ವಿಶ್ವಸಂಸ್ಥೆಯ ಕೇಂದ್ರ ಕಚೇರಿ ಮೇಲೆ ರಾರಾಜಿಸಿದ ಯೋಗಾಸನ ಭಂಗಿ
ನ್ಯೂಯಾರ್ಕ್, ಜೂನ್ 21: ಅಮೆರಿಕದ ನ್ಯೂಯಾರ್ಕಿನಲ್ಲಿರುವ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯ ಮೇಲೆ ಯೋಗಾಸನ ಭಂಗಿಯ ಚಿತ್ರಗಳು ರಾರಾಜಿಸಿದವು. ವಿಶ್ವ ಯೋಗ ದಿನದ ನಿಮಿತ್ತ ಸೂರ್ಯನಮಸ್ಕಾರ ಮತ್ತು ಯೋಗದ ಸಂದೇಶವನ್ನೊಳಗೊಂಡ ಚಿತ್ರ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯ ಕಟ್ಟಡದ ಮೇಲೆ ಲೇಸರ್ ಬೆಳಕಿನ ಮೂಲಕ ಪ್ರತಿಬಿಂಬಿಸಿತ್ತು.
ಈ ಚಿತ್ರವನ್ನು ವಿಶ್ವಸಂಸ್ಥೆಗೆ ಭಾರತದ ಶಾಶ್ವತ ರಾಯಭಾರಿಯಾಗಿರುವ ಎಸ್ ಅಕ್ಬರುದ್ದಿನ್ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡು, ಯೋಗ ದಿನದ ಶುಭಾಶಯ ಕೋರಿದರು.
"ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಭಾಂಗಣದಲ್ಲಿ ನಡೆಯುತ್ತಿರುವ ಒಳಾಂಗಣ ಯೋಗ ಪ್ರದರ್ಶನ ಇತಿಹಾಸದಲ್ಲಿ ಇದೇ ಮೊದಲು ಎಂಬುದು ನನ್ನ ಭಾವನೆ. ಎಲ್ಲ ಯೋಗಿಗಳ ಆಶಯದಂತೆ ನಾವು ಶುದ್ಧ, ಸಮೃದ್ಧ ಮತ್ತು ಪರಿಸರ ಸ್ನೇಹಿ ಮೌಲ್ಯಗಳುಳ್ಳ ಭವಿಷ್ಯವನ್ನು ಆಶಿಸುತ್ತೇವೆ" ಎಂದು ಈ ಸಂದರ್ಭದಲ್ಲಿ ಅಕ್ಬರುದ್ದಿನ್ ಹೇಳಿದರು.

ವಿಶ್ವದಾದ್ಯಂತ ಇಂದು ಐದನೇ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಗುತ್ತಿದ್ದು, ಈ ಬಾರಿಯ ಯೋಗದಿನದ ಘೋಷವಾಕ್ಯ, "ಹೃದಯದ ಆರೋಗ್ಯಕ್ಕಾಗಿ ಯೋಗ" ಎಂಬುದು.
ಜಾರ್ಖಂಡ್ ನ ರಾಂಚಿಯಲ್ಲಿ ಯೋಗ ದಿನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ನಮ್ಮೆಲ್ಲರ ಬದುಕಿನ ವಿಧಾನವಾಗಬೇಕು, ಯೋಗವನ್ನು ಹಳ್ಳಿ, ಬುಡಕಟ್ಟು ಪ್ರದೇಶ ಸೇರಿದಂತೆ ಎಲ್ಲೆಲ್ಲೂ ಕೊಂಡೊಯ್ಯುವ ಕೆಲಸವಾಗಬೇಕು. ಯೋಗವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಹೊಣೆ ನಮ್ಮ ಮೇಲಿದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications