ಗಲ್ವಾನ್ ಗಡಿ ಸಂಘರ್ಷ: ಭಾರತದ ಹುತಾತ್ಮ ಯೋಧರಿಗೆ ಅಮೆರಿಕ ಕಂಬನಿ
ವಾಷಿಂಗ್ಟನ್, ಜೂನ್ 19: ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಉದ್ಧಟತನಕ್ಕೆ 20 ಭಾರತೀಯ ಸೈನಿಕರು ಹುತಾತ್ಮರಾಗಿರುವುದಕ್ಕೆ ಅಮೆರಿಕ ಕಂಬನಿ ಮಿಡಿದಿದೆ.
Recommended Video
ಈ ಬಗ್ಗೆ ಹೇಳಿಕೆ ನೀಡಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಚೀನಾದ ಜೊತೆಗಿನ ಇತ್ತೀಚಿನ ಸಂಘರ್ಷದಲ್ಲಿ ಹುತಾತ್ಮರಾದ ಸೈನಿಕರಿಗೆ ಅಮೆರಿಕ ತನ್ನ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಯೋಧರ ಕುಟುಂಬ , ಆಪ್ತರು ಹಾಗೂ ಸಮುದಾಯದ ನೋವಿನ ಜೊತೆಗೆ ಅಮೆರಿಕವೂ ಇದೆ ಎಂದು ಮೈಕ್ ಪಾಂಪಿಯೋ ತಿಳಿಸಿದ್ದಾರೆ.
ಈ ಮೂಲಕ ಅಮೆರಿಕ ಅಧಿಕೃತವಾಗಿ ಭಾರತದ ಪರ ನಿಂತಿದೆ. ಆದರೆ ನಿನ್ನೆಯಷ್ಟೇ ಭಾರತ-ಹಾಗೂ ಚೀನಾ ನಡುವೆ ಸಂಧಾನಕ್ಕೆ ಮಾತ್ರ ಅಮೆರಿಕ ಬರುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಗಡಿ ವಿವಾದ ಬಗೆಹರಿಸಲು ಹಾಗೂ ಶಾಂತಿ ಮರು ಸ್ಥಾಪನೆಗೆ ಮಧ್ಯಸ್ಥಿಕೆ ವಹಿಸಲು ಬದ್ಧ ಎಂದು ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಆದರೆ ಇಂದು ಹೇಳಿಕೆ ನೀಡಿರುವ ವೈಟ್ಹೌಸ್ ಸಧ್ಯಕ್ಕೆ ಇಂತಹ ಯಾವುದೇ ಯೋಜನೆ ಅಮೆರಿಕದ ಮುಂದಿಲ್ಲ ಎಂದಿತ್ತು.
ಅಮೆರಿಕ ಮಧ್ಯಸ್ಥಿಕೆ ಕುರಿತು ಚೀನಾ ಖಾರವಾಗಿ ಪ್ರತಿಕ್ರಿಯಿಸಿದ್ದು, ಭಾರತ ಹಾಗೂ ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿ ಚರ್ಚೆಗೆ ಉಭಯ ದೇಶಗಳ ನಡುವೆ ಚರ್ಚೆಗೆ ಸೂಕ್ತ ವೇದಿಕೆಗಳಿವೆ. ಪರಿಹಾರ ಮಾರ್ಗಗಳನ್ನು ಹುಡುಕಲು ಮೂರನೇ ದೇಶಗಳ ಅಥವಾ ವ್ಯಕ್ತಿಯ ಅಗತ್ಯವಿಲ್ಲ ನಾವೇ ನೋಡಿಕೊಳ್ಳುತ್ತೇವೆ ಎಂದು ಹೇಳಿತ್ತು.
ಜೂನ್ 15,16 ರಂದು ಪೂರ್ವ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ನಡೆದ ಚೀನಾ-ಭಾರತ ನಡುವಿನ ಸಂಘರ್ಷದಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. 43 ಮಂದಿ ಚೀನಾದ ಸೈನಿಕರು ಮೃತಪಟ್ಟಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications