ಕ್ರಿಸ್ಮಸ್ ಮುಂಜಾನೆ ವಾಹನ ಸ್ಫೋಟ: ಭಯೋತ್ಪಾದನಾ ಕೃತ್ಯ ಶಂಕೆ
ವಾಷಿಂಗ್ಟನ್, ಡಿಸೆಂಬರ್ 26: ಅಮೆರಿಕದ ನಾಶ್ವಿಲ್ಲೆಯಲ್ಲಿ ಕ್ರಿಸ್ಮಸ್ ದಿನದ ಬೆಳಿಗ್ಗೆ ನಿಲ್ಲಿಸಲಾಗಿದ್ದ ವಾಹನವೊಂದು ಸ್ಫೋಟಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಇದು ಉದ್ದೇಶಪೂರ್ವಕ ಕೃತ್ಯ ಎಂದು ಪೊಲೀಸರು ಹೇಳಿದ್ದಾರೆ.
ನಾಶ್ವಿಲ್ಲೆ ಪಟ್ಟಣದ ಪ್ರವಾಸಿ ಪ್ರದೇಶದಲ್ಲಿ ಬೆಳಿಗ್ಗೆ 6ರ ವೇಳೆ ವಾಹನವನ್ನು ಕಂಡಾಗ ತುರ್ತು ಪ್ರತಿಕ್ರಿಯೆಯಾಗಿ ಗುಂಡು ಹಾರಿಸಲಾಯಿತು ಎಂದು ಪೊಲೀಸ್ ವಕ್ತಾರ ಡಾನ್ ಆರೊನ್ ತಿಳಿಸಿದ್ದಾರೆ. ಅನುಮಾನಾಸ್ಪದ ಅಂಶ ಏನಿತ್ತು ಎಂಬ ಬಗ್ಗೆ ಅವರು ವಿವರಣೆ ನೀಡಿಲ್ಲ.
ಮೋಟಾರ್ ಹೋಮ್ ವಾಹನವನ್ನು ಗಮನಿಸಿದ ಬಗೆ ನೋಡಿ ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆ ಮಾಡಲಾಯಿತು. ಆದರೆ ಬಾಂಬ್ ನಿಷ್ಕ್ರಿಯ ತಂಡ ಆಗಮಿಸುವ ಮೊದಲೇ ವಾಹನ ಸ್ಫೋಟಗೊಂಡಿತು ಎಂದು ಅವರು ಹೇಳಿದ್ದಾರೆ.

'ಈ ಸ್ಫೋಟವು ಉದ್ದೇಶಪೂರ್ವಕ ಕೃತ್ಯ ಎನ್ನುವುದು ನಮ್ಮ ಅನಿಸಿಕೆ. ಇದು ಬಹಳ ಮಹತ್ವದ ಘಟನೆ. ಎಫ್ಬಿಐ, ಆಲ್ಕೋಹಾಲ್ ಬ್ಯೂರೋ, ಅಗ್ನಿಶಾಮಕ ದಳ, ಸ್ಫೋಟಕ ದಳ ಸೇರಿದಂತೆ ವಿವಿಧ ಪ್ರಮುಖ ವಿಭಾಗಗಳೊಂದಿಗೆ ಸೇರಿ ಕೆಲಸ ಮಾಡುತ್ತಿದ್ದೇವೆ' ಎಂದು ತಿಳಿಸಿದ್ದಾರೆ.
ಅನುಮಾನಾಸ್ಪದ ರೀತಿಯಲ್ಲಿ ನಿಲ್ಲಿಸಿದ್ದ ವಾಹನ ಸ್ಫೋಟಗೊಂಡಿರುವುದು ಪೊಲೀಸರನ್ನು ಗುರಿಯನ್ನಾಗಿಸಿ ನಡೆದ ದಾಳಿ ಇರಬಹುದು. ಈ ಸ್ಫೋಟದ ಸ್ವರೂಪವನ್ನು ಗಮನಿಸಿದರೆ ಭಯೋತ್ಪಾದನಾ ಕೃತ್ಯ ಎನಿಸುತ್ತದೆ ಎಂದು ಹೇಳಿದ್ದಾರೆ. ಸ್ಫೋಟಕ್ಕೂ ಮುನ್ನ ವಾಹನವನ್ನು ನೋಡಿದ ಪೊಲೀಸರು ಸಮೀಪದಲ್ಲಿನ ಎಲ್ಲ ಮನೆಗಳಿಗೂ ತೆರಳಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದರು. ಪಾದಚಾರಿಗಳು ಅದರತ್ತ ತೆರಳುವುದನ್ನು ತಡೆದಿದ್ದರು.
ಸ್ಫೋಟದಿಂದ ಒಬ್ಬ ಪೊಲೀಸ್ ಅಧಿಕಾರಿಯ ಕಾಲಿಗೆ ಗಾಯವಾಗಿದೆ. ಅವರಿಗೆ ತಾತ್ಕಾಲಿಕ ಶ್ರವಣ ದೋಷ ಉಂಟಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಇತರೆ ಕೆಲವು ವಾಹನಗಳಿಗೂ ಬೆಂಕಿ ಹೊತ್ತುಕೊಂಡಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications