ಭಾರತ ಮೂಲದ ಮಕ್ಕಳ ತಜ್ಞನಿಂದ ಒತ್ತೆಯಾಳು ಇರಿಸಿಕೊಂಡು ವೈದ್ಯೆಯ ಹತ್ಯೆ, ಆತ್ಮಹತ್ಯೆ
ಹ್ಯೂಸ್ಟನ್, ಜನವರಿ 28: ಅಂತಿಮ ಹಂತದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಭಾರತ ಮೂಲದ 43 ವರ್ಷದ ಮಕ್ಕಳ ತಜ್ಞರೊಬ್ಬರು ಮಹಿಳಾ ವೈದ್ಯರೊಬ್ಬರನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮೆರಿಕದ ಟೆಕ್ಸಾಸ್ನಲ್ಲಿ ನಡೆದಿದೆ.
ವ್ಯಕ್ತಿಯನ್ನು ಭಾರತ ಮೂಲದ ಡಾ. ಭರತ್ ನರುಮಂಚಿ ಎಂದು ಗುರುತಿಸಲಾಗಿದ್ದು, ಕೆಲವು ದಿನಗಳ ಹಿಂದಷ್ಟೇ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಅದು ಅಂತಿಮ ಹಂತದ್ದಲ್ಲಿದ್ದು, ಗುಣಪಡಿಸಲು ಅಸಾಧ್ಯವಾಗಿತ್ತು. ರಾಜಧಾನಿ ಆಸ್ಟಿನ್ನಲ್ಲಿನ ವೈದ್ಯಕೀಯ ಕಚೇರಿಯೊಂದರಲ್ಲಿ ಘಟನೆ ನಡೆದಿದ್ದು, ವೈದ್ಯೆಯ ಹತ್ಯೆಗೂ ಮುನ್ನ ಭರತ್ ಅನೇಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು.
ಮಕ್ಕಳ ವೈದ್ಯಕೀಯ ಸಮೂಹದ ಕಚೇರಿಯಲ್ಲಿ ಗನ್ ಹಿಡಿದ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕಟ್ಟಡದ ಒಳಗೆ ಅನೇಕರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದಾರೆ ಎಂದು ಮಂಗಳವಾರ ಪೊಲೀಸರಿಗೆ ಕರೆ ಬಂದಿತ್ತು. ಆರಂಭದಲ್ಲಿ ಹಲವಾರು ಒತ್ತೆಯಾಳುಗಳನ್ನು ಇರಿಸಿಕೊಳ್ಳಲಾಗಿತ್ತು. ಆದರೆ ಅವರಲ್ಲಿ ಕೆಲವರು ತಪ್ಪಿಸಿಕೊಂಡರೆ, ಇನ್ನು ಕೆಲವರಿಗೆ ಅಲ್ಲಿಂದ ಹೋಗಲು ಭರತ್ ಅವಕಾಶ ನೀಡಿದ್ದರು. ಆದರೆ ಕ್ಯಾಥರಿನ್ ಡೋಡ್ಸನ್ ಎಂಬ ಮಕ್ಕಳ ತಜ್ಞೆಯನ್ನು ಮಾತ್ರ ಬಿಟ್ಟಿರಲಿಲ್ಲ.

ಅಲ್ಲಿಂದ ತಪ್ಪಿಸಿಕೊಂಡಿದ್ದ ಒತ್ತೆಯಾಳುಗಳು, ವ್ಯಕ್ತಿಯ ಕೈಯಲ್ಲಿ ಪಿಸ್ತೂಲು ಇದ್ದು, ಜತೆಗೆ ಎರಡು ಚೀಲಗಳಿವೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಘಟನೆಗೂ ಒಂದು ವಾರ ಮುನ್ನವಷ್ಟೇ ಕಚೇರಿಗೆ ಬಂದಿದ್ದ ಭರತ್, ಸ್ವಯಂಸೇವಕನ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದರ ಹೊರತಾಗಿ ಭರತ್ ಹಾಗೂ ವೈದ್ಯೆ ಕ್ಯಾಥರಿನ್ಗೆ ಯಾವ ಸಂಬಂಧವಿತ್ತು ಎನ್ನುವುದು ಪೊಲೀಸರಿಗೆ ಗೊತ್ತಾಗಿಲ್ಲ.
ಭರತ್ ಮನವೊಲಿಸಲು ಪೊಲೀಸರು ಅನೇಕ ರೀತಿ ಪ್ರಯತ್ನಿಸಿದರೂ ಫಲಕಾರಿಯಾಗಿರಲಿಲ್ಲ. ಸತತ ಪ್ರಯತ್ನದ ಬಳಿಕ ಕಟ್ಟಡದ ಒಳ ಪ್ರವೇಶಿಸಿದ ಪೊಲೀಸರಿಗೆ ಇಬ್ಬರೂ ಗುಂಡೇಟಿನಿಂದ ಸತ್ತಿರುವುದು ಕಂಡುಬಂದಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications