ಭೂಮಿಯ ಸಮೀಪ ಬರಲಿದೆ ಬೃಹತ್ ಕ್ಷುದ್ರಗ್ರಹ
ವಾಷಿಂಗ್ಟನ್, ಮಾರ್ಚ್ 12: ಬೃಹತ್ ಕ್ಷುದ್ರಗ್ರಹವೊಂದು ಮಾರ್ಚ್ 21ರಂದು ಭೂಮಿಯ ಪಕ್ಕದಲ್ಲಿಯೇ ಹಾದು ಹೋಗಲಿದೆ. ಇದು ಈ ವರ್ಷ ಭೂಮಿಯ ಸಮೀಪ ಬರಲಿರುವ ಅತಿ ದೊಡ್ಡ ಕ್ಷುದ್ರಗ್ರಹವಾಗಿದ್ದು, ನಮ್ಮ ಗ್ರಹದಿಂದ 1.25 ಮಿಲಿಯನ್ ಮೈಲು (ಎರಡು ಮಿಲಿಯನ್ ಕಿಮೀ) ದೂರದಲ್ಲಿ ಸಾಗಲಿದೆ ಎಂದು ನಾಸಾ ತಿಳಿಸಿದೆ.
ಈ ಅಪರೂಪದ ಕ್ಷುದ್ರಗ್ರಹವನ್ನು ನೋಡಲು ಖಗೋಳ ವೀಕ್ಷಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. 2001 F032 ಎಂಬ ಹೆಸರಿನ ಈ ಕ್ಷುದ್ರಗ್ರಹ ಸುಮಾರು 3,000 ವ್ಯಾಸ ಹೊಂದಿದ್ದು, 20 ವರ್ಷದ ಹಿಂದೆ ಪತ್ತೆಯಾಗಿತ್ತು ಎಂದು ಅದು ಮಾಹಿತಿ ನೀಡಿದೆ.
'ಸೂರ್ಯನ ಸುತ್ತಲಿನ 2001 F032ರ ಕಕ್ಷೆಯ ಪಥವು ನಮಗೆ ಬಹಳ ನಿಖರವಾಗಿ ತಿಳಿದಿದೆ. ಈ ಕ್ಷುದ್ರಗ್ರಹವು ಭೂಮಿಯ 1.25 ಮಿಲಿಯನ್ ಮೈಲು ಸಮೀಪಕ್ಕಿಂತ ಇನ್ನೂ ಹತ್ತಿರ ಬರಲು ಸಾಧ್ಯವೇ ಇಲ್ಲ' ಎಂದು ನಾಸಾ ಅರ್ಥ್ ಆಬ್ಜೆಕ್ಟ್ ಸ್ಟಡೀಸ್ ಕೇಂದ್ರದ ನಿರ್ದೇಶಕ ಪೌಲ್ ಚೊಡಾಸ್ ಹೇಳಿದ್ದಾರೆ.

ಭೂಮಿಯೊಂದಿಗೆ ಮುಖಾಮುಖಿಯಾಗುವ ಬಹುತೇಕ ಕ್ಷುದ್ರಗ್ರಹಗಳ ವೇಗಕ್ಕಿಂತ ಅತಿ ಹೆಚ್ಚು, ಗಂಟೆಗೆ 77 ಸಾವಿರ ಮೈಲು ವೇಗದಲ್ಲಿ 2001 F032 ಭೂಮಿಯನ್ನು ಹಾದುಹೋಗಲಿದೆ ಎಂದು ನಾಸಾ ತಿಳಿಸಿದೆ. ಕ್ಷುದ್ರಗ್ರಹದ ಗಾತ್ರವನ್ನು ಇನ್ನಷ್ಟು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಹಾಗೂ ಅದರ ಹೊರಮೈನಲ್ಲಿ ಪ್ರತಿಫಲನವಾಗುವ ಬೆಳಕಿನ ಅಧ್ಯಯನ ಮಾಡುವ ಮೂಲಕ ಅದರ ಸಂಯೋಜನೆಯ ಬಗ್ಗೆ ಸ್ಥೂಲ ಅಂದಾಜು ಪಡೆಯಬಹುದು ಎಂದು ಅಭಿಪ್ರಾಯಪಟ್ಟಿದೆ.
'ಈ ವಸ್ತುವಿನ ಬಗ್ಗೆ ಬಹಳ ಕಡಿಮೆ ತಿಳಿದಿದೆ. ಹೀಗಾಗಿ ಭೂಮಿಯೊಂದಿಗಿನ ಅದರ ಸಮೀಪದ ಪ್ರಯಾಣವು ಈ ಕ್ಷುದ್ರಗ್ರಹದ ಕುರಿತು ಹೆಚ್ಚಿನ ವಿಚಾರಗಳನ್ನು ಅರಿಯಲು ಅಪೂರ್ವ ಅವಕಾಶ ಸಿಕ್ಕಂತಾಗಿದೆ' ಎಂದು ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿಯ ಮುಖ್ಯ ವಿಜ್ಞಾನಿ ಲ್ಯಾನ್ಸ್ ಬೆನ್ನರ್ ಹೇಳಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications