ಅಮೆರಿಕ: ಪೊಲೀಸರಿಂದ ಮತ್ತೊಬ್ಬ ಕಪ್ಪುವರ್ಣೀಯನ ಹತ್ಯೆ
ಮಿನ್ನೆಪೊಲಿಸ್, ಏಪ್ರಿಲ್ 12: ಅಮೆರಿಕದಲ್ಲಿ ಜನಾಂಗೀಯ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಮಿನ್ನೆಪೊಲಿಸ್ನಲ್ಲಿ ಕಪ್ಪು ವರ್ಣೀಯ ಯುವಕನೊಬ್ಬನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ವಿರುದ್ಧ ಭಾನುವಾರ ರಾತ್ರಿ ಭಾರಿ ಪ್ರತಿಭಟನೆ ನಡೆದಿದೆ. ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದ ಘಟನೆ ಇನ್ನೂ ಹಸಿರಾಗಿರುವಾಗಲೇ ಈ ಘಟನೆ ನಡೆದಿದೆ.
ಮಿನ್ನೆಪೊಲಿಸ್ನ ವಾಯವ್ಯ ಭಾಗದ ಬ್ರೂಕ್ಲಿನ್ ಸೆಂಟರ್ನ ಪೊಲೀಸ್ ಠಾಣೆಯ ಎದುರು ನೂರಾರು ಜನರು ಸೇರಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಚೆದುರಿಸಲು ಪೊಲೀಸರು ಅಶ್ರುವಾಯು ಮತ್ತು ಫ್ಲ್ಯಾಶ್ಬ್ಯಾಂಗ್ಗಳನ್ನು ಸಿಡಿಸಿದರು.
ಭಾನುವಾರ ಸಂಜೆ ಕರೆ ಮಾಡಿದ 20 ವರ್ಷದ ಮಗ ಡಾಂಟೆ ರೈಟ್, ಪೊಲೀಸರು ತನ್ನನ್ನು ಎಳೆದಾಡುತ್ತಿರುವುದಾಗಿ ತಿಳಿಸಿದ್ದ. ಆಮೇಲೆ ಫೋನ್ ಕೆಳಕ್ಕೆ ಇಡುವಂತೆ ಅಧಿಕಾರಿಗಳು ತನ್ನ ಮಗನಿಗೆ ಗದರುವುದು ಕೇಳಿಸಿತು. ನಂತರ ಒಬ್ಬ ಅಧಿಕಾರಿ ಫೋನ್ ಕರೆಯನ್ನು ಅಂತ್ಯಗೊಳಿಸಿದರು. ಸ್ವಲ್ಪ ಸಮಯದ ಬಳಿಕ ಮಗನ ಗೆಳತಿ ಕರೆ ಮಾಡಿ ಆತನನ್ನು ಪೊಲೀಸರು ಗುಂಡಿಕ್ಕಿ ಕೊಂದಿರುವುದಾಗಿ ತಿಳಿಸಿದರು ಎಂದು ಕೇಟಿ ರೈಟ್ ಆರೋಪಿಸಿದ್ದಾರೆ.

ಬ್ರೂಕ್ಲಿನ್ ಸೆಂಟರ್ನಲ್ಲಿ ನಡೆದ ಗುಂಡಿನ ದಾಳಿ ಘಟನೆಯಲ್ಲಿ ಅಧಿಕಾರಿಯೊಬ್ಬರನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಮಿನ್ನೆಸೊಟಾ ಬ್ಯೂರೊ ಆಫ್ ಕ್ರಿಮಿನಲ್ ಅಪ್ರೆಹೆನ್ಷನ್ ಖಚಿತಪಡಿಸಿದೆ. ಆದರೆ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ವಿವರ ನೀಡಲು ನಿರಾಕರಿಸಿದೆ.
ಬ್ರೂಕ್ಲಿನ್ ಸೆಂಟರ್ ಪೊಲೀಸ್ ಇಲಾಖೆ ಹೇಳಿಕೆ ಪ್ರಕಾರ, ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಚಾಲಕನೊಬ್ಬನನ್ನು ಪೊಲೀಸರು ಹೊರಗೆ ಎಳೆದಿದ್ದರು. ಆತನ ಮೇಲೆ ಹಳೆಯ ವಾರಂಟ್ ಒಂದು ಇರುವುದು ಕಂಡುಬಂದ ಬಳಿಕ ಅವನನ್ನು ವಶಕ್ಕೆ ಪಡೆದುಕೊಳ್ಳಲು ಪ್ರಯತ್ನಿಸಲಾಯಿತು. ಆದರೆ ಆತ ತಪ್ಪಿಸಿಕೊಂಡು ಕಾರಿನತ್ತ ಓಡಿದ್ದರಿಂದ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿದರು. ಆತ ಸ್ಥಳದಲ್ಲಿಯೇ ಮೃತಪಟ್ಟ. ಕಾರ್ನಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು ಜೀವಕ್ಕೆ ಅಪಾಯವಿಲ್ಲದ ರೀತಿಯಲ್ಲಿ ಗಾಯಗೊಂಡರು. ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು.
ಇದು ಜನಾಂಗೀಯ ದ್ವೇಷದಿಂದ ನಡೆದ ಹತ್ಯೆ ಎಂದು ಬ್ರೂಕ್ಲಿನ್ ಸೆಂಟರ್ ಎದುರು ಹಾಜರಾದ ನೂರಾರು ಮಂದಿ ಪೊಲೀಸರೊಂದಿಗೆ ಘರ್ಷಣೆಗೆ ಮುಂದಾದರು.
-
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications