ಎಚ್1 ಬಿ ವೀಸಾ ವಂಚನೆ, ಇಂಡೋ -ಅಮೆರಿಕನ್ ಸಿಇಒ ಬಂಧನ
ವಾಷಿಂಗ್ಟನ್, ಫೆಬ್ರವರಿ 06: ಅಮೆರಿಕದ ನಕಲಿ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಪಡೆದುಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ ಪ್ರಕರಣದ ಬೆನ್ನಲ್ಲೇ, ಎಚ್ 1 ಬಿ ವೀಸಾ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಭಾರತೀಯ ಮೂಲದ ಅಮೆರಿಕನ್ ಒಬ್ಬರನ್ನು ಬಂಧಿಸಲಾಗಿದೆ.
ನ್ಯೂಜೆರ್ಸಿಯ ಪಿಸ್ಕಾಟವೇ ಟೌನ್ ಶಿಪ್ ನಿವಾಸಿಯಾಗಿರುವ ನೀರಜ್ ಶರ್ಮ(43) ಅವರು 11 ನಕಲಿ ಎಚ್1 ಬಿ ವೀಸಾ ಅರ್ಜಿಗಳನ್ನು ಸಲ್ಲಿಸಿದ್ದಲ್ಲದೆ, ಅಕ್ರಮವಾಗಿ ಯು ಸ್ ಪೌರತ್ವ ಪಡೆದಿರುವುದು ಕಂಡು ಬಂದಿದೆ ಎಂದು ಯುಎಸ್ ಅಟರ್ನಿ ಕ್ರೇಗ್ ಕಾರ್ಪೆನಿಟೋ ಹೇಳಿದ್ದಾರೆ.
ನೆವಾರ್ಕ್ ಫೆಡರಲ್ ಕೋರ್ಟಿನ ಯುಎಸ್ ಮ್ಯಾಜಿಸ್ಟ್ರೇಟ್ ಜಡ್ಜ್ ಮೈಕಲ್ ಹಮಾರ್ ಎದುರು ವಿಚಾರಣೆಗೆ ನೀರಜ್ ಶರ್ಮ ಹಾಜರಾಗಬೇಕಿದೆ.

ನೀರಜ್ ವಿರುದ್ಧದ ಎಲ್ಲಾ ಆರೋಪಗಳು ಸಾಬೀತಾದರೆ 10 ವರ್ಷ ಜೈಲುಶಿಕ್ಷೆ ಹಾಗೂ 250,000 ಯುಎಸ್ ಡಾಲರ್ ದಂಡ ವಿಧಿಸಲಾಗುತ್ತದೆ. ನಕಲಿ ದಾಖಲೆಗಳನ್ನು ನೀಡಿ ವಿದೇಶಿ ಐಟಿ ಉದ್ಯೋಗಿಗಳನ್ನು ಕಡಿಮೆ ವೆಚ್ಚದಲ್ಲಿ ಯುಎಸ್ ನಲ್ಲಿ ಕಾರ್ಯನಿರ್ವಹಿಸಲು ನೇಮಕ ಮಾಡಿದ್ದರು ಎಂದು ತಿಳಿದು ಬಂದಿದೆ.
ನ್ಯೂಜೆರ್ಸಿಯ ಸಮರ್ ಸೆಟ್ ನಲ್ಲಿರುವ ಮ್ಯಾಗ್ನವಿಷನ್ ಎಲ್ಎಲ್ ಸಿ ಎಂಬ ಮಾಹಿತಿ ತಂತ್ರಜ್ಞಾನ ಕನ್ಸಲ್ಟಿಂಗ್ ಕಂಪನಿಯ ಮಾಲೀಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದಾರೆ.
ಸುಮಾರು 65,000 ವೀಸಾಗಳನ್ನು ವಿದೇಶದಿಂದ ನೇಮಕವಾಗುವ ಉದ್ಯೋಗಿಗಳಿಗೆ ಯುಎಸ್ ನೀಡುತ್ತಿದೆ. ಯುಎಸ್ ಕಾಲೇಜ್ ಹಾಗೂ ವಿವಿಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ವಿದೇಶಿಯರಿಗೆ 20,000 ವೀಸಾಗಳು ಲಭ್ಯವಾಗುತ್ತಿದೆ.
ಈ ನಡುವೆ ವಿದ್ಯಾರ್ಥಿ ವೀಸಾಗಳನ್ನು ದುರುಪಯೋಗಪಡಿಸುವವರನ್ನು ಪತ್ತೆಹಚ್ಚುವುದಕ್ಕಾಗಿ ಅಮೆರಿಕದ ಗುಪ್ತಚರ ಸಂಸ್ಥೆಗಳು ಮಿಶಿಗನ್ ರಾಜ್ಯದಲ್ಲಿ 'ಫಾರ್ಮಿಂಗ್ಟನ್ ವಿಶ್ವವಿದ್ಯಾನಿಲಯ' ಎಂಬ ನಕಲಿ ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸಿದೆ.
ಈ ವಿಶ್ವವಿದ್ಯಾನಿಲಯಕ್ಕೆ ಕಮಿಶನ್ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸುತ್ತಿದ್ದ ಆರೋಪದಲ್ಲಿ ಭಾರತ ಮೂಲದ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿರುವುದನ್ನು ಸ್ಮರಿಸಬಹುದಾಗಿದೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications