ಟ್ರಂಪ್ ಟೀಕಾಕಾರರಿಗೆ ಪಾರ್ಸೆಲ್ ಬಾಂಬ್ ಕಳುಹಿಸುತ್ತಿದ್ದ ಶಂಕಿತನ ಬಂಧನ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಹೈ ಪ್ರೊಫೈಲ್ ವಿಮರ್ಶಕರಿಗೆ ಕನಿಷ್ಠ ಹನ್ನೆರಡು ಪಾರ್ಸೆಲ್ ಬಾಂಬ್ ಕಳಿಸಿದ್ದ ಶಂಕಿತನನ್ನು ಶುಕ್ರವಾರ ಫ್ಲೋರಿಡಾದಲ್ಲಿ ಬಂಧಿಸಲಾಗಿದೆ ಎಂದು ಫೆಡರಲ್ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೇನು ಕೆಲ ದಿನಗಳಲ್ಲೇ ಅಮೆರಿಕದಲ್ಲಿ ಮಧ್ಯಾವಧಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಹೆಚ್ಚು ಮಹತ್ವ ಪಡೆದುಕೊಂಡಿದೆ.
ವಾಹನ ನಿಲುಗಡೆ ತಾಣದ ಬಳಿ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ. ಬಂಧನದ ವೇಳೆ ಭಾರೀ ಸ್ಫೋಟದ ಸದ್ದು ಕೇಳಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಶಕಿತನನ್ನು ಸೆಸರ್ ಸಯಕ್ ಎಂದು ಗುರುತಿಸಲಾಗಿದ್ದು, ಆತನಿಗೆ ಐವತ್ತಾರು ವರ್ಷ ವಯಸ್ಸು ಎಂದು ತಿಳಿಸಲಾಗಿದೆ. ಇನ್ನಷ್ಟು ಮಂದಿಯ ಬಂಧನದ ಸಾಧ್ಯತೆ ಬಗ್ಗೆ ಕೂಡ ಮಾಹಿತಿ ನೀಡಲಾಗಿದೆ.
ಮೊದಲಿಗೆ ಈ ಪಾರ್ಸೆಲ್ ಬಾಂಬ್ ಗಳನ್ನು ಕಳುಹಿಸಿರುವುದು ಭಯೋತ್ಪಾದಕರು ಎಂದು ಶಂಕಿಸಲಾಗಿತ್ತು. ಆದರೆ ಯಾವ ಸಂಘಟನೆಯು ಕೃತ್ಯದ ಹೊಣೆಯನ್ನು ಹೊತ್ತಿರಲಿಲ್ಲ. ಇನ್ನೇನು ಅಮೆರಿಕದ ಮಧ್ಯಾವಧಿ ಚುನಾವಣೆಗೆ ಎರಡು ವಾರಗಳು ಬಾಕಿ ಇರುವಾಗ ಇಂಥ ಕೃತ್ಯ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಅನುಮಾನಾಸ್ಪದವಾದ ಎರಡು ಪ್ಯಾಕೇಜ್ ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅವುಗಳನ್ನು ಅಮೆರಿಕದ ಸೆನೆಟರ್ ಕೋರಿ ಬೂಕರ್, ಜೇಮ್ಸ್ ಕ್ಲಾಪರ್ (ರಾಷ್ಟ್ರೀಯ ಗುಪ್ತಚರ ಇಲಾಖೆ ಮಾಜಿ ನಿರ್ದೇಶಕ) ವಿಳಾಸಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗಿತ್ತು. ಹದಿಮೂರನೇ ಅನುಮಾನಾಸ್ಪದ ಪಾರ್ಸೆಲ್ ಅನ್ನು ಸೆನೆಟರ್ ಕಮಲಾ ಹ್ಯಾರಿಸ್ ವಿಳಾಸಕ್ಕೆ ಕಳುಹಿಸಲು ಸಜ್ಜುಗೊಂಡಿದ್ದು ಪತ್ತೆಯಾಗಿದೆ.
ಪಾರ್ಸೆಲ್ ಗಳನ್ನು ಫ್ಲೋರಿಡಾದಿಂದಲೇ ಕಳುಹಿಸಲು ಕೇಂದ್ರೀಕೃತ ಮಾಡಿಕೊಳ್ಳಲಾಗಿತ್ತು ಎಂಬ ಅನುಮಾನದಲ್ಲಿ ತನಿಖೆ ನಡೆಸಲಾಗುತ್ತಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications