ಅಮೆರಿಕದ ಅಧ್ಯಕ್ಷರ ಪದಗ್ರಹಣ ಸಮಿತಿಯಲ್ಲಿ ಭಾರತ ಮೂಲದ ಮಜು ವರ್ಗೀಸ್
ವಾಷಿಂಗ್ಟನ್, ಡಿಸೆಂಬರ್ 2: ಅಮೆರಿಕದ ಅಧ್ಯಕ್ಷೀಯ ಪದಗ್ರಹಣ ಸಮಿತಿಯ ನಾಲ್ವರು ಸದಸ್ಯರಲ್ಲಿ ಭಾರತ ಮೂಲದ ಅಮೆರಿಕನ್ ಮಜು ವರ್ಗೀಸ್ ಅವರನ್ನು ಚುನಾಯಿತ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಯ್ಕೆ ಮಾಡಿದ್ದಾರೆ. ಜನವರಿ 20ರಂದು ಡೊನಾಲ್ಡ್ ಟ್ರಂಪ್ ಅವರು ಅಧಿಕಾರ ಹಸ್ತಾಂತರ ಮಾಡಬೇಕಿದ್ದು, ಅಂದು ನಡೆಯುವ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಪದಗ್ರಹಣಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳನ್ನು ಈ ಸಮಿತಿ ಆಯೋಜಿಸಲಿದೆ.
ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಟೋನಿ ಅಲೆನ್, ಕಾರ್ಯಕಾರಿ ನಿರ್ದೇಶಕರಾಗಿ ಮಜು ವರ್ಗೀಸ್, ಉಪ ಕಾರ್ಯಕಾರಿ ನಿರ್ದೇಶಕರಾಗಿ ಎರಿನ್ ವಿಲ್ಸನ್ ಮತ್ತು ವಿಯಾನ್ನಾ ಕ್ಯಾನ್ಸೆಲಾ ಅವರನ್ನು ಈ ಸಮಿತಿಗೆ ಆಯ್ಕೆ ಮಾಡಲಾಗಿದೆ.
'ಅಮೆರಿಕ ಚುನಾಯಿತ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಉದ್ಘಾಟನಾ ಚಟುವಟಿಕೆಗಳನ್ನು ಆಯೋಜಿಸುವ ತಂಡವನ್ನು ಮುನ್ನಡೆಸುವ ಕಾರ್ಯಕ್ಕೆ ನೆರವಾಗುವುದು ನನಗೆ ದೊರೆತ ಗೌರವವಾಗಿದೆ. ಅವರಿಬ್ಬರೂ ಅಮೆರಿಕನ್ನರ ಆರೋಗ್ಯ ಮತ್ತು ಸುರಕ್ಷತೆಯನ್ನು ರಕ್ಷಿಸುವ ತಮ್ಮ ಬದ್ಧತೆಯನ್ನು ಉಳಿಸಿಕೊಳ್ಳುವುದರ ಜತೆಗೆ ನಮ್ಮ ದೇಶದ ಬಲ ಮತ್ತು ಸ್ಥಿತಿಸ್ಥಾಪಕತೆಯನ್ನು ಪ್ರದರ್ಶಿಸುವ ಕಾರ್ಯ ಮಾಡುತ್ತಿದ್ದಾರೆ' ಎಂದು ಮಜು ವರ್ಗೀಸ್ ಹೇಳಿದ್ದಾರೆ.

ಮಜು ಅವರು ಬೈಡನ್ ಅಧಿಕಾರ ಹಸ್ತಾಂತರ ಪ್ರಕ್ರಿಯೆ ತಂಡದಲ್ಲಿ ಪ್ರಮುಖ ಸ್ಥಾನ ಪಡೆದ ಭಾರತ ಮೂಲದ ಐದನೇ ವ್ಯಕ್ತಿಯಾಗಿದ್ದಾರೆ. ಈ ಉದ್ಘಾಟನಾ ಸಮಾರಂಭವು ಅಮೆರಿಕದ ಅಧ್ಯಕ್ಷರ ಮುಂದಿನ ನಾಲ್ಕು ವರ್ಷದ ಅಧಿಕಾರಾವಧಿಯನ್ನು ಆರಂಭಿಸುತ್ತದೆ. ಪ್ರಮಾಣವಚನ ಸ್ವೀಕಾರ, ಉದ್ಘಾಟನಾ ಭಾಷಣ, ಪಥಸಂಚಲನ ಮುಂತಾದ ಚಟುವಟಿಕೆಗಳು ಅಂದು ನಡೆಯಲಿದೆ.
ಬೈಡನ್-ಹ್ಯಾರಿಸ್ ಅವರ ಪ್ರಚಾರ ತಂಡದಲ್ಲಿ ಪ್ರಾಥಮಿಕ ಚುನಾವಣೆಗಳಿಂದ ಸಾರ್ವತ್ರಿಕ ಚುನಾವಣೆಯವರೆಗೂ ಮುಖ್ಯಕಾರ್ಯಾರಣೆ ಅಧಿಕಾರಿ ಮತ್ತು ಹಿರಿಯ ಸಲಹೆಗಾರರಾಗಿದ್ದ ಮಜು, ದೈನಂದಿನ ಪ್ರಚಾರ ಕಾರ್ಯಾಚರಣೆಯ ಬಗ್ಗೆ ಗಮನ ಹರಿಸಿದ್ದರು. ಅವರು ಬರಾಕ್ ಒಬಾಮ ಆಡಳಿತದಲ್ಲಿಯೂ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಮಜು ಅವರು ಅಮೆರಿಕದಲ್ಲಿ ಜನಿಸಿದ್ದು, ಅವರ ಪೋಷಕರು ಕೇರಳದ ತಿರುವಲ್ಲದಿಂದ ವಲಸೆ ಹೋಗಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications