ವ್ಯರ್ಥ ಮಾಡಲು ಸಮಯವಿಲ್ಲ: ಮೊದಲ ದಿನವೇ ಕರ್ತವ್ಯದಲ್ಲಿ ಬ್ಯುಸಿಯಾದ ಬೈಡನ್
ವಾಷಿಂಗ್ಟನ್, ಜನವರಿ 21: ಛಿದ್ರಗೊಂಡ ಆರ್ಥಿಕತೆ ಮತ್ತು 4 ಲಕ್ಷಕ್ಕೂ ಅಧಿಕ ಅಮೆರಿಕನ್ನರ ಜೀವ ಬಲಿತೆಗೆದುಕೊಂಡ ಕೊರೊನಾ ವೈರಸ್ ಪಿಡುಗಿನ ನಡುವೆ ತೀವ್ರವಾಗಿ ವಿಭಜನೆಯಾಗಿರುವ ದೇಶದಲ್ಲಿನ ಅನಾಗರಿಕ ಯುದ್ಧವನ್ನು ಅಂತ್ಯಗೊಳಿಸುವುದಾಗಿ ಜೋ ಬೈಡನ್ ಶಪಥ ಮಾಡಿದ್ದಾರೆ.
ಅಮೆರಿಕದ 46ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಅವರು, ಈ ಸವಾಲುಗಳನ್ನು ತಗ್ಗಿಸಲು ನಾನು ನನ್ನ ಆತ್ಮವನ್ನು ಮರುಸ್ಥಾಪಿಸಬೇಕಿದೆ. ಭವಿಷ್ಯದ ಅಮೆರಿಕವನ್ನು ಭದ್ರಪಡಿಸಲು ಮಾತಿಗಿಂತಲೂ ಹೆಚ್ಚಿನ ಶ್ರಮದ ಅಗತ್ಯವಿದೆ. ಅದಕ್ಕೆ ಪ್ರಜಾಪ್ರಭುತ್ವವು ಒಳಗೊಳ್ಳುವ ಎಲ್ಲ ಅಂಶಗಳೂ ಅಗತ್ಯವಾಗಿದೆ ಎಂದರು.
'ನಾವು ನೀಲಿ ವಿರುದ್ಧದ ಕೆಂಪು ಬಣ್ಣದ (ರಿಪಬ್ಲಿಕ್ ವರ್ಸಸ್ ಡೆಮಾಕ್ರಟಿಕ್), ಗ್ರಾಮೀಣ ವರ್ಸಸ್ ನಗರ, ಸಾಂಪ್ರದಾಯಿಕತೆ ವರ್ಸಸ್ ಉದಾರವಾದಗಳ ನಡುವಿನ ಅನಾಗರಿಕ ಯುದ್ಧವನ್ನು ಅಂತ್ಯಗೊಳಿಸಬೇಕಿದೆ. ನಮ್ಮ ಹೃದಯವನ್ನು ಗಟ್ಟಿಗೊಳಿಸುವ ಬದಲು ನಮ್ಮ ಆತ್ಮಗಳನ್ನು ತೆರೆದರೆ ಇದು ಸಾಧ್ಯ' ಎಂದು ಹೇಳಿದರು.

ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಬಳಿಕ ಮೊದಲ ಟ್ವೀಟ್ ಮಾಡಿದ ಜೋ ಬೈಡನ್, 'ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ವಿಚಾರ ಬಂದಾಗ ವ್ಯರ್ಥ ಮಾಡಲು ಸಮಯವೇ ನಮ್ಮ ಬಳಿ ಇಲ್ಲ. ಹೀಗಾಗಿ ಇಂದು ನಾನು ಓವಲ್ ಕಚೇರಿ ಕಡೆಗೆ ಸಾಗುತ್ತಿದ್ದು, ಅಮೆರಿಕದ ಕುಟುಂಬಗಳಿಗೆ ತತ್ಕ್ಷಣದ ಪರಿಹಾರ ನೀಡುವ ಮತ್ತು ದಿಟ್ಟ ಕ್ರಮಗಳನ್ನು ನೀಡುವ ಕೆಲಸದ ಹಕ್ಕು ಪಡೆದುಕೊಳ್ಳಲಿದ್ದೇನೆ' ಎಂದು ತಾವು ಮೊದಲ ದಿನದಿಂದಲೇ ಕಾರ್ಯೋನ್ಮುಖರಾಗುವುದಾಗಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications