ಬಾನಿಗೆ ಹಾರಲಿದೆ ‘ಕನಸಿನ ಹಕ್ಕಿ’!ಸಕಲ ಸಿದ್ಧತೆ ನಡೆಸಿದೆ ‘ನಾಸಾ’..!
ಮರಳಿ ಯತ್ನವ ಮಾಡು, ಮರಳಿ ಯತ್ನವ ಮಾಡು ಎನ್ನುವಂತೆ 'ನಾಸಾ' ತನ್ನ ಪ್ರಯತ್ನಗಳನ್ನ ಬಿಡದೆ ಪಟ್ಟು ಹಾಕಿ ಕೂತಿದೆ. ಇದೇ ಮೊದಲ ಬಾರಿ ಭೂಮಿ ಬಿಟ್ಟು ಬೇರೆ ಗ್ರಹದಲ್ಲಿ ಹೆಲಿಕಾಪ್ಟರ್ ಹಾರಿಸಲು ಸಜ್ಜಾಗಿರುವ 'ನಾಸಾ'ಗೆ ಮೇಲಿಂದ ಮೇಲೆ ಕಷ್ಟಗಳು ಎದುರಾಗುತ್ತಿವೆ. ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್ 7 ರಂದು ನಾಸಾ ಹೆಲಿಕಾಪ್ಟರ್ ಮಂಗಳ ಗ್ರಹದ ಮೇಲೆ ಮೊದಲ ಹಾರಾಟ ನಡೆಸಬೇಕಿತ್ತು.
ಆದರೆ ಅದು ನಡೆಯಲಿಲ್ಲ, ನಾಸಾ ಹೆಲಿಕಾಪ್ಟರ್ ಹಾರಾಟ ನಡೆಸುವ ದಿನವನ್ನು ಮತ್ತೆ ಮುಂದೂಡಿತ್ತು. ಏಪ್ರಿಲ್ 11ರಂದು ಮತ್ತೊಮ್ಮೆ ಹೆಲಿಕಾಪ್ಟರ್ ಹಾರಾಟಕ್ಕೆ ಸಿದ್ಧತೆ ನಡೆದಿತ್ತು. ಆದರೆ ಆಗಲೂ ತಾಂತ್ರಿಕ ಸಮಸ್ಯೆಯಿಂದ ಏಪ್ರಿಲ್ 14ಕ್ಕೆ ಟೈಂ ಫಿಕ್ಸ್ ಮಾಡಿತ್ತು ನಾಸಾ. ಕಡೆಗೆ ಏಪ್ರಿಲ್ 14ರ ಡೇಟ್ ಫ್ಲಾಪ್ ಆಗಿ, ಈಗ ಏಪ್ರಿಲ್ 19ರಂದು ಹೆಲಿಕಾಪ್ಟರ್ ಹಾರಾಟಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈಗಾಗಲೇ ಹೆಲಿಕಾಪ್ಟರ್ನ ರೆಕ್ಕೆಗಳನ್ನು ಪರಿಶೀಲನೆ ಮಾಡಿರುವ ವಿಜ್ಞಾನಿಗಳು, ಪೆರ್ಸೆವೆರನ್ಸ್ ರೋವರ್ನ ಸಹಾಯದಿಂದ ಮಂಗಳನ ಮೇಲೆ ಹೆಲಿಕಾಪ್ಟರ್ ಹಾರಿಸಲಿದ್ದಾರೆ.

ಏನೋ, ಏನೋ ಆಗಿದೆ..!
ಮಂಗಳ ಗ್ರಹದ ಮೇಲೆ ವಾತಾವರಣವೇ ಒಂದು ದೊಡ್ಡ ಸವಾಲು. ಅಲ್ಲಿ ಜೋರಾಗಿ ಬೀಸುವ ಗಾಳಿಯಿಂದ ರಕ್ಷಣೆ ಪಡೆದು ಹಾರಾಟ ನಡೆಸುವುದೇ ನಾಸಾ ಹೆಲಿಕಾಪ್ಟರ್ಗೆ ದೊಡ್ಡ ಟಾಸ್ಕ್. ಆದರೆ ಈಗ ಹೆಲಿಕಾಪ್ಟರ್ನ ಬ್ಲೇಡ್ನಲ್ಲೇ ದೊಡ್ಡ ಸಮಸ್ಯೆ ಎದುರಾಗಿದೆ. ನಾಸಾ ಅಂದುಕೊಂಡಿದ್ದಕ್ಕಿಂತ ಕಡಿಮೆ ವೇಗದಲ್ಲಿ ಹೆಲಿಕಾಪ್ಟರ್ನ ವೇಗ ಇದ್ದು, ತುಂಬಾ ಕಡಿಮೆ ಸಮಯದಲ್ಲಿ ನೆಲಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿಯೇ ನಾಸಾ ಮತ್ತೆ ಹೆಲಿಕಾಪ್ಟರ್ ಹಾರಾಟವನ್ನು ಮುಂದೂಡಿದೆ. ಏಪ್ರಿಲ್ 19ಕ್ಕೆ ಮತ್ತೊಮ್ಮೆ ಮುಹೂರ್ತ ಫಿಕ್ಸ್ ಆಗಿದೆ.

ಇದು ತಮಾಷೆ ಅಲ್ಲವೇ ಅಲ್ಲ..!
ಭೂಮಿ ಹೊರಗೆ ಮೊಟ್ಟ ಮೊದಲ ಬಾರಿಗೆ ಹೆಲಿಕಾಪ್ಟರ್ ಹಾರುತ್ತಿದೆ. ಹಾಗಂತ ಇದು ತಮಾಷೆಯ ವಿಚಾರ ಅಲ್ಲವೇ ಅಲ್ಲ. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ. ಮಂಗಳ ಗ್ರಹದ ಮೇಲೆ ಭೂಮಿ ಮೇಲೆ ಬೀಳುವ ಶೇಕಡಾ 50ರಷ್ಟು ಸೂರ್ಯನ ಬೆಳಕು ಕೂಡ ಬೀಳುವುದಿಲ್ಲ. ಹೀಗಿರುವಾಗ ಹೆಲಿಕಾಪ್ಟರ್ ಸೂರ್ಯ ಹಾಗೂ ಬ್ಯಾಟರಿ ಶಕ್ತಿ ಆಧರಿಸಿ ಹಾರುವುದು ಕಷ್ಟ ಕಷ್ಟ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲೂ ಹಾರಲು ಸಜ್ಜಾಗಿ ನಿಂತಿದೆ ನಾಸಾ ಸಂಸ್ಥೆಯ ಹೆಲಿಕಾಪ್ಟರ್. ರಾತ್ರಿ ಹೊತ್ತಲ್ಲಿ ಮೈನಸ್ 90 ಡಿಗ್ರಿ, ಎಂದರೆ ಹಿಮಾಲಯಕ್ಕಿಂತಲೂ ಕಡಿಮೆ ತಾಪಮಾನದಲ್ಲಿ ನಾಸಾ ಹೆಲಿಕಾಪ್ಟರ್ ಬದುಕಬೇಕಿದೆ.

200 ಕೋಟಿ ವರ್ಷಗಳಷ್ಟು ಹಳೇ ಕೆರೆ
ಹೌದು, ಪೆರ್ಸೆವೆರನ್ಸ್ ರೋವರ್ ಲ್ಯಾಂಡ್ ಆಗಿರುವುದು ಮಂಗಳನ ‘ಜೆಝೀರೋ' ಕುಳಿಯ ಮೇಲೆ. ಅಷ್ಟಕ್ಕೂ ಇದು ಕುಳಿ ಅಥವಾ ದೊಡ್ಡ ಗುಂಡಿ ಅಲ್ಲ. 200 ಕೋಟಿ ವರ್ಷಗಳ ಹಿಂದೆ ಇಲ್ಲೊಂದು ಕೆರೆಯೇ ಇತ್ತು. ಮಂಗಳ ಗ್ರಹದ ಬಹುತೇಕ ಪ್ರದೇಶಗಳಿಗೆ ಇದೇ ಕುಳಿಯಿಂದ ನೀರು ಹರಿಯುತ್ತಿತ್ತು. ಜೀವಿಗಳು ಈ ನೀರನ್ನು ಬಳಸಿ, ಬದುಕು ಕಟ್ಟಿಕೊಂಡಿದ್ದವು ಎಂಬ ವಾದವಿದೆ. ಆದರೆ ಕಾಲ ಕ್ರಮೇಣ ಆ ಕೆರೆ ನಾಶವಾಗಿ ಹೋಗಿದೆ ಎನ್ನುತ್ತಾರೆ ವಿಜ್ಞಾನಿಗಳು. ನಾಸಾ ವಿಜ್ಞಾನಿಗಳ ವಾದಕ್ಕೆ ಬಲ ನೀಡುವಂತೆ, ‘ಜೆಝೀರೋ' ಕುಳಿ ಆಚೆ ಮತ್ತು ಈಚೆ ನೀರು ಬರಲು ಹಾಗೂ ಹೋಗಲು ದಾರಿ ಕೂಡ ಕಾಣುತ್ತದೆ. ಹೀಗಾಗಿ ಅಲ್ಲಿ ಜೀವಿಗಳು ಬದುಕಿರಬಹುದು ಅಥವಾ ಮೂಳೆ, ಪಳಿಯುಳಿಕೆ ಸಿಗಬಹುದು ಎಂಬ ವಿಶ್ವಾಸ ನಾಸಾ ವಿಜ್ಞಾನಿಗಳಿಗೆ ಇದೆ.

ಮಂಗಳನ ಮಣ್ಣು ತರಲಿದೆ ‘ನಾಸಾ’
ಮೊದಲ ಬಾರಿ ಮಂಗಳನ ಅಂಗಳಕ್ಕೆ ನುಗ್ಗಿ ಅಧ್ಯಯನ ನಡೆಸಿದ್ದ ಕೀರ್ತಿ ಹೊಂದಿರುವ ನಾಸಾ ಮತ್ತೊಂದು ಸವಾಲನ್ನು ಗೆದ್ದಿದೆ. ಪೆರ್ಸೆವೆರನ್ಸ್ ರೋವರ್ ಇದೀಗ ಲ್ಯಾಂಡ್ ಆಗಿರುವುದು ಮಂಗಳನ ‘ಜೆಝೀರೋ' ಕುಳಿ ಮೇಲೆ. ಈವರೆಗೂ ಯಾರೂ ಈ ಸಾಹಸ ಮಾಡಿರಲಿಲ್ಲ. ಏಕೆಂದರೆ ‘ಜೆಝೀರೋ' ಕುಳಿಯಲ್ಲಿ ತನ್ನ ಬಿಡಾರ ಹೂಡುವುದು ಯಾವುದೇ ದೇಶಕ್ಕೂ ಸಾಧ್ಯವಿರದ ಮಾತು. ಅಲ್ಲಿನ ಇಕ್ಕಟ್ಟಾದ ಪರಿಸ್ಥಿತಿ ಹಾಗೂ ವ್ಯತಿರಿಕ್ತ ವಾತಾವರಣ ಅಧ್ಯಯನಕ್ಕೆ ಸಹಕಾರಿ ಆಗಿರಲಿಲ್ಲ. ಆದರೆ ಇದನ್ನು ಸವಾಲಾಗಿ ಸ್ವೀಕರಿಸಿದ್ದ ನಾಸಾ, ತನ್ನ ರೋವರ್ ಲ್ಯಾಂಡ್ ಮಾಡುವಲ್ಲಿ ಯಶಸ್ಸು ಕಂಡಿದೆ.
Recommended Video

6 ಚಕ್ರದ ರೋವರ್..!
ಪೆರ್ಸೆವೆರನ್ಸ್ ಭೂಮಿಯಿಂದ ಉಡಾವಣೆಯಾದಾಗ ಸುಮಾರು 1 ಟನ್ ತೂಕವಿತ್ತು. ಹಾಗೂ ರೋವರ್ ಎತ್ತರ 7.3 ಅಡಿಗಳಷ್ಟಾಗಿತ್ತು. ಉದ್ದ 6.7 ಅಡಿ ಇದ್ದು, ಮಂಗಳನ ಮೇಲೆ ಅಧ್ಯಯನ ನಡೆಸಲು ಅನುಕೂಲ ಆಗಲಿದೆ. ಪೆರ್ಸೆವೆರನ್ಸ್ ಕೈಗಳು ಕೂಡ 6 ಅಡಿಗಿಂತ ಉದ್ದವೇ ಇದೆ. ಮತ್ತು 6 ಚಕ್ರಗಳನ್ನು ಪೆರ್ಸೆವೆರನ್ಸ್ ಹೊಂದಿದ್ದು, 2020ರ ಜುಲೈನಲ್ಲಿ ಭೂಮಿಯಿಂದ ಬಾಹ್ಯಾಕಾಶಕ್ಕೆ ಹಾರಿತ್ತು. ಇದೀಗ ಮಂಗಳ ಗ್ರಹದ ಮೇಲೆ ಏಕಾಂಗಿಯಾಗಿ ಅಧ್ಯಯನ ನಡೆಸಲಿದೆ. ಉದ್ದವಾದ ರೊಬೊಟಿಕ್ ಕ್ರೇನ್ ಹಾಗೂ ಡ್ರಿಲ್ಲರ್ ‘ಪೆರ್ಸೆವೆರನ್ಸ್'ಗೆ ಸಹಾಯ ಮಾಡಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications