ಜಿಲ್ ಬೈಡನ್ ನೀತಿ ನಿರ್ದೇಶಕರಾಗಿ ಭಾರತ ಮೂಲದ ಮಾಲಾ ಅಡಿಗ ನೇಮಕ
ವಾಷಿಂಗ್ಟನ್, ನವೆಂಬರ್ 21: ಶ್ವೇತಭವನ ಪ್ರವೇಶಿಸುವುದಕ್ಕೂ ಮುನ್ನ ತಮ್ಮ ಆಡಳಿತ ತಂಡವನ್ನು ಕಟ್ಟುತ್ತಿರುವ ಚುನಾಯಿತ ಅಧ್ಯಕ್ಷ ಜೋ ಬೈಡನ್, ಬರಾಕ್ ಒಬಾಮ ಅವರ ಆಡಳಿತದಲ್ಲಿದ್ದ ನಾಲ್ವರು ಹಿರಿಯರನ್ನು ತಮ್ಮ ಉನ್ನತ ಕಚೇರಿಗಳನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ.
ಭಾರತ ಮೂಲದ ಮಾಲಾ ಅಡಿಗ ಅವರು ಬೈಡನ್ ಆಡಳಿತದಲ್ಲಿ ಪ್ರಮುಖ ಹುದ್ದೆ ಪಡೆದುಕೊಂಡಿದ್ದಾರೆ. ಬೈಡನ್ ಪ್ರತಿಷ್ಠಾನದಲ್ಲಿ ಉನ್ನತ ಶಿಕ್ಷಣ ಮತ್ತು ಸೇನಾ ಕುಟುಂಬಗಳ ವಿಭಾಗದ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಾಲಾ ಅಡಿಗ ಅವರು, ಒಬಾಮ ಆಡಳಿತದ ಅವಧಿಯಲ್ಲಿ ಒಬಾಮ ಸರ್ಕಾರದ ಅವಧಿಯಲ್ಲಿ ಜೋ ಬೈಡನ್ ಉಪಾಧ್ಯಕ್ಷರಾಗಿದ್ದಾಗ ಅವರ ಪತ್ನಿ ಜಿಲ್ ಬೈಡನ್ ಅವರಿಗೆ ನೀತಿ ಸಲಹೆಗಾರರೂ ಆಗಿದ್ದರು. ಈ ಬಾರಿ ಅವರು ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ನೀತಿ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ.
ಜಿಲ್ ಬೈಡನ್ ಅವರಿಗೆ ಸಿಬ್ಬಂದಿ ಮುಖ್ಯಸ್ಥರಾಗಿದ್ದ ಕ್ಯಾಥಿ ರಸೆಲ್ ಅವರನ್ನು ಶ್ವೇತಭವನದಲ್ಲಿನ ಅಧ್ಯಕ್ಷರ ಖಾಸಗಿ ಕಚೇರಿಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಒಬಾಮ ಆಡಳಿತದಲ್ಲಿ ಅಧ್ಯಕ್ಷರ ಶಾಸಕಾಂಗ ಸಲಹೆಗಾರ ಮತ್ತು ಸೆನೆಟ್ನಲ್ಲಿ ಸಿಬ್ಬಂದಿ ಉಪ ಮುಖ್ಯಸ್ಥರಾಗಿದ್ದ ಲೌಸಿಯಾ ಟೆರೆಲ್ ಅವರನ್ನು ಶ್ವೇಭವನದ ಶಾಸಕಾಂಗ ವ್ಯವಹಾರಗಳ ಕಚೇರಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಹಾಗೆಯೇ ಜೋ ಬೈಡನ್ ಉಪಾಧ್ಯಕ್ಷರಾಗಿದ್ದಾಗ ಜಿಲ್ ಬೈಡನ್ ಅವರಿಗೆ ಸಾಮಾಜಿಕ ಕಾರ್ಯದರ್ಶಿಯಾಗಿದ್ದ ಕಾರ್ಲೋಸ್ ಎಲಿಜೊಂಡೊ ಅವರಿಗೆ ಅದೇ ಹುದ್ದೆ ನೀಡಲಾಗಿದೆ. ಇನ್ನು ಜೋ ಬೈಡನ್ ಅವರ ಸಾರ್ವಜನಿಕ ವ್ಯವಹಾರದ ಶ್ವೇತಭವನ ಕಚೇರಿಯ ನಿರ್ದೇಶಕರಾಗಿ ಕೆಡ್ರಿಕ್ ರಿಚ್ಮಂಡ್, ಸಿಬ್ಬಂದಿ ಉಪ ಮುಖ್ಯಸ್ಥರನ್ನಾಗಿ ಜೇನ್ ಓ ಮ್ಯಾಲ್ಲಿ ಡಿಲ್ಲೋನ್ ಮತ್ತು ತಮ್ಮ ಆಪ್ತರಾದ ರಾನ್ ಕ್ಲೈನ್ ಅವರನ್ನು ಸಿಬ್ಬಂದಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications