ಭಾರತದ ವ್ಯಾಪಾರ ಒಪ್ಪಂದ ಉತ್ಸುಕತೆ ಹಿಂದಿನ ರಹಸ್ಯ ಬಿಚ್ಚಿಟ್ಟ ಟ್ರಂಪ್
ವಾಷಿಂಗ್ಟನ್, ಅಕ್ಟೋಬರ್ 02: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವು ತ್ವರಿತವಾಗಿ ವ್ಯಾಪಾರ ವಹಿವಾಟು ಒಪ್ಪಂದಕ್ಕೆ ಮುಂದಾಗುತ್ತಿರುವ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಮೆಕ್ಸಿಕೋ, ಕೆನಡಾ ನಡುವೆ ಯುಎಸ್ಎ ವ್ಯಾಪಾರ ಒಪ್ಪಂದ ಏರ್ಪಟ್ಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, ಭಾರತವು ನನ್ನನ್ನು ಖುಷಿಪಡಿಸಲು ಯತ್ನಿಸುತ್ತಿದೆ ಎಂದರು.
ಶ್ವೇತಭವನದಲ್ಲಿ ಮಾತನಾಡಿದ ಟ್ರಂಪ್, ಭಾರತವನ್ನು 'ಟ್ಯಾರಿಫ್ ಕಿಂಗ್' ಎಂದು ಕರೆದರು. 'ನಮಗೆ ಕರೆ ಮಾಡಿ, ತಕ್ಷಣವೇ ಮಾತುಕತೆ ನಡೆಸುವುದರ ಬಗ್ಗೆ ಕೇಳಿಕೊಂಡಿದ್ದಾರೆ' ಎಂದು ಟ್ರಂಪ್ ಹೇಳಿಕೆ ಉಲ್ಲೇಖಿಸಿ ಎಎಫ್ ಪಿ ವರದಿ ಮಾಡಿದೆ.

ಯುಎಸ್ ಟ್ರೇಡ್ ಪ್ರತಿನಿಧಿ ಮಾರ್ಕ್ ಲಿನ್ ಸ್ಕಾಟ್ ಅವರು ಇತ್ತೀಚೆಗೆ ಭಾರತ ಪ್ರವಾಸ ಕೈಗೊಂಡು, ಯುಎಸ್ ಗೆ ಮರಳಿದ್ದಾರೆ. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ವಹಿವಾಟು ಹಾಗೂ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಭಾರತದ ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದರು.
ಟ್ರಂಪ್ ಗೆ ಮುನಿಸೇಕೆ?: ಅಮೆರಿಕದ ಉತ್ಪನ್ನಗಳ ಮೇಲೆ ಭಾರತದಲ್ಲಿ ಭಾರಿ ಸುಂಕ ಹಾಕಲಾಗುತ್ತಿದೆ. ಹಾರ್ಲೆ ಡೇವಿಡ್ಸನ್ ಮೋಟರ್ ಸೈಕಲ್ ಮೇಲಿನ ಸುಂಕ ವಿವಾದವನ್ನು ಉಲ್ಲೇಖಿಸಲಾಗಿದೆ.
ಈ ಬಗ್ಗೆ ಪ್ರಧಾನಿ ಮೋದಿ ಅವರ ಜತೆ ಮಾತುಕತೆ ನಡೆಸಿದ್ದೇನೆ. ಸುಂಕ ಇಳಿಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ. ಆದರೆ, ಸುಂಕ ಇಳಿಕೆಯಿಂದಲೂ ಬೆಲೆಯಲ್ಲಿ ವ್ಯತ್ಯಾಸವಾಗುವುದಿಲ್ಲ ಎಂದು ಹೇಳಿದರು.
ಹಾರ್ಲೆ ಡೇವಿಡ್ಸನ್ ಬೈಕಿನ ಮೇಲೆ ಹೆಚ್ಚು ಆಮದು ಸುಂಕ ಹೇರಿರುವ ಭಾರತದ ವಿರುದ್ಧ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಕಿಡಿಕಾರಿದ್ದಾರೆ.
ವಿದೇಶಗಳಿಂದ ಆಮದು ಮಾಡಿಕೊಳ್ಳುವ ದುಬಾರಿ ಬೆಲೆಯ ದ್ವಿಚಕ್ರವಾಹನಗಳ ಮೇಲೆ ಅಬಕಾರಿ ಸುಂಕವನ್ನು ಶೇ50ರಷ್ಟು ಕೇಂದ್ರ ಸರ್ಕಾರ ತಗ್ಗಿಸಿದೆ. ಆದರೆ, ಇದರಿಂದ ಟ್ರಂಪ್ ಅವರು ಖುಷಿಯಾಗಿಲ್ಲ.
ಕಸ್ಟಮ್ಸ್ ಸುಂಕ ತಗ್ಗಿಸಿರುವುದರಿಂದ ಟ್ರಯಾಂಪ್, ಹಾರ್ಲೆ ಬೆಲೆ ತಗ್ಗುವುದರಿಂದ ನಷ್ಟ. ಪರೋಕ್ಷ ತೆರಿಗೆ ವಿಧಿಸಬಹುದಾಗಿತ್ತು ಎಂದು ಟ್ರಂಪ್ ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications