೆ ಮಾಡಲಾಗಿದೆ.
ಅಪರಾಧ ತಡೆಗಟ್ಟುವಿಕೆ ಮತ್ತು ಅಪರಾಧ ನ್ಯಾಯ ಆಯೋಗಕ್ಕೆ ಆಸ್ಟ್ರಿಯಾ, ಬಹ್ರೇನ್, ಬೆಲರಸ್, ಬಲ್ಗೇರಿಯಾ, ಕೆನಡಾ, ಫ್ರಾನ್ಸ್, ಘಾನಾ, ಲಿಬಿಯಾ, ಪಾಕಿಸ್ತಾನ, ಕತಾನರ್, ಥಾಯ್ಲೆಂಡ್ ಹಾಗೂ ಅಮೆರಿಕ ರಾಷ್ಟ್ರಗಳನ್ನೂ ಧ್ವನಿ ಮತದ ಮೂಲಕ ಆಯ್ಕೆ ಮಾಡಿದ್ದರೆ, ಬ್ರೆಜಿಲ್, ಡೊಮಿನಿಕನ್ ಗಣರಾಜ್ಯ, ಪರಗ್ವೆ, ಚಿಲಿ, ಕ್ಯೂಬಾ ರಾಷ್ಟ್ರಗಳನ್ನು ಗೌಪ್ಯ ಮತದಾನದ ಮೂಲಕ ಆಯ್ಕೆ ಮಾಡಲಾಗಿತ್ತು.
ವಿಶ್ವಸಂಸ್ಥೆಯ ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ ವಿಭಾಗದ ಕಾರ್ಯನಿರ್ವಾಹಕ ಮಂಡಳಿಗೆ ಭಾರತದೊಂದಿಗೆ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಕ್ಯಾಮರೂನ್, ಕೊಲಂಬಿಯಾ, ಈಜಿಪ್ಟ್, ಗ್ಯಾಂಬಿಯಾ, ಗಯಾನಾ, ಮೊನೊಕೊ, ಪೋಲೆಂಡ್, ದಕ್ಷಿಣ ಆಫ್ರಿಕಾ, ಉಕ್ರೇನ್ ದೇಶಗಳನ್ನು ಧ್ವನಿ ಮತದ ಮೂಲಕ ಆಯ್ಕೆ ಮಾಡಲಾಗಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications