ನ್ಯೂಯಾರ್ಕ್: ಮಹಾತ್ಮಾ ಗಾಂಧಿ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು
ನ್ಯೂಯಾರ್ಕ್, ಫೆ.6: ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆ ನಡೆದಿದೆ. ಇಲ್ಲಿನ ಮ್ಯಾನ್ ಹಟನ್ ಸ್ಕ್ವೇರ್ನಲ್ಲಿರುವ ಆಳೆತ್ತರದ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆ ವರದಿಯಾಗಿದೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಭಾರತೀಯ ರಾಯಭಾರ ಕಚೇರಿ, ಈ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿದೆ.
ಸುಮಾರು 9 ಅಡಿ ಎತ್ತರ ಕಂಚಿನ ಪ್ರತಿಮೆಯನ್ನು ಯಾರೋ ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ಅತ್ಯಂತ ಖೇದಕರ, ಈ ಘಟನೆಯನ್ನು ರಾಯಭಾರ ಕಚೇರಿ ತೀವ್ರವಾಗಿ ಖಂಡಿಸುತ್ತದೆ, ಸ್ಥಳೀಯ ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ನಡೆಸಲಿ ಎಂದು ಅಧಿಕೃತವಾಗಿ ಟ್ವೀಟ್ ಮಾಡಿದೆ.
ಘಟನೆ ಬಗ್ಗೆ ತಿಳಿದ ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಮುದಾಯವು ದಿಗ್ಭ್ರಮೆ ವ್ಯಕ್ತಪಡಿಸಿದೆ. 1986ರ ಅಕ್ಟೋಬರ್ 2ರಂದು ಗಾಂಧೀಜಿಯವರ 117ನೇ ಹುಟ್ಟುಹಬ್ಬದ ಅಂಗವಾಗಿ ಗಾಂಧಿ ಅಂತಾರಾಷ್ಟ್ರೀಯ ಸ್ಮರಣಾ ಸಂಸ್ಥೆ ಈ ಪ್ರತಿಮೆಯನ್ನು ಸ್ಥಾಪಿಸಲು ನೆರವಾಗಿತ್ತು.

ಈ ಹಿಂದೆ ಕೂಡಾ ಅಮೆರಿಕದಲ್ಲಿ ಗಾಂಧೀಜಿ ಪ್ರತಿಮೆ ವಿರೂಪಗೊಳಿಸಿದ್ದ ಘಟನೆ ನಡೆದಿತ್ತು. ಉತ್ತರ ಕ್ಯಾಲಿಫೋರ್ನಿಯಾದ ಸಿಟಿ ಆಫ್ ಡೇವಿಸ್ನ ಸೆಂಟ್ರಲ್ ಪಾರ್ಕ್ನಲ್ಲಿದ್ದ 6 ಅಡಿ ಎತ್ತರ ಮತ್ತು 650 ಪೌಂಡ್ (294 ಕೆಜಿ) ತೂಕದ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ವಿರೂಪಗೊಳಿಸಲಾಗಿತ್ತು. ಅದರ ಪಾದದ ಭಾಗಗಳನ್ನು ಕತ್ತರಿಸಿ, ಅರ್ಧ ತಲೆಯನ್ನು ಕೆತ್ತಿ ವಿರೂಪಗೊಳಿಸಲಾಗಿತ್ತು. ಮುಖದ ಒಂದು ಭಾಗ ನಾಪತ್ತೆಯಾಗಿತ್ತು. ಪ್ರತಿಮೆ ನಿಲ್ಲಿಸಿದ್ದ ಸ್ಥಳದಿಂದ ಉರುಳಿಬಿದ್ದಿತ್ತು.
ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಡೇವಿಸ್ ನಗರಕ್ಕೆ ಭಾರತ ಸರ್ಕಾರ ದೇಣಿಗೆ ನೀಡಿತ್ತು. ಗಾಂಧಿ ವಿರೋಧಿ ಮತ್ತು ಭಾರತ ವಿರೋಧಿ ಸಂಘಟನೆಗಳ ಪ್ರತಿಭಟನೆ ನಡುವೆ ನಾಲ್ಕು ವರ್ಷಗಳ ಹಿಂದೆ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications