ಅಮೆರಿಕದ ಉನ್ನತ ಹುದ್ದೆಗೆ ಗೌತಮ್ ರಾಘವನ್ರನ್ನು ನೇಮಕ ಮಾಡಿದ ಜೋ ಬೈಡನ್
ವಾಷಿಂಗ್ಟನ್, ಡಿಸೆಂಬರ್ 11: ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷ ಜೋ ಬೈಡನ್ ಸರ್ಕಾರದ ಹಲವು ಉನ್ನತ ಹುದ್ದೆಗಳಲ್ಲಿ ಭಾರತೀಯ ಮೂಲದ ಅಮೆರಿಕನ್ನರಿಗೆ ಸ್ಥಾನ ಸಿಗುತ್ತಿದೆ. ಅಮೆರಿಕ ಆಡಳಿತದ ಪ್ರಮುಖ ಹುದ್ದೆಗಳಲ್ಲಿ ಭಾರತೀಯ ಮೂಲದ ವ್ಯಕ್ತಿಗಳು ಸ್ಥಾನ ಅಲಂಕರಿಸುತ್ತಿದ್ದಾರೆ.
ಬಹುಮುಖ್ಯವಾಗಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕೂಡ ಭಾರತೀಯ ಮೂಲದವರೇ ಆಗಿದ್ದಾರೆ. ಹೀಗೆ ಉನ್ನತ ಹುದ್ದೆ ಅಲಂಕರಿಸಿದವರಲ್ಲಿ ಒಬ್ಬರಾಗಿದ್ದ ಭಾರತ ಮೂಲದ ಗೌತಮ್ ರಾಘವನ್ರನ್ನು ಇದೀಗ ಒಂದು ಹೊಸ ಮತ್ತು ಬಹುಮುಖ್ಯ ಹುದ್ದೆಗೆ ನೇಮಕ ಮಾಡುವ ಮೂಲಕ ಅವರಿಗೆ ಬಡ್ತಿ ನೀಡಲಾಗಿದೆ.
ವೈಟ್ಹೌಸ್ನ ಅಧ್ಯಕ್ಷೀಯ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ ಗೌತಮ್ ರಾಘವನ್ ಅವರ ನೇಮಕಾತಿಯನ್ನು ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ. ಈ ಮೊದಲು ವೈಟ್ಹೌಸ್ನ ಅಧ್ಯಕ್ಷೀಯ ಸಿಬ್ಬಂದಿ ಮುಖ್ಯಸ್ಥರಾಗಿದ್ದ ಕ್ಯಾಥಿ ರಸೆಲ್ರನ್ನು ಯುನಿಸೆಫ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕರನ್ನಾಗಿ ನೇಮಕ ಮಾಡಿ ವಿಶ್ವಸಂಸ್ಥೆ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಅವರು ಆದೇಶ ಹೊರಡಿಸಿದ ಬೆನ್ನಲ್ಲೇ, ತೆರವಾದ ಸ್ಥಾನಕ್ಕೆ ಭಾರತೀಯ ಮೂಲದ ಗೌತಮ್ ರಾಘವನ್ ಆಯ್ಕೆ ಆಗಿದ್ದಾರೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ಗೌತಮ್ ರಾಘವನ್ ಅವರು ಕ್ಯಾಥಿಯವರೊಂದಿಗೆ ಒಂದನೇ ದಿನದಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರು ಇನ್ನು ಮುಂದೆ ಪಿಪಿಒ(Office of Presidential Personnel)ದ ಮುಂದಿನ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಸಮರ್ಥ, ದಕ್ಷವಾಗಿ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ಕಾರ್ಯಪಡೆ ನಿರ್ಮಾಣದ ಕೆಲಸ ಮುಂದುವರಿಸಲು ಅವರಿಗೆ ಅನುವು ಮಾಡಿಕೊಡಲಾಗುವುದು ಎಂದಿದ್ದಾರೆ. ಅಂದಹಾಗೆ, ರಾಘವನ್ ಇಷ್ಟು ದಿನ ಅಧ್ಯಕ್ಷೀಯ ಸಿಬ್ಬಂದಿ ಕಚೇರಿಯ ಉಪ ನಿರ್ದೇಶಕ ಮತ್ತು ಅಮೆರಿಕ ಅಧ್ಯಕ್ಷರ ಉಪ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.
ಗೌತಮ್ ರಾಘವನ್ ಎಲ್ಜಿಬಿಟಿಕ್ಯೂ ಸಮುದಾಯಕ್ಕೆ ಸೇರಿದವರು
ಗೌತಮ್ ರಾಘವನ್ ಮೊದಲ ಪೀಳಿಗೆಯ ವಲಸಿಗರ ಸಾಲಿಗೆ ಸೇರಿದವರು. ಇವರು ಭಾರತದಲ್ಲಿಯೇ ಹುಟ್ಟಿದ್ದರೂ, ಬೆಳೆದಿದ್ದು ಯುಎಸ್ನ ಸಿಯಾಟಲ್ನಲ್ಲಿ. ಸ್ಟ್ಯಾಂಡ್ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ.
ಅಮೆರಿಕ ಅಧ್ಯಕ್ಷರ ಸ್ಥಾನ ಮತ್ತು ಅಧ್ಯಕ್ಷೀಯ ಸಿಬ್ಬಂದಿಯ ವೈಯಕ್ತಿಕ ನೋಟವನ್ನು ನೀಡುವ ವೆಸ್ಟ್ ವಿಂಗರ್ಸ್: ಸ್ಟೋರೀಸ್ ಫ್ರಾಂ ಡ್ರೀಂ ಚೀಸರ್ಸ್, ಚೇಂಜ್ ಮೇಕರ್ಸ್ ಆ್ಯಂಡ್ ಹೋಪ್ ಕ್ರಿಯೇಟರ್ಸ್ ಇನ್ಸೈಡ್ ದಿ ಒಬಾಮಾ ವೈಟ್ಹೌಸ್ ಎಂಬ ಪುಸ್ತಕದ ಸಂಪಾದಕರೂ ಆಗಿದ್ದಾರೆ.
ಇನ್ನೂ ಮುಖ್ಯವಾಗಿ ರಾಘವನ್ ಒಬ್ಬರು ಎಲ್ಜಿಬಿಟಿಕ್ಯೂ ಸಮುದಾಯದಕ್ಕೆ ಸೇರಿದವರಾಗಿದ್ದು, ಯುಎಸ್ನಲ್ಲಿ ಬರಾಕ್ ಒಬಾಮಾ ಅಧ್ಯಕ್ಷರಾಗಿದ್ದಾಗ, ಇವರು ಎಲ್ಜಿಬಿಟಿಕ್ಯೂ ಮತ್ತು ಏಷ್ಯನ್ ಅಮೆರಿಕನ್, ಫೆಸಿಪಿಕ್ ಐಲ್ಯಾಂಡರ್ ಸಮುದಾಯಕ್ಕೆ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
Recommended Video
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications