ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಮೆರಿಕದಲ್ಲಿ ಮೊಕದ್ದಮೆ
ಹ್ಯೂಸ್ಟನ್, ಸೆಪ್ಟೆಂಬರ್ 21: ಅಮೆರಿಕದ ಹ್ಯೂಸ್ಟನ್ನಲ್ಲಿ 'ಹೌಡಿ ಮೋದಿ' ಕಾರ್ಯಕ್ರಮದಲ್ಲ ಭಾಗವಹಿಸಲು ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ಸಂವಿಧಾನಿಕ ಮಾನ್ಯತೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಮತ್ತು ಅದರ ಬಳಿಕ ರಾಜ್ಯದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ಟೆಕ್ಸಾಸ್ ಮೂಲದ ಫೆಡರಲ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಕಾಶ್ಮೀರದ ಜನರ ಹಕ್ಕನ್ನು ಮೋದಿ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿ ಕಾಶ್ಮೀರದ ಇಬ್ಬರು ಕಾರ್ಯಕರ್ತರು ಮೋದಿ ವಿರುದ್ಧ ದಾವೆ ಹೂಡಿದ್ದಾರೆ. ಅಲ್ಲದೆ, ಮೋದಿ ಅವರ ವಿರುದ್ಧ ಸಿಖ್ ಸಂಘಟನೆಯೊಂದರ ಗುಂಪು ಹಾಗೂ ಪಾಕಿಸ್ತಾನಿಯರು ಹ್ಯೂಸ್ಟನ್ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದಾರೆ.
'ಹೌಡಿ, ಮೋದಿ! ಕನಸುಗಳ ಹಂಚಿಕೆ, ಉಜ್ವಲ ಭವಿಷ್ಯ' ಕಾರ್ಯಕ್ರಮದಲ್ಲಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎನ್ಆರ್ಜಿ ಕ್ರೀಡಾಂಗಣದಲ್ಲಿ ಭಾನುವಾರ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿ ಅವರ ವಿರುದ್ಧ ಕಾಶ್ಮೀರಿ ಕಾರ್ಯಕರ್ತರು ಮತ್ತು ಖಲಿಸ್ತಾನ ರೆಫರೆಂಡಮ್ ಫ್ರಂಟ್ ಸಂಘಟನೆ 73 ಪುಟಗಳ ದೂರು ನೀಡಿದೆ. ಕಾಶ್ಮೀರಿಗಳ ಮೇಲೆ ಮೋದಿ, ಅಮಿತ್ ಶಾ, ಸೇನಾ ಜನರಲ್ ಕನ್ವಲ್ ಜೀತ್ ಸಿಂಗ್ ದೊಲ್ಲೋನ್ ಅವರು ಕ್ರೌರ್ಯ ಮತ್ತು ಅಮಾನವೀಯ ವರ್ತನೆ ಪ್ರದರ್ಶಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನುಬಾಹಿರ ಹತ್ಯೆ ಹಾಗೂ ಸಂಘರ್ಷಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮೋದಿ ಅವರ ವಿರುದ್ಧ ಅಮೆರಿಕದ ಫೆಡರಲ್ ಕೋರ್ಟ್ ಒಂದರಲ್ಲಿ ದಾವೆ ದಾಖಲಾಗಿರುವುದು ಇದು ಎರಡನೆಯ ಬಾರಿ. ಗೋಧ್ರಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 2014ರ ಸೆಪ್ಟೆಂಬರ್ನಲ್ಲಿ ಮೋದಿ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಈ ದಾವೆಯನ್ನು 2015ರ ಜನವರಿಯಲ್ಲಿ ವಜಾಗೊಳಿಸಲಾಗಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications