Breaking news: ದಕ್ಷಿಣ ಕ್ಯಾಲಿಫೋರ್ನಿಯಾದ ಚರ್ಚ್ನಲ್ಲಿ ಗುಂಡಿನ ದಾಳಿ, ಓರ್ವ ಸಾವು
ಕ್ಯಾಲಿಫೋರ್ನಿಯಾ, ಮೇ 16: ದಕ್ಷಿಣ ಕ್ಯಾಲಿಫೋರ್ನಿಯಾದ ಲಗುನಾ ವುಡ್ಸ್ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಆರೆಂಜ್ ಕೌಂಟಿ ಶೆರಿಫ್ ಇಲಾಖೆ ತಿಳಿಸಿದೆ. ಚರ್ಚ್ನಲ್ಲಿ ದಾಳಿ ನಡೆದಿದೆ. ಗಾಯಗೊಂಡವರ ಪೈಕಿ ಒಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ಥಳೀಯ ಕಾಲಮಾನ 2100 GMT ಸುಮಾರಿಗೆ ಘಟನೆ ನಡೆದಿದ್ದು, ಘಟನೆಗೆ ಕಾರಣಾವಾದ ಶಂಕಿತ ವ್ಯಕ್ತಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
"ಚರ್ಚ್ನಲ್ಲಿ ಗುಂಡಿನ ದಾಳಿಯ ಬಗ್ಗೆ ವಿವರಗಳನ್ನು ಪಡೆದುಕೊಂಡು ಪ್ರತಿಕ್ರಿಯಿಸಲಾಗುತ್ತಿದೆ" ಎಂದು ಆರೆಂಜ್ ಕೌಂಟಿ ಶೆರಿಫ್ ಇಲಾಖೆ ಟ್ವೀಟ್ ಮಾಡಿದೆ.

"ಹಲವು ಮಂದಿ ಅಮಾಯಕರ ಮೇಲೆ ಗುಂಡು ಹಾರಿಸಲಾಗಿದೆ," ಎಂದು ಅಧಿಕೃತ ಮಾಹಿತಿ ನೀಡಲಾಗಿದೆ.
#OCSDPIO Deputies are responding to reports of a shooting at a church on the 24000 block of El Toro Road in Laguna Woods. Multiple victims have been shot. More details to follow, PIO en route.
— OC Sheriff, CA (@OCSheriff) May 15, 2022
ಎರಡನೇ ಟ್ವೀಟ್ ಹೀಗಿದೆ: "ನಾವು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದೇವೆ ಮತ್ತು ಒಳಗೊಂಡಿರುವ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದೇವೆ."
ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಗವರ್ನರ್ ಗೇವಿನ್ ನ್ಯೂಸಮ್ ಅವರ ಕಚೇರಿ ಟ್ವಿಟರ್ನಲ್ಲಿ ತಿಳಿಸಿದೆ. "ಯಾರೂ ತಮ್ಮ ಆರಾಧನಾ ಸ್ಥಳಕ್ಕೆ ಹೋಗಲು ಭಯಪಡಬೇಕಾಗಿಲ್ಲ. ನಮ್ಮ ಆಲೋಚನೆಗಳು ಸಂತ್ರಸ್ತರು, ಸಮುದಾಯ ಮತ್ತು ಈ ದುರಂತ ಘಟನೆಯಿಂದ ಪ್ರಭಾವಿತರಾದ ಎಲ್ಲರೊಂದಿಗೂ ಇವೆ" ಎಂದು ರಾಜ್ಯಪಾಲರು ಪೋಸ್ಟ್ ಮಾಡಿದ್ದಾರೆ.
We are actively monitoring the shooting at a church in Laguna Woods and working closely with local law enforcement.
— Office of the Governor of California (@CAgovernor) May 15, 2022
No one should have to fear going to their place of worship. Our thoughts are with the victims, community, and all those impacted by this tragic event.
ಇತ್ತೀಚಿನ ವರ್ಷಗಳಲ್ಲಿ ಬಂದೂಕು ಹಿಂಸಾಚಾರದಿಂದ ಪೀಡಿತವಾಗಿರುವ ಯುನೈಟೆಡ್ ಸ್ಟೇಟ್ಸ್ನಲ್ಲಿ ವಾರಾಂತ್ಯದ ಎರಡನೇ ಸಾಮೂಹಿಕ ಗುಂಡಿನ ದಾಳಿ ಇದಾಗಿದೆ.(AFP, AP, Reuters)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications